Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭಾರತ ಮಾತೆಯ ವೀರ ಪುತ್ರ ಕರಾವಳಿಯ ಯೋಧ ಪ್ರಭಾಕರ್ ಶೆಟ್ಟಿ

ನಮ್ಮೂರ ಹೆಮ್ಮೆಯ ಸೈನಿಕ

June 20, 2019
in Special Articles
0 0
0
Share on facebookShare on TwitterWhatsapp
Read - 2 minutes

ಉಡುಪಿ ಜಿಲ್ಲೆಯಲ್ಲಿರುವ ಸುಂದರ ಪ್ರಕೃತಿ ಮಾತೆಯ ಹಸಿರಿನ ಒಪ್ಪ ಓರಣಗಳಿಂದ ಕಂಗೊಳಿಸುವ ನಮ್ಮೂರು ಆವರ್ಸೆ.

ಧರೆಯೊಳು ಸುಪ್ರಸಿದ್ಧವೆನಿಸಿದ ಪಂಚ ಶಂಕರನಾರಾಯಣ ದೇವಸ್ಥಾನಗಳಲ್ಲಿ ಒಂದಾದ ಆವರ್ಸೆ ಶ್ರೀಶಂಕರನಾರಾಯಣ ದೇವರು ನಮ್ಮೂರ ಗ್ರಾಮ ದೇವರು ಹಾಗೂ ನಮ್ಮೆಲ್ಲರ ಕಾಯೋ ದೇವರು. ಎತ್ತರದಿಂದ ಹರಿದು ಬರುವ ಸೀತಾ ನದಿ ನಮ್ಮೂರ ಜೀವನದಿ ಹಾಗೂ ಜೀವನಾಡಿ.

ಆವರ್ಸೆ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ನಮ್ಮೂರ ಜ್ಞಾನ ಕೇಂದ್ರ. ಸಾವಿರ ಸಂಖ್ಯೆಯ ವಿದ್ಯಾರ್ಥಿಗಳ ಜ್ಞಾನದ ಹಸಿವೆಯನ್ನು ನೀಗಿಸಿದ್ದು ಈ ಸಂಸ್ಥೆಯ ಹೆಮ್ಮೆ.

ದೇಶ ಕಾಯುವ ಸೈನಿಕರನ್ನು, ದೇಶಕ್ಕೆ ಅನ್ನ ನೀಡುವ ರೈತರನ್ನು, ಸಾಹಿತಿಗಳನ್ನು, ಕಲಾವಿದರನ್ನು, ವೈದ್ಯರನ್ನು, ವಕೀಲರನ್ನು, ಶಿಕ್ಷಕರನ್ನು ಸಮಾಜಕ್ಕೆ ಕೊಟ್ಟ ಹೆಮ್ಮೆ ಈ ಎರಡು ಶಿಕ್ಷಣ ಸಂಸ್ಥೆಗಳದ್ದು. ಇಂತಹ ಸಂಸ್ಥೆಯಲ್ಲಿ ಕಲಿತು ದೇಶ ಕಾಯುವ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡು, ತಾಯಿ ಭಾರತಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ವೀರ ಯೋಧರೊಬ್ಬರ ಕುರಿತು ಹೇಳಲೇಬೇಕು.


ಆವರ್ಸೆ ಹತ್ತಿರದಲ್ಲಿ ಚೋರಾಡಿ ಎನ್ನುವ ಪುಟ್ಟ ಪ್ರದೇಶದಲ್ಲಿ 1985ನೆಯ ಇಸವಿ ಮೇ 5ನೆಯ ತಾರೀಕಿನಂದು ನಾಗಯ್ಯ ಶೆಟ್ಟಿ ಹಾಗೂ ಗಿರಿಜಮ್ಮ ದಂಪತಿಗಳ 3ನೆಯ ಮಗನಾಗಿ ಪ್ರಭಾಕರ್ ಶೆಟ್ಟಿ ಅವರು ಜನಿಸಿದರು.

ಪ್ರಭಾಕರ್ ಶೆಟ್ಟಿಯವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೋರಾಡಿಯಲ್ಲಿ ಮುಗಿಸಿದರು. ತದನಂತರ ಆವರ್ಸೆ ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಮುಗಿಸಿದರು.

ನಂತರ ಪದವಿಪೂರ್ವ ಶಿಕ್ಷಣಕ್ಕಾಗಿ ಶ್ರೀದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮಂದರ್ತಿ ಸೇರಿಕೊಂಡರು. ಪಿಯುಸಿ ಮುಗಿದ ಮೇಲೆ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪದವಿ ಕಾಲೇಜು ಬಾರ್ಕೂರಿನಲ್ಲಿ ಕಲಾ ವಿಭಾಗದಲ್ಲಿ ತಮ್ಮ ಪದವಿಯನ್ನು ಮುಗಿಸಿದರು.


ಚಿಕ್ಕಂದಿನಿದಲೂ ದೇಶಾಭಿಮಾನವನ್ನು ಬೆಳೆಸಿಕೊಂಡ ಪ್ರಭಾಕರ್ ಅವರು ಮುಂದೊಂದು ದಿನ ಭಾರತೀಯ ಸೈನ್ಯವನ್ನು ಸೇರಬೇಕು ದೇಶಕ್ಕಾಗಿ ದುಡಿಯಬೇಕು ಎನ್ನುವ ಹೆಬ್ಬಯಕೆಯನ್ನು ಹೊಂದಿದ್ದರು.

ಸೈನ್ಯಕ್ಕೆ ಸೇರಬೇಕು ಎನ್ನುವ ಕಾರಣಕ್ಕಾಗಿ ಪದವಿ ಶಿಕ್ಷಣ ಮುಗಿದ ನಂತರ ತಮ್ಮ ಪ್ರಯತ್ನವನ್ನು ಮುಂದುವರೆಸುತ್ತಾರೆ.

ಸೇನೆಗೆ ಸೇರಬೇಕಾದರೆ ಕಟ್ಟು ಮಸ್ತಿನ ದೇಹವಿದ್ದರೆ ಸಾಲದು ಭವ್ಯ ಭರತಭೂಮಿಯನ್ನು ಹೃದಯವೆಂಬ ತೊಟ್ಟಿಲಿನಲಿಟ್ಟು ಪೂಜಿಸುವ ಮನಃಸ್ಥಿತಿ ಕೂಡ ಇರಬೇಕು.

ಅದೊಂದು ಸುಂದರ ಶ್ರಾವಣ ಕಾಲ. ಹಳ್ಳಿ ಹುಡುಗನ ಅದೃಷ್ಟ ಬದಲಾಗುವ ಕಾಲ ಬಂದೇ ಬಿಟ್ಟಿತು. ಬಹುದಿನಗಳ ಪರಿಶ್ರಮಕ್ಕೆ ಫಲ ದೊರಕಿತು. 2006ರಲ್ಲಿ ಹಾಸನದಲ್ಲಿ ನಡೆದ ಭೂಸೇನಾ ನೇಮಕಾತಿ ಶಿಬಿರದಲ್ಲಿ ಪ್ರಭಾಕರ್ ಅವರು ಭಾರತೀಯ ಭೂಸೇನೆಗೆ ಆಯ್ಕೆಯಾದರು.


ಒಂದೆಡೆ ಸೈನ್ಯಕ್ಕೆ ಸೇರಿದ ಖುಷಿ ಇನ್ನೊಂದೆಡೆ ಪೋಸ್ಟಿಂಗ್ ಆಗಿರುವುದು ಸೇನೆಕ್ಕೆ……. ಜಮ್ಮು ಕಾಶ್ಮೀರ ಭಾರತ ಭೂ ಭಾಗವೇ ಆಗಿದ್ದರೂ ಕಣ್ಣ ಮುಂದೆ ಸಾವಿನ ರುದ್ರ ನರ್ತನ ನಡೆಯುವ ಭಯಾನಕ ಜಗತ್ತು. ಬಂದುದೆಲ್ಲವು ಬರಲಿ ಜೊತೆಗೆ ತೀರ್ಥ ವಿನಾಯಕನ ದಯವಂದಿರಲಿ ಎಂದು ಹಳ್ಳಿ ಹುಡುಗ ದಿಲ್ಲಿಯ ಕಡೆ ಪ್ರಯಾಣ ಬೆಳೆಸುತ್ತಾನೆ.

ಮೈ ಕೊರೆಯುವ ಚಳಿ, ಮಳೆ ಹಿಮಪಾತ, ಇಂದು ಜೊತೆಗಿರುವವನು ನಾಳೆ ಜೊತೆಗಿರುವನೋ ಎಲ್ಲವೋ ಎನ್ನುವ ನೋವು. ಇದನೆಲ್ಲ ಸಹಿಸಿಕೊಂಡು ಸತತ 10 ವರ್ಷ ಅಂದರೆ 2006 ರಿಂದ 2016ರ ತನಕ ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದರು. ಪ್ರಸ್ತುತ ಪ್ರಭಾಕರ್ ಅವರು ಗುಜರಾತ್’ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸ್ತುತ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಪ್ರಭಾಕರ್ ಅವರು 2011 ರಲ್ಲಿ ನಾಗರತ್ನ ಶೆಟ್ಟಿ ಎನ್ನುವವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಭಾಕರ್ ಅವರೇ ನಿಮ್ಮನ್ನು ನಮ್ಮ ಅವರ್ಸೆಯ ಮಣ್ಣಿನ ಮಗ ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಅಪಾರವಾದ ಹೆಮ್ಮೆ ಇದೆ.


ತಂದೆ ತಾಯಿ ಕೃಷಿಯನ್ನು ಮಾಡಿಕೊಂಡು ಮಗನಿಗೆ ವಿದ್ಯಾಭ್ಯಾಸ ನೀಡಿ ಭಾರತ ಮಾತೆಯ ಸೇವೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟ ನಿಮಗೆ ನಮ್ಮೂರ ಜನರ ಪರವಾಗಿ ಅಭಿನಂದನೆಗಳು.

ಅವರ್ಸೆಯ ಮಣ್ಣಿನಲ್ಲಿ ಹುಟ್ಟಿ ತೀರ್ಥ ವಿನಾಯಕನ ಸನ್ನಿಧಾನದಲ್ಲಿ ಬೆಳೆದ ನಿಮ್ಮ ಕೀರ್ತಿ ಜಗವೆಲ್ಲ ಬೆಳಗಲಿ.

ದೇಶ ಕಾಯುವ ಕಾಯಕವನ್ನು ಆಯ್ಕೆ ಮಾಡಿಕೊಂಡು ನಮ್ಮೂರಿಗೆ ಗೌರವವನ್ನು ತಂದುಕೊಟ್ಟ ನಿಮಗೆ ಅನಂತ ಅನಂತ ಧನ್ಯವಾದಗಳು.

ನಾವೆಲ್ಲರೂ ಅನುದಿನವು ಆರಾಧಿಸುವ ಆರಾಧ್ಯ ಮೂರ್ತಿ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಆಯಸ್ಸು ಆರೋಗ್ಯ ಭಾಗ್ಯವನಿತ್ತು ಸದಾ ಕಾಲ ಸಲಹಲಿ.

ಲೇಖನ: ಗೌರೀಶ್ ಆವರ್ಸೆ

Tags: coastal newsIndiaindian armyKannada ArticleSpecial ArticleUdupiಅವರ್ಸೆಉಡುಪಿಕರಾವಳಿಪ್ರಕೃತಿ ಮಾತೆಪ್ರಭಾಕರ್ ಶೆಟ್ಟಿಭಾರತಭಾರತೀಯ ಸೇನೆಮಳೆ ಹಿಮಪಾತಶಂಕರನಾರಾಯಣ ದೇವಸ್ಥಾನ
Previous Post

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

Next Post

ಸಾಹಸಸಿಂಹ ವಿಷ್ಣು ಸ್ಮಾರಕ: ಕೋರ್ಟ್ ಹಸಿರು ನಿಶಾನೆ ತೋರಿದರೂ ರೈತರಿಂದ ಅಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಹಸಸಿಂಹ ವಿಷ್ಣು ಸ್ಮಾರಕ: ಕೋರ್ಟ್ ಹಸಿರು ನಿಶಾನೆ ತೋರಿದರೂ ರೈತರಿಂದ ಅಡ್ಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!