No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

Filmmakers United Club (FUC) ನಲುಗುತ್ತಿರುವ ಚಿತ್ರರಂಗಕ್ಕೆ ನವ ಆಶಾಕಿರಣ: ಮಂಸೋರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 23, 2020
in ಸಿನೆಮಾ
0
Filmmakers United Club (FUC) ನಲುಗುತ್ತಿರುವ ಚಿತ್ರರಂಗಕ್ಕೆ ನವ ಆಶಾಕಿರಣ: ಮಂಸೋರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Filmmakers United Club (FUC) ಮೂಲಕ ಕನ್ನಡದ ಕೆಲವು ನಿರ್ದೇಶಕರು ಒಟ್ಟಾಗಿರುವುದು ಚಿತ್ರರಂಗದ ಬೆಳವಣಿಗೆಯ ಹಾದಿಯಲ್ಲಿ ಒಂದು ದಾಪುಗಾಲು ಎಂದೇ ಹೇಳಬಹುದು. ಇಂಥ ಒಂದು ಒಗ್ಗೂಡುವಿಕೆಗೆ ’ಲೂಸಿಯಾ’ ನಿರ್ದೇಶಕ ಪವನ್ ಕುಮಾರ್ ನಾಂದಿ ಹಾಡಿದ್ದಾರೆ.

ಲಂಡನ್ನಿನ BAFTA ಮಾದರಿಯಿಂದ ಪ್ರೇರಿತವಾಗಿರುವ FUCಯ ಪರಿಕಲ್ಪನೆ ಭಾರತದಲ್ಲೇ ಪ್ರಥಮವಾಗಿದ್ದು, ನಿರ್ದೇಶಕರ ಹಾಗೂ ಪ್ರೇಕ್ಷಕರ ನಡುವಿನ ಅಂತರ ತಗ್ಗಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಅಲ್ಲದೇ ಮುಂಬರುವ ಮಹತ್ವಾಕಾಂಕ್ಷಿ ಯುವ ನಿರ್ದೇಶಕರ ಪಾಲಿಗೆ ಜ್ಞಾನಕೋಶವಾಗಲಿದೆ. ನಿರ್ದೇಶಿಸಿದ ಎರಡು ಚಿತ್ರಗಳಿಗೂ ರಜತ ಕಮಲ ಪಡೆದಿರುವ ನಿರ್ದೇಶಕ ಮಂಸೋರೆ ಅವರು FUC ಕುರಿತಾಗಿ exclusive ಮಾಹಿತಿ ನೀಡಿದ್ದಾರೆ.

ಮಂಸೋರೆ

FUC ಮಾದರಿಯ ಪರಿಕಲ್ಪನೆ ಯಾರದ್ದು ಮತ್ತು ಇದರ ಮೂಲ ಉದ್ದೇಶ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಮಂಸೋರೆ ಅವರು ’FUC ಪರಿಕಲ್ಪನೆ ’ಲೂಸಿಯಾ’ ನಿರ್ದೇಶಕ ಪವನ್ ಕುಮಾರ್ ಅವರದ್ದು, ಕೊರೋನಾ ಬಿಸಿ ಚಿತ್ರರಂಗಕ್ಕೂ ತಟ್ಟಿರುವುದು ವಾಸ್ತವ, ಚಿತ್ರೀಕರಣ ನಡೆಸುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಈ ಸಮಯದಲ್ಲಿ ಕೊರೋನಾ ನಂತರದ ದಿನಗಳಲ್ಲಿ ಎದುರಾಗಬಹುದಂತಹ ಥೇಟರ್ ಸಮಸ್ಯೆ, OTT ವೇದಿಕೆಯ ಕೆಲ ನಿಬಂಧನೆಗಳಲ್ಲಿನ ತೊಡಕುಗಳು, ಚಿತ್ರ ನಿರ್ಮಾಣಕ್ಕೆ ಎದುರಾಗುವ ಸವಾಲುಗಳ ಕುರಿತು ಒಂದು ಆರೋಗ್ಯಕರ ಚರ್ಚೆ ನಡೆಸಲು ಹಾಗೂ ಸಮಾನ ಮನಸ್ಕ ನಿರ್ದೇಶಕರುಗಳ ವಿಚಾರ ವಿನಿಮಯದ ಜೊತೆ ಜೊತೆಗೆ ಬಹುಮುಖ್ಯವಾಗಿ ನಿರ್ದೇಶಕರ ಮತ್ತು ಪ್ರೇಕ್ಷಕರ ನಡುವಿನ ಅಂತರ ತಗ್ಗಿಸುವ ಹಾಗೂ ಪ್ರಾಮಾಣಿಕ ಪ್ರೇಕ್ಷಕ ವರ್ಗವನ್ನು ಗುರುತಿಸುವ ನಿಟ್ಟಿನಲ್ಲಿ ಈ ಕ್ಲಬ್ ಉತ್ತಮ ವೇದಿಕೆಯಂತೆ ಕಾರ್ಯನಿರ್ವಹಿಸಲಿದೆ’ ಎಂದರು.

ಅಂದಹಾಗೆ FUCಯಲ್ಲಿ ಈಗಾಗಲೇ 25 ನಿರ್ದೇಶಕರುಗಳು ಒಟ್ಟುಗೂಡಿದ್ದು ಯೋಗರಾಜ್ ಭಟ್, ಜಯತೀರ್ಥ, ಪಿ. ಶೇಷಾದ್ರಿ, ಕವಿತಾ ಲಂಕೇಶ್, ಬಿ.ಎಂ. ಗಿರಿರಾಜ್, ಆದರ್ಶ್ ಈಶ್ವರಪ್ಪ ಸೇರಿದಂತೆ 21 ಮಂದಿ ಕನ್ನಡದ ಯುವ ಮತ್ತು ಅನುಭವಿ ನಿರ್ದೇಶಕರ ದಂಡೇ ಇದೆ. ಇನ್ನುಳಿದವರಲ್ಲಿ ಮಲಯಾಳಂ ನಿರ್ದೇಶಕ ಲಿಜೋ ಜೋಸ್ ಪೆಲ್ಲಿಸೆರಿ, ತೆಲುಗಿನ ತರುಣ್ ಭಾಸ್ಕರ್, ನಂದಿನಿ ರೆಡ್ಡಿ ಹಾಗೂ ತಮಿಳಿನ ವಸಂತ ಬಾಲನ್ ಇದ್ದಾರೆ. FUCನಲ್ಲಿ ಸದಸ್ಯರಾಗ ಬಯಸುವ ನಿರ್ದೇಶಕರು www.thefuc.in ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸದಸ್ಯರಾಗಿರುವ ನಿರ್ದೇಶಕರುಗಳ ವೋಟ್’ಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದ ನಿರ್ದೇಶಕನ ಸದಸ್ಯತ್ವ ನಿರ್ಧಾರವಾಗಲಿದ್ದು ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗುತ್ತದೆ. ಪ್ರೇಕ್ಷಕರು ತಮಗಿಷ್ಟವಾದ ನಿರ್ದೇಶಕರ ಬಯೋಡೇಟಾ ಹಾಗೂ ಅವರು ನಿರ್ದೇಶಿಸಿದ ಸಿನಿಮಾ ಲಭ್ಯವಿರುವ ಲಿಂಕ್ ಜೊತೆಗೆ ಸಂಪೂರ್ಣ್ ಮಾಹಿತಿಯನ್ನು ಈ ವೆಬ್ಸೈಟ್ ನಲ್ಲಿ ಪಡೆಯಬಹುದಾಗಿದೆ.

ಮತ್ತೊಂದು ವಿಶೇಷ ಸಂಗತಿ ಏನೆಂದರೆ ವೆಬ್ಸೈಟ್’ನ Newsfeedನಲ್ಲಿ ಯಾವುದೇ ಸದಸ್ಯ ಹಂಚಿಕೊಂಡ ವಿಚಾರಗಳಿಗೆ ಲೈಕ್, ಡಿಸ್’ಲೈಕ್ ಆಪ್ಷನ್ ಇರುವುದಿಲ್ಲ, ಹೀಗಾಗಿ ತಾವು ಹಂಚಿಕೊಂಡ ವಿಚಾರವನ್ನು ಎಷ್ಟು ಜನರು ಮಾನ್ಯ ಅಥವಾ ಅಮಾನ್ಯ ಮಾಡಿದರು ಎಂಬ ಒತ್ತಡ ನಿರ್ದೇಶಕರಿಗೆ ಇರುವುದಿಲ್ಲ. ಸೆಷನ್ ನಡೆಯುವ ಸಂದರ್ಭದಲ್ಲಿ ಪ್ರೇಕ್ಷಕರಿಗೆ ಕಾಮೆಂಟ್ ಮಾಡಲು ಮಾತ್ರ ಅವಕಾಶವಿರುತ್ತದೆ, ಚರ್ಚೆಯ ವಿಷಯಕ್ಕೆ ಅನುಗುಣವಾಗಿ ಪ್ರೇಕ್ಷಕರು ಕೊಡುವ ಸಲಹೆಯನ್ನು ಸಹ ಪರಿಗಣಿಸಲಾಗುತ್ತದೆ.

ನಿಮ್ಮ ಮುಂದಿನ ಸಿನಿಮಾದ ಬಗ್ಗೆ ಹೇಳಿ ಮತ್ತು ಬಿಡುಗಡೆಗೆ ಯಾವ ರೀತಿ ಸಿದ್ಧತೆ ಮಾಡಿಕೊಂಡಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಸೋರೆ ಅವರು ’ನನ್ನ ಮುಂದಿನ ಸಿನಿಮಾ ‘Act- 1978’ಗೆ ಇನ್ನೂ ಒಂದು ತಿಂಗಳ ಕೆಲಸ ಬಾಕಿ ಇದೆ ನಂತರ ಬಿಡುಗಡೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಷ್ಟೇ. ಕೊರೋನಾ ಸಮಸ್ಯೆ ಎಲ್ಲಾ ಮುಗಿದು ಅನುಕೂಲಕರ ಪರಿಸ್ಥಿತಿ ನಿರ್ಮಾಣ ಆದರೆ ಥೇಟರ್’ನಲ್ಲೇ ಬಿಡುಗಡೆಗೊಳಿಸುವ ಚಿಂತನೆ ನಡೆಸಿದ್ದೇನೆ, ಯಥಾಸ್ಥಿತಿ ಮುಂದುವರೆದರೆ OTT  ಮೊರೆ ಹೋಗುವ ಕುರಿತು ತಂಡದಲ್ಲಿ ಮಾತುಕತೆ ನಡೆಯುತ್ತಿದೆ’ ಎಂದರು.

ಪವನ್ ಕುಮಾರ್

ಸದ್ಯ ಕೊರೋನಾ ಬರಸಿಡಿಲಿಗೆ ತತ್ತರಿಸಿರುವ ಚಿತ್ರರಂಗಕ್ಕೆ ಚೇತರಿಕೆ ತರುವ ಹಾಗೂ ಭವಿಷ್ಯದಲ್ಲಿ ಇಂತಹುದೇ ವೈಪರೀತ್ಯವನ್ನು ಎದುರಿಸುವ ಶಕ್ತಿ ತುಂಬುವ ನಿಟ್ಟಿನಲ್ಲಿ FUC ಹೊಸ ಚೈತನ್ಯದ ಚಿಲುಮೆಯಂತೆ ಕಾರ್ಯನಿರ್ವಹಿಸುವುದರಲ್ಲಿ ಸಫಲವಾಗುತ್ತದೆಯೇ ಎಂಬುದನ್ನು ಇನ್ನೂ ಕಾದು ನೋಡಬೇಕಾಗಿದೆ.


Get In Touch With Us info@kalpa.news Whatsapp: 9481252093

Tags: BAFTAFilmmakers United ClubFUCKannada MoviesKannada News WebsiteLatest News WebsiteMansooresandalwoodಕನ್ನಡ ಚಿತ್ರರಂಗಚಿತ್ರೀಕರಣ
Share206Tweet123Send
Previous Post

ನಾನಾ ಪ್ರತಿಭೆಗಳ ಅನಾವರಣ ಒಂದೇ ವೇದಿಕೆ ಸೃಷ್ಠಿಸಿರುವ ಮಂಗಳೂರಿನ ಮಕ್ಕಿಮನೆ ಕಲಾವೃಂದ

Next Post

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಲಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಲಾಗಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL