No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಪರಿಸರ ಸಂಘಟನೆಗಳ ಧ್ವನಿಗೆ ಸರ್ಕಾರದ ನಿರ್ಲಕ್ಷ್ಯ | ನ್ಯಾಯಾಲಯದ ಮೊರೆ ಅನಿವಾರ್ಯ | ಅನಂತಹೆಗಡೆ ಅಶಿಸರ ಕಳವಳ

kalpa News by kalpa News
December 24, 2024
in ಸಾಗರ
0
ಪರಿಸರ ಸಂಘಟನೆಗಳ ಧ್ವನಿಗೆ ಸರ್ಕಾರದ ನಿರ್ಲಕ್ಷ್ಯ | ನ್ಯಾಯಾಲಯದ ಮೊರೆ ಅನಿವಾರ್ಯ | ಅನಂತಹೆಗಡೆ ಅಶಿಸರ ಕಳವಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕರ್ನಾಟಕ ಪವರ್ ಕಾರ್ಪೋರೇಶನ್ ಶರಾವತಿ ಕಣಿವೆಯಲ್ಲಿ ಭೂಗತ ಬೃಹತ್ ಜಲವಿದ್ಯುತ್ ಯೋಜನೆಯ ತಯಾರಿಯಲ್ಲಿದ್ದು ಪರಿಸರ ಸಂಘಟನೆಗಳು ಹೊನ್ನಾವರ ಮತ್ತು ಸಾಗರಗಳಲ್ಲಿ ಜನರ ಅಹವಾಲು ಸಭೆ ನಡೆಸಲು ಆಗ್ರಹ ಮಾಡುತ್ತಲೇ ಇವೆ. ಅಲ್ಲಿ ಬೆಂಗಳೂರಲ್ಲಿ ರಾಜ್ಯ ಅರಣ್ಯ ಇಲಾಖೆ ಶರಾವತಿ ಕಣಿವೆ ಧ್ವಂಸ ಮಾಡುವ ಜಲವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡಿದೆ. ಇಂತಹ ಪಾರಿಸಾರಿಕ ವಿಕೃತಿ ಕುರಿತು ಪರಿಸರ ತಜ್ಞರು ಸೇರಿದಂತೆ ವನವಾಸಿಗಳು, ರೈತರು ಆತಂಕಕ್ಕೊಳಗಾಗುವಂತೆ ಮಾಡಿದೆ ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಕಳವಳ ವ್ಯಕ್ತಪಡಿಸಿದ್ದಾರೆ.

ಶಿರಸಿಯಲ್ಲಿ ನಡೆದ ರಾಜ್ಯ ಪರಿಸರ ಸಮ್ಮೇಳನ, ಮೂಡಬಿದ್ರಿಯ ಕೆರೆ ಸಮ್ಮೇಳನ, ಹೊಸನಗರ, ಸಾಗರದ ಮಲೆನಾಡು ಪರಿಸರ ಸಮಾವೇಶಗಳಲ್ಲಿ ಶರಾವತಿ ಕಣಿವೆ ಉಳಿಸಿ ನಿರ್ಣಯ ಕೈಗೊಳ್ಳಲಾಗಿದೆ. 4 ತಿಂಗಳು ಹಿಂದೆ ಶಿವಮೊಗ್ಗಾದಲ್ಲಿ ಅರಣ್ಯ ಸಚಿವರು, ರಾಜ್ಯ ಅರಣ್ಯ ಅಧಿಕಾರಿಗಳ ಸಭೆಯಲ್ಲಿ ಶರಾವತಿ ಕಣಿವೆಯಲ್ಲಿ ಬೃಹತ್ ಯೋಜನೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಲಾಗಿದೆ. ಆದಾಗ್ಯೂ ಅರಣ್ಯ ಪರವಾನಿಗೆ ಪ್ರಸ್ತಾವನೆಗೆ ಭಾರತ ಸರ್ಕಾರದ ಅರಣ್ಯ ಮಂತ್ರಾಲಯದ ಅನುಮತಿ ಪಡೆಯಲು ಗಡಿಬಿಡಿ ತಯಾರಿ ನಡೆದಿದೆ. ಈಗಾಗಲೇ ಬೃಹತ್ ಜಲವಿದ್ಯುತ್ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ.
ನಾಲ್ಕು ವರ್ಷ ಹಿಂದೆ ವಿಜ್ಞಾನಿಗಳು ಶರಾವತಿ ಕಣಿವೆ ಧಾರಣ ಸಾಮರ್ಥ್ಯ ಮುಗಿದಿದೆ ಎಂದು ಎತ್ತಿ ಹೇಳಿದ್ದಾರೆ, ಮಂಗನ ಕಾಯಿಲೆಯಿಂದ ಜೋಗದ ಸುತ್ತಲಿನ ಹಳ್ಳಿಗಳಲ್ಲಿ ಪ್ರತಿವರ್ಷ ಸಾಗರ-ಸಿದ್ದಾಪುರ ತಾಲೂಕುಗಳಲ್ಲಿ ಜನ ಸಾಯುತ್ತಿದ್ದಾರೆ. ಶರಾವತಿ ಕಣಿವೆ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಾಮಾನ್ಯವಾಗಿದೆ. ಶರಾವತಿ ನದಿ ಸಮುದ್ರ ಸೇರುವ ಸ್ಥಳದಿಂದ ಗೇರುಸೊಪ್ಪಾದವರೆಗೆ ನದಿಯಲ್ಲಿ ಉಪ್ಪುನೀರು ಪ್ರತಿವರ್ಷ ಮೇಲೇರುತ್ತಿದೆ. ಭೂಗತ ಯೋಜನೆ ಜಾರಿಯಿಂದ ಗೇರುಸೊಪ್ಪಾ ಡ್ಯಾಂನಿಂದ ಬೇಸಿಗೆಯಲ್ಲಿ ನದಿಗೆ ನೀರೇ ಬರುವುದಿಲ್ಲ. ಗೇರುಸೊಪ್ಪಾದಿಂದ ಹೊನ್ನಾವರದವರೆಗೆ ಶರಾವತಿ ನದಿ ಉಪ್ಪು ನೀರಿನ ನದಿ ಆಗಲಿದೆ ಎಂಬ ಸಂಗತಿ ರೈತರಿಗೆ, ಮೀನುಗಾರರಿಗೆ ತಿಳಿದೇ ಇಲ್ಲ. ಆದರೆ ಈ ಬಗ್ಗೆ ಗೊತ್ತಿದ್ದೂ, ಜನಪ್ರತಿನಿಧಿಗಳು ಇತ್ತೀಚಿನ ಅಧಿವೇಶನದಲ್ಲಿ ಧ್ವನಿ ಎತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.

Also read: Herbalife India Won Prestigious IIT Madras CSR Award 2024

ಭಾರತೀಯ ವಿಜ್ಞಾನ ಸಂಸ್ಥೆ ೨೧ನೇ ಶತಮಾನದ ಆರಂಭದಲ್ಲೇ ಶರಾವತಿ ನದಿ ನೀರಿನ ಕಣಿವೆ ಪರಿಸ್ಥಿತಿ ಬಗ್ಗೆ ಸಮಗ್ರ ವರದಿ ನೀಡಿದೆ. ಈ ವರದಿಯನ್ನು ಕರ್ನಾಟಕ ಪವರ್ ಕಾರ್ಪೋರೇಶನ್ ಕಪಾಟಿನಲ್ಲಿ ಬೀಗ ಹಾಕಿ ಭದ್ರವಾಗಿ ಇಟ್ಟಿದೆ. ಪರಿಸರ ಸಂಘ ಸಂಸ್ಥೆಗಳು, ರೈತರ ವಿರೋಧ, ಪ್ರತಿಭಟನೆ ಬಗ್ಗೆ ಕೆ.ಪಿ.ಸಿ. ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯ ಅರಣ್ಯ ಪರಿಸರ ಸಚಿವರು ಯೋಜನೆಗೆ ಬೆಂಬಲ ನೀಡಿದ್ದಾರೆಯೇ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಉ.ಕ. ಜಿಲ್ಲಾ ಉಸ್ತುವಾರಿ ಸಚಿವರೇ, ತಮ್ಮ ಕ್ಷೇತ್ರದ ಗಂಭೀರ ಜ್ವಲಂತ ಸಮಸ್ಯೆ ಇದು.ಹಾಗಾಗಿ, ಹೊನ್ನಾವರ- ಕುಮಟಾ ಶಾಸಕರು ಕೆನರಾ ಲೋಕ ಸಭಾ ಸದಸ್ಯರು ಶರಾವತಿ ಕಣಿವೆ ರಕ್ಷಣೆಗೆ, ನದಿ ತೀರದ ರೈತರು, ಮೀನುಗಾರರ ಉಳಿವಿಗೆ ಪಕ್ಷಾತೀತವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

ಮಲೆನಾಡಿನ ಕರಾವಳಿಯ ರೈತರು, ವನವಾಸಿಗಳು, ಮೀನುಗಾರರ ಹಕ್ಕೊತ್ತಾಯವಿದ್ದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ಅರಣ್ಯ ಸಚಿವರು ಗೇರುಸೊಪ್ಪಾಕ್ಕೆ ಭೇಟಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅರಣ್ಯನಾಶ, ಗಣಿಗಾರಿಕೆ, ಬೃಹತ್ ಅಣೆಕಟ್ಟು, ಬೃಹತ್ ಕಾಮಗಾರಿಗಳು, ಹೈವೇಗಳು, ತಂತಿ ಮಾರ್ಗಗಳು, ಜನಸಂಖ್ಯಾ ಒತ್ತಡ, ಒತ್ತುವರಿಯಿಂದ ಈಗಾಗಲೇ ಶರಾವತಿ ಕಣಿವೆ ಛಿದ್ರ ಛಿದ್ರವಾಗಿದೆ, ಸಮಗ್ರ ಸಂರಕ್ಷಣಾ ತಂತ್ರವಾಗಿ ಅರಣ್ಯ ಇಲಾಖೆ ಶರಾವತಿ ಅಭಯಾರಣ್ಯ ವಿಸ್ತರಣೆ ಮಾಡಿದೆ. ಈಗ ಭೂಗತ ಜಲವಿದ್ಯುತ್ ಯೋಜನೆ ಕಣಿವೆಯ ಉಳಿವಿಗೆ ಆತಂಕ ತಂದಿದೆ ಎಂದು ವಿಜ್ಞಾನಿಗಳು ಪರಿಸರ ಕಾರ್ಯಕರ್ತರು ಅಭಿಪ್ರಾಯ ನೀಡಿದ್ದಾರೆ. ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

2025 ಜನವರಿ 2ನೇ ವಾರದಲ್ಲಿ ಗೇರುಸೊಪ್ಪಾ ಮತ್ತು ಹೊನ್ನಾವರಗಳಲ್ಲಿ ಜಾಗೃತಿ ಸಭೆ ಜಾಥಾ ನಡೆಯಲಿದೆ ಎಂದು ವೃಕ್ಷ ಆಂದೋಲನ ತಿಳಿಸಿದೆ.

ಅನಂತ ಹೆಗಡೆ ಅಶೀಸರ, ಪ್ರೊ ಬಿ.ಎಂ. ಕುಮಾರ ಸ್ವಾಮಿ, ಡಾ.ಟಿ.ವಿ.ರಾಮಚಂದ್ರ, ಡಾ.ವೈ.ಬಿ.ರಾಮಕೃಷ್ಣ, ಡಾ. ಪ್ರಕಾಶ್ ಮೇಸ್ತ, ಡಾ.ಕೇಶವ ಹೆಚ್. ಕೊರ್ಸೆ, ಡಾ. ವಾಮನ್ ಆಚಾರ್ಯ, ನಾಗೇಶ್ ಹೆಗಡೆ, ಡಾ.ಬಾಲಚಂದ್ರ ಸಾಯಿಮನೆ, ಡಾ. ಶ್ರೀಪತಿ,
ಕೆ. ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ ಮುಂತಾದ ಪರಿಸರ ತಜ್ಞರು, ಸಂಸ್ಥೆಗಳ ಗಣ್ಯರು ಸರ್ಕಾರದ ಮುಂದೆ ಪುನಃ ಹಕ್ಕೊತ್ತಾಯ ಮಂಡಿಸಿದ್ದಾರೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Herbalife India Won Prestigious IIT Madras CSR Award 2024

Next Post

MIT Manipal organized a Guest Talk on AI and the Future of the Humanity

kalpa News

kalpa News

Next Post
MIT Manipal organized a Guest Talk on AI and the Future of the Humanity

MIT Manipal organized a Guest Talk on AI and the Future of the Humanity

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL