ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಗ್ರಾಮಾಂತರ ಭಾಗದಲ್ಲಿರುವ ದೇವಾಲಯಗಳಲ್ಲಿ ಕಳ್ಳತನ ತಪ್ಪಿಸುವ ಸಲುವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಎಂದು ಗ್ರಾಮಾಂತರ ಪಿಎಸ್’ಐ ಭರತ್ ಕುಮಾರ್ ಸಲಹೆ ನೀಡಿದರು.
ಅಪರಾಧ ತಡೆ ಮಾಸಾಚರಣೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.
ಪ್ರಚಲಿತ ಇಂದಿನ ದಿನಗಳಲ್ಲಿ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪರಾಧವನ್ನು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯವಿದೆ. ಆನ್ ಲೈನ್ ಮೋಸ ಹಾಗೂ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ವಂಚನೆ ಮಾಡುವ ಹಾಗೂ ಇನ್ನಿತರ ರೀತಿಯಲ್ಲಿ ಜನತೆಗೆ ಮೋಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರು ಎಲ್ಲ ರೀತಿಯ ತಿಳುವಳಿಕೆಯನ್ನು ಹೊಂದಿ ಅಪರಾಧವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಬೇಕು ಎಂದರು.
ದೇವಸ್ಥಾನ ಹಾಗೂ ಒಂಟಿ ಮನೆಗಳ ಕಳ್ಳತನಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು ತಮ್ಮ ಮನೆಗಳು ಹಾಗೂ ಗ್ರಾಮದ ದೇವಸ್ಥಾನಗಳಿಗೆ ಹೆಚ್ಚಿನ ಭದ್ರತೆ ಮಾಡಿಕೊಳ್ಳುವುದು ಸಿಸಿ ಕ್ಯಾಮೆರಾಗಳನ್ನು ಹಾಕಿಸಿಕೊಂಡಲ್ಲಿ ಹೆಚ್ಚಿನ ಸುರಕ್ಷತೆ ಮಾಡಿಕೊಂಡಂತಾಗುತ್ತದೆ ಎಂದು ಮನವಿ ಮಾಡಿದರು.
ಎಎಸ್’ಐ ಶಿವಾನಂದಪ್ಪ, ಮಾಳಿಂಗರಾಯ, ಮಶಾಕ್, ಪ್ರಕಾಶ್ ಅಂಬ್ಲಿ, ಗಿರೀಶ್, ವೆಂಕಟೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
(ವರದಿ: ಪವನ್ ಕುಮಾರ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post