ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಸಣ್ಣಮನೆ ಸೇತುವೆ ಬಳಿ ಬುಧವಾರ ನಡೆದ ಟಿಪ್ಪರ್ ಲಾರಿ ಅಪಘಾತದಲ್ಲಿ ಗಾಯಾಳುವಾಗಿದ್ದ ಲಾರಿ ಚಾಲಕ ಸುಭಾಷ್ ನಗರದ ಕೃಷ್ಣಾಚಾರಿ (73) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಮದ್ಯಾಹ್ನ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆ:
ಇಲ್ಲಿನ ಸಣ್ಣಮನೆ ಸೇತುವೆ ಬಳಿ ಬುಧವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು.

ಇನ್ನಿಬ್ಬರು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Discussion about this post