ಕಲ್ಪ ಮೀಡಿಯಾ ಹೌಸ್ | ಸಾಗರ |
ರಾಜ್ಯದ್ಯಂತ ಕೋವಿಡ್ 19 ರೂಪಾಂತರಿ ಒಮಿಕ್ರೋನ್ ವೈರಸ್ ರಾಜ್ಯವ್ಯಾಪಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರದ ಕೊನೆಯ ದಿನ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಘೋಷಿಸಿದ್ದು. ಅಂತೆಯ ವೀಕೆಂಡ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.
ಇಂದು ಮಧ್ಯಾಹ್ನ ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಫೀಲ್ಡ್ ಗೆ ಇಳಿದು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದರು.
ಸದಾ ಜನ ಜಂಗುಳಿಯಿಂದ ಕೂಡಿರುತ್ತಿದ್ದ ಕಾರ್ಗಲ್ ಪಟ್ಟಣ ಇಂದು ಜನಸಂದಣಿ ಇಲ್ಲದೆ ಸ್ತಬ್ಧವಾಗಿತ್ತು. ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಒಮ್ಮೆ ವೀಕೆಂಡ್ ಕರ್ಫ್ಯೂ ಬಗ್ಗೆ ಮಾಹಿತಿ ನೀಡಿ ವಾಪಸ್ಸು ಕಳಿಸುತ್ತಿಸುತ್ತಿದ್ದ ದೃಶ್ಯ ಕಂಡುಬಂದಿತು. ಆದರೂ ಸಹ ಅನಗತ್ಯವಾಗಿ ಓಡಾಡುತ್ತಿದ್ದವರನ್ನು ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿಗಳ ತಂಡ ತಡೆದು ದಂಡ ಹಾಕುವುದರೊಂದಿಗೆ ಕೆಲ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post