No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಾರತ ಮಾತೆಯ ವೀರ ಪುತ್ರ ಕರಾವಳಿಯ ಯೋಧ ಪ್ರಭಾಕರ್ ಶೆಟ್ಟಿ

ನಮ್ಮೂರ ಹೆಮ್ಮೆಯ ಸೈನಿಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2019
in Special Articles
0
ಭಾರತ ಮಾತೆಯ ವೀರ ಪುತ್ರ ಕರಾವಳಿಯ ಯೋಧ ಪ್ರಭಾಕರ್ ಶೆಟ್ಟಿ
Share on FacebookShare on TwitterShare on WhatsApp

ಉಡುಪಿ ಜಿಲ್ಲೆಯಲ್ಲಿರುವ ಸುಂದರ ಪ್ರಕೃತಿ ಮಾತೆಯ ಹಸಿರಿನ ಒಪ್ಪ ಓರಣಗಳಿಂದ ಕಂಗೊಳಿಸುವ ನಮ್ಮೂರು ಆವರ್ಸೆ.

ಧರೆಯೊಳು ಸುಪ್ರಸಿದ್ಧವೆನಿಸಿದ ಪಂಚ ಶಂಕರನಾರಾಯಣ ದೇವಸ್ಥಾನಗಳಲ್ಲಿ ಒಂದಾದ ಆವರ್ಸೆ ಶ್ರೀಶಂಕರನಾರಾಯಣ ದೇವರು ನಮ್ಮೂರ ಗ್ರಾಮ ದೇವರು ಹಾಗೂ ನಮ್ಮೆಲ್ಲರ ಕಾಯೋ ದೇವರು. ಎತ್ತರದಿಂದ ಹರಿದು ಬರುವ ಸೀತಾ ನದಿ ನಮ್ಮೂರ ಜೀವನದಿ ಹಾಗೂ ಜೀವನಾಡಿ.

ಆವರ್ಸೆ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ನಮ್ಮೂರ ಜ್ಞಾನ ಕೇಂದ್ರ. ಸಾವಿರ ಸಂಖ್ಯೆಯ ವಿದ್ಯಾರ್ಥಿಗಳ ಜ್ಞಾನದ ಹಸಿವೆಯನ್ನು ನೀಗಿಸಿದ್ದು ಈ ಸಂಸ್ಥೆಯ ಹೆಮ್ಮೆ.

ದೇಶ ಕಾಯುವ ಸೈನಿಕರನ್ನು, ದೇಶಕ್ಕೆ ಅನ್ನ ನೀಡುವ ರೈತರನ್ನು, ಸಾಹಿತಿಗಳನ್ನು, ಕಲಾವಿದರನ್ನು, ವೈದ್ಯರನ್ನು, ವಕೀಲರನ್ನು, ಶಿಕ್ಷಕರನ್ನು ಸಮಾಜಕ್ಕೆ ಕೊಟ್ಟ ಹೆಮ್ಮೆ ಈ ಎರಡು ಶಿಕ್ಷಣ ಸಂಸ್ಥೆಗಳದ್ದು. ಇಂತಹ ಸಂಸ್ಥೆಯಲ್ಲಿ ಕಲಿತು ದೇಶ ಕಾಯುವ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡು, ತಾಯಿ ಭಾರತಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ವೀರ ಯೋಧರೊಬ್ಬರ ಕುರಿತು ಹೇಳಲೇಬೇಕು.


ಆವರ್ಸೆ ಹತ್ತಿರದಲ್ಲಿ ಚೋರಾಡಿ ಎನ್ನುವ ಪುಟ್ಟ ಪ್ರದೇಶದಲ್ಲಿ 1985ನೆಯ ಇಸವಿ ಮೇ 5ನೆಯ ತಾರೀಕಿನಂದು ನಾಗಯ್ಯ ಶೆಟ್ಟಿ ಹಾಗೂ ಗಿರಿಜಮ್ಮ ದಂಪತಿಗಳ 3ನೆಯ ಮಗನಾಗಿ ಪ್ರಭಾಕರ್ ಶೆಟ್ಟಿ ಅವರು ಜನಿಸಿದರು.

ಪ್ರಭಾಕರ್ ಶೆಟ್ಟಿಯವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೋರಾಡಿಯಲ್ಲಿ ಮುಗಿಸಿದರು. ತದನಂತರ ಆವರ್ಸೆ ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಮುಗಿಸಿದರು.

ನಂತರ ಪದವಿಪೂರ್ವ ಶಿಕ್ಷಣಕ್ಕಾಗಿ ಶ್ರೀದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮಂದರ್ತಿ ಸೇರಿಕೊಂಡರು. ಪಿಯುಸಿ ಮುಗಿದ ಮೇಲೆ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪದವಿ ಕಾಲೇಜು ಬಾರ್ಕೂರಿನಲ್ಲಿ ಕಲಾ ವಿಭಾಗದಲ್ಲಿ ತಮ್ಮ ಪದವಿಯನ್ನು ಮುಗಿಸಿದರು.


ಚಿಕ್ಕಂದಿನಿದಲೂ ದೇಶಾಭಿಮಾನವನ್ನು ಬೆಳೆಸಿಕೊಂಡ ಪ್ರಭಾಕರ್ ಅವರು ಮುಂದೊಂದು ದಿನ ಭಾರತೀಯ ಸೈನ್ಯವನ್ನು ಸೇರಬೇಕು ದೇಶಕ್ಕಾಗಿ ದುಡಿಯಬೇಕು ಎನ್ನುವ ಹೆಬ್ಬಯಕೆಯನ್ನು ಹೊಂದಿದ್ದರು.

ಸೈನ್ಯಕ್ಕೆ ಸೇರಬೇಕು ಎನ್ನುವ ಕಾರಣಕ್ಕಾಗಿ ಪದವಿ ಶಿಕ್ಷಣ ಮುಗಿದ ನಂತರ ತಮ್ಮ ಪ್ರಯತ್ನವನ್ನು ಮುಂದುವರೆಸುತ್ತಾರೆ.

ಸೇನೆಗೆ ಸೇರಬೇಕಾದರೆ ಕಟ್ಟು ಮಸ್ತಿನ ದೇಹವಿದ್ದರೆ ಸಾಲದು ಭವ್ಯ ಭರತಭೂಮಿಯನ್ನು ಹೃದಯವೆಂಬ ತೊಟ್ಟಿಲಿನಲಿಟ್ಟು ಪೂಜಿಸುವ ಮನಃಸ್ಥಿತಿ ಕೂಡ ಇರಬೇಕು.

ಅದೊಂದು ಸುಂದರ ಶ್ರಾವಣ ಕಾಲ. ಹಳ್ಳಿ ಹುಡುಗನ ಅದೃಷ್ಟ ಬದಲಾಗುವ ಕಾಲ ಬಂದೇ ಬಿಟ್ಟಿತು. ಬಹುದಿನಗಳ ಪರಿಶ್ರಮಕ್ಕೆ ಫಲ ದೊರಕಿತು. 2006ರಲ್ಲಿ ಹಾಸನದಲ್ಲಿ ನಡೆದ ಭೂಸೇನಾ ನೇಮಕಾತಿ ಶಿಬಿರದಲ್ಲಿ ಪ್ರಭಾಕರ್ ಅವರು ಭಾರತೀಯ ಭೂಸೇನೆಗೆ ಆಯ್ಕೆಯಾದರು.


ಒಂದೆಡೆ ಸೈನ್ಯಕ್ಕೆ ಸೇರಿದ ಖುಷಿ ಇನ್ನೊಂದೆಡೆ ಪೋಸ್ಟಿಂಗ್ ಆಗಿರುವುದು ಸೇನೆಕ್ಕೆ……. ಜಮ್ಮು ಕಾಶ್ಮೀರ ಭಾರತ ಭೂ ಭಾಗವೇ ಆಗಿದ್ದರೂ ಕಣ್ಣ ಮುಂದೆ ಸಾವಿನ ರುದ್ರ ನರ್ತನ ನಡೆಯುವ ಭಯಾನಕ ಜಗತ್ತು. ಬಂದುದೆಲ್ಲವು ಬರಲಿ ಜೊತೆಗೆ ತೀರ್ಥ ವಿನಾಯಕನ ದಯವಂದಿರಲಿ ಎಂದು ಹಳ್ಳಿ ಹುಡುಗ ದಿಲ್ಲಿಯ ಕಡೆ ಪ್ರಯಾಣ ಬೆಳೆಸುತ್ತಾನೆ.

ಮೈ ಕೊರೆಯುವ ಚಳಿ, ಮಳೆ ಹಿಮಪಾತ, ಇಂದು ಜೊತೆಗಿರುವವನು ನಾಳೆ ಜೊತೆಗಿರುವನೋ ಎಲ್ಲವೋ ಎನ್ನುವ ನೋವು. ಇದನೆಲ್ಲ ಸಹಿಸಿಕೊಂಡು ಸತತ 10 ವರ್ಷ ಅಂದರೆ 2006 ರಿಂದ 2016ರ ತನಕ ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದರು. ಪ್ರಸ್ತುತ ಪ್ರಭಾಕರ್ ಅವರು ಗುಜರಾತ್’ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸ್ತುತ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಪ್ರಭಾಕರ್ ಅವರು 2011 ರಲ್ಲಿ ನಾಗರತ್ನ ಶೆಟ್ಟಿ ಎನ್ನುವವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಭಾಕರ್ ಅವರೇ ನಿಮ್ಮನ್ನು ನಮ್ಮ ಅವರ್ಸೆಯ ಮಣ್ಣಿನ ಮಗ ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಅಪಾರವಾದ ಹೆಮ್ಮೆ ಇದೆ.


ತಂದೆ ತಾಯಿ ಕೃಷಿಯನ್ನು ಮಾಡಿಕೊಂಡು ಮಗನಿಗೆ ವಿದ್ಯಾಭ್ಯಾಸ ನೀಡಿ ಭಾರತ ಮಾತೆಯ ಸೇವೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟ ನಿಮಗೆ ನಮ್ಮೂರ ಜನರ ಪರವಾಗಿ ಅಭಿನಂದನೆಗಳು.

ಅವರ್ಸೆಯ ಮಣ್ಣಿನಲ್ಲಿ ಹುಟ್ಟಿ ತೀರ್ಥ ವಿನಾಯಕನ ಸನ್ನಿಧಾನದಲ್ಲಿ ಬೆಳೆದ ನಿಮ್ಮ ಕೀರ್ತಿ ಜಗವೆಲ್ಲ ಬೆಳಗಲಿ.

ದೇಶ ಕಾಯುವ ಕಾಯಕವನ್ನು ಆಯ್ಕೆ ಮಾಡಿಕೊಂಡು ನಮ್ಮೂರಿಗೆ ಗೌರವವನ್ನು ತಂದುಕೊಟ್ಟ ನಿಮಗೆ ಅನಂತ ಅನಂತ ಧನ್ಯವಾದಗಳು.

ನಾವೆಲ್ಲರೂ ಅನುದಿನವು ಆರಾಧಿಸುವ ಆರಾಧ್ಯ ಮೂರ್ತಿ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಆಯಸ್ಸು ಆರೋಗ್ಯ ಭಾಗ್ಯವನಿತ್ತು ಸದಾ ಕಾಲ ಸಲಹಲಿ.

ಲೇಖನ: ಗೌರೀಶ್ ಆವರ್ಸೆ

Tags: coastal newsIndiaindian armyKannada ArticleSpecial ArticleUdupiಅವರ್ಸೆಉಡುಪಿಕರಾವಳಿಪ್ರಕೃತಿ ಮಾತೆಪ್ರಭಾಕರ್ ಶೆಟ್ಟಿಭಾರತಭಾರತೀಯ ಸೇನೆಮಳೆ ಹಿಮಪಾತಶಂಕರನಾರಾಯಣ ದೇವಸ್ಥಾನ
Share198Tweet123Send
Previous Post

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

Next Post

ಸಾಹಸಸಿಂಹ ವಿಷ್ಣು ಸ್ಮಾರಕ: ಕೋರ್ಟ್ ಹಸಿರು ನಿಶಾನೆ ತೋರಿದರೂ ರೈತರಿಂದ ಅಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಹಸಸಿಂಹ ವಿಷ್ಣು ಸ್ಮಾರಕ: ಕೋರ್ಟ್ ಹಸಿರು ನಿಶಾನೆ ತೋರಿದರೂ ರೈತರಿಂದ ಅಡ್ಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL