ಕಲ್ಪ ಮೀಡಿಯಾ ಹೌಸ್
ಸಾಗರ: ನಿನ್ನೆ ಸುರಿದ ಅತಿಯಾದ ಮಳೆಯಿಂದಾಗಿ, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಸಾರ್ವಜನಿಕರು ಪ್ರಾಣಾಪಾಯದಲ್ಲಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ತಾಲ್ಲೂಕು ಆಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಸಾರ್ವಜನಿಕರ ರಕ್ಷಣೆಗೆ ಸಹಕರಿಸಬೇಕು ಎಂದು ಶಾಸಕ ಹೆಚ್.ಹಾಲಪ್ಪ ಕರೆ ನೀಡಿದ್ದಾರೆ.
ಸಹಾಯಕ್ಕಾಗಿ ಸಂಪರ್ಕಿಸಿ:
ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ, ಯಡಜಿಗಳೇಮನೆ ಹಾಸ್ಟೆಲ್ನಲ್ಲಿ ಆಶ್ರಯ ಮತ್ತು ಊಟದ ವ್ಯವಸ್ಥೆ ಕಲ್ಪಿಸಲು, ಪುನರ್ವಸತಿ ಕೇಂದ್ರ ತೆರೆಯಲಾಗಿದೆ. ಹಾಗೂ ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಶಾಸಕ ಹೆಚ್.ಹಾಲಪ್ಪ ನವರು ವಿನಂತಿಸಿಕೊಂಡಿದ್ದಾರೆ.
ಸಹಾಯವಾಣಿಗಾಗಿ ಸಂಪರ್ಕಿಸಿ: ಮದನ್ ನಗರಸಭೆ ಅಧಿಕಾರಿಗಳು: 9480010111
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post