ಕಲ್ಪ ಮೀಡಿಯಾ ಹೌಸ್
ಸಾಗರ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಬೆಲೆಬಾಳುವ ಪೋಲೀಸ್ ವಸತಿ ಗೃಹಗಳು ಪಾಳುಬಿದ್ದಿವೆ.
ತಾಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇರುವ ಕೋಟ್ಯಂತರ ರೂ. ಬೆಲೆಬಾಳುವ ಜಾಗದಲ್ಲಿ ನಿರ್ಮಿಸಲಾಗಿರುವ ೫ ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.
ಮದ್ಯವ್ಯಸನಿಗಳ ಆಶ್ರಯ ತಾಣವಾಗಿರುವ ಈ ಪ್ರದೇಶ, ಯಾವುದೇ ಭಯವಿಲ್ಲದೆ ವಸತಿಗೃಹದ ಒಳಗಡೆನೇ ಇವರು ತಮ್ಮ ಅನೈತಿಕ ಚಟುವಟಿಕೆಯನ್ನು ರಾಜಾರೋಷವಾಗಿ ಮಾಡುತ್ತಿದ್ದಾರೆ.
ವಸತಿ ಗೃಹದ ಮುಂದೆ ಬಾನೆತ್ತರಕ್ಕೆ ಗಿಡಗಂಟಿಗಳು ಬೆಳೆದಿದ್ದು, ವಾಸಕ್ಕೆ ಯೋಗ್ಯವಿಲ್ಲದಂತಾಗಿದೆ. ಇಲ್ಲಿನ ಉಪ ಠಾಣೆಯ ಸಿಬ್ಬಂದಿಗಳು ವಸತಿಗೃಹಗಳಿಲ್ಲದೆ ಬೇರೆ ಕಡೆ ಬಾಡಿಗೆ ಮನೆಯಲ್ಲಿ ವಾಸಿಸುವವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ಲಕ್ಷಾಂತರ ರೂಪಾಯಿ ವಸತಿ ಗೃಹಗಳು ಶಿಥಿಲಾವಸ್ಥೆಯಲ್ಲಿದೆ.
ಮುಖ್ಯರಸ್ತೆಯ ಪಕ್ಕದಲ್ಲೇ ಈ ವಸತಿ ಗೃಹಗಳಿದ್ದರೂ ಅಧಿಕಾರಿಗಳು ಇತ್ತಕಡೆ ಗಮನಹರಿಸದೇ ಇರುವುದು ಅಧಿಕಾರಿಗಳ ಜಾಣ ಕುರುಡುತನವಾಗಿದೆ.
ಇನ್ನಾದರೂ ಅಧಿಕಾರಿಗಳು ಇತ್ತ ಗಮನಹರಿಸಿ, ಪುನರ್ನಿರ್ಮಾಣ ಮಾಡಬೇಕು. ಹಾಗೂ ಅನೈತಿಕ ಚಟುವಟಿಕೆ ತಾಣ ದಿಂದ ಮುಕ್ತಗೊಳಿಸಿ, ಸಿಬ್ಬಂದಿಗಳ ವಾಸಕ್ಕೆ ಯೋಗ್ಯ ಸ್ಥಳವನ್ನಾಗಿ ಮಾಡಿಕೊಡಬೇಕು ಎನ್ನು ಸಾರ್ವಜನಿಕರ ಆಗ್ರಹವಾಗಿದೆ.
ವರದಿ: ಪವನ್ ಕುಮಾರ್, ಸಾಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post