ಕಲ್ಪ ಮೀಡಿಯಾ ಹೌಸ್ | ಸಾಗರ |
ಶಾಸಕ ಹೆಚ್. ಹಾಲಪ್ಪ ಅವರು, ಡಿವೈಎಸ್ಪಿ, ಸಿಪಿಐ ಅವರೊಂದಿಗೆ ತಲ್ವಾರ್ ದಾಳಿಗೊಳಗಾದ ಸುನೀಲ್ ನಿವಾಸದ ಪ್ರದೇಶಕ್ಕೆ ಭೇಟಿ ನೀಡಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಸೂಚಿಸಿದರು.
ಇಂದು ಬೆಳಿಗ್ಗೆ ಸಾಗರದ ಬಿ.ಹೆಚ್ ರಸ್ತೆಯಲ್ಲಿ ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಹಾಗೂ ಆತನ ಸಹಚರರು ತಲ್ವಾರ್ ದಾಳಿ ಯತ್ನ ನೆಡೆಸಿದ ಘಟನೆಯಿಂದ ನಾಗರೀಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಠಿಸುವ ಕೃತ್ಯ ನೆಡೆಸುವವರನ್ನು ವಶಕ್ಕೆ ಪಡೆದು, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದರು. ನಂತರ ಭಜರಂಗದಳದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post