ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬ್ಯಾಕೋಡು ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಶಾಸಕ ಎಚ್. ಹಾಲಪ್ಪ ಮನವಿ ಮಾಡಿದ್ದಾರೆ.
ಈ ಕುರಿತಂತೆ ಗೃಹ ಸಚಿವರನ್ನು ಭೇಟಿಯಾಗಿ ಚರ್ಚಿಸಿದ ಹಾಲಪ್ಪನವರು, ಬ್ಯಾಕೋಡು ಗ್ರಾಮದಲ್ಲಿ ನಡೆದ ಸುಂದರ್ ಶೇಟ್ ಹಾಗೂ ಸುಲೋಚನ ದಂಪತಿಗಳ ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ, ನ್ಯಾಯ ದೊರಕಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಪ್ರಸನ್ನ ಕರೆಕೈ, ವಕೀಲ ರಾಮಚಂದ್ರ, ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post