ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದ್ದು, ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ಗ್ರಾಮೀಣ ಭಾಗದಲ್ಲೂ ಯುವಕರು ಈ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಯುವಕರು ಜಾಗೃತಿ ಮೂಡಿಸುತ್ತಿದ್ದಾರೆ.

ಗ್ರಾಮದಲ್ಲಿರುವ ಎಲ್ಲ ದಿನಸಿ ಅಂಗಡಿ, ಎಟಿಎಂ, ಕುಡಿಯುವ ನೀರಿನ ಘಟಕಗಳ ಮುಂದೆ ಅಂತರ ಕಾಯ್ದುಕೊಳ್ಳಲು ಬಾಕ್ಸ್’ಗಳನ್ನು ನಿರ್ಮಿಸಲಾಗಿದೆ.
ಗ್ರಾಮದ ಯುವ ಮುಖಂಡ ಆರ್.ಎನ್. ರುದ್ರೇಶ್ ನೇತೃತ್ವದಲ್ಲಿ ಈ ಕಾರ್ಯ ಮಾಡಲಾಗಿದ್ದು, ಸ್ವಚ್ಛತೆ ಕಾಪಾಡುವ ಜೊತೆಯಲ್ಲಿ ಅಂತರ ಕಾಯ್ದುಕೊಂಡು ಸೋಂಕು ಹರಡದಂತೆ ತಡೆಯಲು ಕೈಜೋಡಿಸುವಂತೆ ಜಾಗೃತಿ ಮೂಡಿಸಲಾಯಿತು.
Get in Touch With Us info@kalpa.news Whatsapp: 9481252093









Discussion about this post