ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ನಗರಸಭೆ ಆವರಣದಲ್ಲಿರುವ ಗಾಂಧಿ ಮೈದಾನದಲ್ಲಿ ಜನವರಿಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಸಮಾವೇಶದಲ್ಲಿ ಆರ್ ಟಿಐ ಕಾರ್ಯಕರ್ತ ಹಾಗೂ ಪತ್ರಕರ್ತ ಓಂಕಾರ್ ತಾಳಗುಪ್ಪನವರ ವಿರುದ್ಧ ಮಾತನಾಡಿದ ಪ್ರಕರಣ ಈಗ ಪಿಸಿಆರ್ ಮೂಲಕ ಎಫ್ಐಆರ್ ದಾಖಲಾಗಿದೆ.
ಜನವರಿ 12 ರಂದು ಸಾಗರದ ಗಾಂಧಿ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಸಾಗರ ಶಾಖೆಯ ವತಿಯಿಂದ ಕನ್ನಡ ರಾಜ್ಯೋತದವ ಅಂಗವಾಗಿ ನಿವೃತ್ತ ನೌಕರರಿಗೆ, ಮಾಜಿ ಯೋಧರಿಗೆ ಅಭಿನಂದನೆ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ತಾಲೂಕು ನೌಕರರ ಸಮಾವೇಶ ನಡೆದಿತ್ತು. ಮುಖ್ಯ ಅತಿಥಿ ಭಾಷಣ ಮಾಡಲು ಮುಂದಾಗಿದ್ದ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಆರ್ ಟಿಐ ಕಾರ್ಯಕರ್ತ ಮತ್ತು ಪತ್ರಕರ್ತರಾಗಿದ್ದ ಓಂಕಾರ್ ತಾಳಗುಪ್ಪ ಅವರ ವಿರುದ್ಧ ಬೆದರಿಕೆ ಹಾಕುವಂತಹ ಮಾತನಾಡಿರುವ ಹಿನ್ನೆಲೆ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Also read: ರಾಜ್ಯದ ಮುಂದಿನ ಸಿಎಂ ಸಿದ್ಧರಾಮಯ್ಯ | ಕೆಲವೇ ಸಮಯದಲ್ಲಿ ಅಧಿಕೃತ ಘೋಷಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post