ಕಲ್ಪ ಮೀಡಿಯಾ ಹೌಸ್
ಸಾಗರ: ತಾಲೂಕಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 20 ವರ್ಷದ ಯುವತಿಯ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗೆಡ್ಡೆಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರವಾದ ಹೊಟ್ಟೆ ನೋವಿನಿಂದ ತೊಂದರೆ ಅನುಭವಿಸುತ್ತಿದ್ದ ಸೊರಬ ತಾಲೂಕಿನ ಯುವತಿಯು ಇತ್ತೀಚೆಗೆ ಹಿರಿಯ ಮಹಿಳಾ ವೈದ್ಯೆ ಪ್ರತಿಮಾ ಅವರನ್ನು ಸಂಪರ್ಕಿಸಿದ್ದರು. ಯುವತಿಯ ಅಂಡಾಶಯದಲ್ಲಿ ದೊಡ್ಡದಾದ ಗೆಡ್ಡೆ ಇರುವುದು ಪರೀಕ್ಷೆ ವೇಳೆ ಕಂಡುಬಂದಿತ್ತು ಎನ್ನಲಾಗಿದೆ.
ಇದರಿಂದಾಗಿ ಯುವತಿ ತೀವ್ರ ಹೊಟ್ಟೆ ನೋವು ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ತೊಂದರೆ ಅಭವಿಸುತ್ತಿದ್ದರು. ಅಲ್ಲದೆ ಗೆಡ್ಡೆ ದಿನೇ ದಿನೇ ಹರಡುತ್ತಿದ್ದರಿಂದ ಉಸಿರಾಟದ ಸಮಸ್ಯೆ ಹಾಗೂ ಕ್ಯಾನ್ಸರ್ಗೂ ಕಾರಣವಾಗುವ ಸಂಭವವಿತ್ತು. ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆಯನ್ನು ಹೊರತೆಗೆಯಲಾಗಿದೆ ಎಂದು ವೈದ್ಯೆ ಪ್ರತಿಮಾ ವಿವರಿಸಿದ್ದಾರೆ.
ಶಸ್ತ್ರಚಿಕಿತ್ಸೆ ನಂತರ ರೋಗಿ ಚೇತರಿಸಿಕೊಂಡಿದ್ದು, ಈ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಸಿವಿಲ್ ಸರ್ಜಲ್ ಡಾ.ಪ್ರಕಾಶ್ ಬೋಸ್ಲೆ, ಆಸ್ಪತ್ರೆಯ ಸಿಬ್ಬಂದಿಗಳಾದ ರೀಟಾ, ರೋಹಿಣಿ, ಚಂದ್ರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post