ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದ ಸುಭಾಷ್ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆಯಲು ಬಂದವರಿಗೆ ವಿಶ್ರಾಂತಿ ಪಡೆಯಲು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗದಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದರು.
ಈ ಹಿನ್ನಲೆಯಲ್ಲಿ ಇಂದು ಶಾಸಕ ಹೆಚ್. ಹಾಲಪ್ಪ ಲಸಿಕಾ ಕೇಂದ್ರವನ್ನು ಭೇಟಿ ನೀಡಿ ಪರಿಶೀಲಿಸಿ, ಸುಭಾಷ್ ನಗರದ ಸರ್ಕಾರಿ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಗೆ ಲಸಿಕಾ ಕೇಂದ್ರ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮೈತ್ರಿ ವೀರೇಂದ್ರ ಪಾಟೀಲ್, ಗುರುಪ್ರಸಾದ್, ವೈದ್ಯಕೀಯ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post