ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ತಾಪಂ ಸಭಾಂಗಣದಲ್ಲಿ ಶಾಸಕ ಹೆಚ್. ಹಾಲಪ್ಪ MLA Halappa ಅವರು ತ್ರೈಮಾಸಿಕ ಕೆಡಿಪಿ ಸಭೆ ನೆಡೆಸಿ, ತಾಲ್ಲೂಕಿನ ಅಭಿವೃದ್ಧಿ ವಿಷಯಗಳು, ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ರಜೆಯಿಂದಾಗಿ ವಿಷಯವಾರು ತರಗತಿಗಳು ಪೂರ್ಣಗೊಳ್ಳದಿರುವುದು, ಪರೀಕ್ಷೆಯನ್ನು ನಿಗದಿತ ಸಮಯಕ್ಕಿಂತ ಮುನ್ನ ನೆಡೆಸುವ ತೀರ್ಮಾನ ಕೈಗೊಂಡಿರುವುದರಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು.
ಬಳಿಕ ಇಂದು ಸೇವಾ ನಿವೃತ್ತಿ ಹೊಂದುತ್ತಿರುವ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಪುಷ್ಪಾ ಕಮ್ಮಾರ್ ರವರನ್ನು ಶಾಸಕ ಹೆಚ್. ಹಾಲಪ್ಪ ಅಭಿನಂದಿಸಿ, ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.
Also read: ಡಿಜಿಟಲ್ ವಾಲ್ ಪೇಂಟಿಂಗ್ ಅಭಿಯಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ
ಸಭೆಯಲ್ಲಿ ತಹಶೀಲ್ದಾರರು, ಕೆಡಿಪಿ ಸದಸ್ಯರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post