ಕಲ್ಪ ಮೀಡಿಯಾ ಹೌಸ್ | ಸಾಗರ |
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಾಗರ-ಹೊಸನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಹರತಾಳು ಹಾಲಪ್ಪ MLA Harathalu Halappa ಇಂದು ನಾಮಪತ್ರ ಸಲ್ಲಿಸಿದರು.
ಭಾರೀ ಸಂಖ್ಯೆಯ ಅಭಿಮಾನಿಗಳ ಜೊತೆಯಲ್ಲಿ ಮೆರವಣಿಗೆಯಲ್ಲಿ ಸಾಗಿದ ಹಾಲಪ್ಪ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಬೃಹತ್ ಮೆರವಣಿಗೆ, ಪುಷ್ಟವೃಷ್ಠಿ
ಇನ್ನು, ಐತಿಹಾಸಿಕ ಪ್ರಸಿದ್ಧ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹಾಲಪ್ಪನವರು, ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ತೆರಳಿದರು. ಮಾರ್ಗದುದ್ದಕ್ಕೂ ಸುಮಾರು 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನೆರೆದಿದ್ದರು. ಈ ಮೂಲಕ ವಿರೋಧಿಗಳಿಗೆ ಸಂದೇಶ ರವಾನಿಸುವ ಶಕ್ತಿ ಪ್ರದರ್ಶನವೂ ಆಗಿತ್ತು.
Also read: ಪ್ರಾಯೋಗಿಕ ಜ್ಞಾನ ಸಂಪಾದಿಸುವತ್ತ ಗಮನ ಹರಿಸಿ: ಡಾ. ಬಾಲಸುಬ್ರಹ್ಮಣ್ಯಮೂರ್ತಿ ಸಲಹೆ
ಇನ್ನು, ಮೆರವಣಿಗೆ ಸಾಗಿದ ಮಾರ್ಗದ ಉದ್ದಕ್ಕೂ ಅಭಿಮಾನಿಗಳು ಹಾಲಪ್ಪ ಅವರ ಮೇಲೆ ಪುಷ್ಟವೃಷ್ಠಿ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಹೂವುಗಳನ್ನು ಜನರ ಮೇಲೆ ಹಾಕುವ ಮೂಲಕ ಹಾಲಪ್ಪನವರು ಕೃತಜ್ಞತೆ ಸಲ್ಲಿಸುತ್ತಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್, ಮಾಜಿ ಶಾಸಕರಾದ ಬಿ. ಸ್ವಾಮಿರಾವ್, ಮಂಡಲ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಲೋಕನಾಥ್ ಬಿಳಿಸಿರಿ, ಗಣಪತಿ ಬಿಳಗೋಡು, ಡಾ. ರಾಜನಂದಿನಿ ಕಾಗೋಡು, ರತ್ನಾಕರ್ ಹೊನಗೋಡು, ಪಕ್ಷದ ವಿವಿಧ ಹಂತದ ನಾಯಕರು, ಚುನಾಯಿತ ಪ್ರತಿನಿಧಿಗಳು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post