ಕಲ್ಪ ಮೀಡಿಯಾ ಹೌಸ್ | ಸಾಗರ |
ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ. ತಿಮ್ಮಪ್ಪ ಹೆಗ್ಡೆ ನಿಧನಕ್ಕೆ ಶಾಸಕ ಹೆಚ್. ಹಾಲಪ್ಪ MLA Halappa ಸಂತಾಪ ಸೂಚಿಸಿದ್ದಾರೆ.
ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗ್ಡೆ ಯವರು, 1978 ಮತ್ತು 1983 ರಲ್ಲಿ ಸಾಗರ ಕ್ಷೇತ್ರದ ಶಾಸಕರಾಗಿ, ಸಾಗರದ ಅಪ್ಸ್ಕೋಸ್, ತೋಟಗಾರ್ಸ್, ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು ಹಾಗೂ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿ, ಕೇಂದ್ರ ಸಾಂಬಾರು ಮಂಡಳಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಎಲ್.ಟಿ ತಿಮ್ಮಪ್ಪ ಹೆಗಡೆ ಯವರು, ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಯುವ ಪೀಳಿಗೆಗೆ ಅದರ್ಶ ಪ್ರಾಯರಾಗಿದ್ದರು. ತಿಮ್ಮಪ್ಪ ಹೆಗಡೆ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.
ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಿ, ಕುಟುಂಬಸ್ಥರಿಗೆ, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post