ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್ವುಡ್ |
ದೇಶದೆಲ್ಲೆಡೆ ಭಾರೀ ಸದ್ದು ಮಾಡುತ್ತಿರುವ ಕಾಂತಾರ ಚಿತ್ರವನ್ನು ವೀಕ್ಷಿಸಿ ಅದ್ಭುತ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ Jaggesh ಹೊರ ದೇಶ ಪ್ರವಾಸದಲ್ಲಿದ್ದು, ಕಾಂತಾರ Kantara ಸಿನಿಮಾ ನೋಡಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.
ಅಮೇರಿಕದ ಡೆನ್ವರ್ನಲ್ಲಿ ಒರ್ಯಾಕಲ್ ಮಾಲ್ನಲ್ಲಿ ಕಾಂತಾರ ವೀಕ್ಷಿಸಿ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಿಷಬ್ Rishab Shetty ಅವರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಹಾಗೂ ತಾವು ದಕ್ಷಿಣ ಕನ್ನಡದ ದೇವಾಲಯದ ಭಕ್ತನಾಗಿದ್ದು 30 ವರ್ಷಗಳಿಂದ ವರ್ಷಕ್ಕೆ ಒಂದು ಬಾರಿ ಪೊಳಲಿ, ಕಟೀಲು, ಉಡುಪಿ ಕೃಷ್ಣ, ಮೂಕಾಂಬಿಕೆ, ಕೊರಗಜ್ಜ, ಅಂಬಲಪಾಡಿ, ಉಡುಪಿ ರಾಯರ ಮಠ ದರ್ಶನ ಮಾಡುವ ಅಭ್ಯಾಸವಿದೆ. ದಕ್ಷಿಣ ಕನ್ನಡ ಶ್ರೇಷ್ಠ ದೇವಭೂಮಿಯಾಗಿದ್ದು, ಆಧ್ಯಾತ್ಮಿಕ ಅನುಭವಕ್ಕೆ ಈ ಕ್ಷೇತ್ರದಲ್ಲಿ ಸಂತೃಪ್ತ ಭಾವ ಸಿಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಟ ನಿರ್ದೇಶಕ, ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಅದ್ಭುತ ಕೊಡುಗೆಯಾಗಿದ್ದು, ಕಾಂತಾರ ಕಡೆಯ 25ನಿಮಿಷ ವೀಕ್ಷಿಸಿ ನಾನು ಎಲ್ಲಿರುವೆ ಮರೆತು ಹೋಯಿತು. ಚಿತ್ರ ನೋಡಿದ ಮೇಲೆ ಮೂಕವಿಸ್ಮಿತನಾದೆ. ನಶಿಸುತ್ತಿರುವ ಆಧ್ಯಾತ್ಮಿಕ ಭಾವ ಮತ್ತೆ ಮನುಷ್ಯರಿಗೆ ನೆನಪಿಸಲು ದೇವರೆ ಬಂದು ರಿಷಬ್ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ದೇವರು ರಿಷಬ್ಗೆ ನೂರು ಕಾಲ ಆಯುಷ್ಯ ಆರೋಗ್ಯ ಕೊಟ್ಟು, ಕನ್ನಡ ಕಲಾರಂಗಕ್ಕೆ ಆತನ ಸೇವೆ ಇದೇರೀತಿ ಮುಂದುವರಿಯಲಿ ಎಂದು ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post