ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪಾಲಿಕೆ ವ್ಯಾಪ್ತಿ ಏಳು ವಾಡ್ರ್ರ್ಗಳಲ್ಲಿ ಜುಲೈ 23ರ ನಾಳೆಯಿಂದ ಜುಲೈ 29ರವರೆಗೂ ಸೀಲ್ ಡೌನ್ ಜಾರಿಯಲ್ಲಿ ಇರಲಿದ್ದು, ಈ ಪ್ರದೇಶಗಳಿಂದ ಜನರು ಹೊರಕ್ಕೆ ಬರುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ವಪಡಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಘೋಷಿಸಿರುವಂತೆ ಜಿಲ್ಲೆಯಲ್ಲಿಯೂ ಸಹ ಲಾಕ್ ಡೌನ್ ಇಂದಿನಿಂದ ಇರುವುದಿಲ್ಲ. ಆದರೆ, ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಜಾರಿಯಲ್ಲಿ ಇರಲಿದೆ ಎಂದಿದ್ದಾರೆ.
ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿರುವ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್ಗಳ ವ್ಯಾಪ್ತಿಯಲ್ಲಿ ಜುಲೈ 23ರ ಬೆಳಿಗ್ಗೆ 5 ಗಂಟೆಯಿಂದ ಜುಲೈ 29ರ ಬೆಳಿಗ್ಗೆ 5ರವರೆಗೆ ಸೀಲ್ ಡೌನ್ ಮಾಡಲಾಗುವುದು ಎಂದರು.
ಹಳೇ ಶಿವಮೊಗ್ಗ ಕ್ಲಸ್ಟರ್ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು 30 ಹಾಗೂ ವಾರ್ಡ್ ಸಂಖ್ಯೆ 12, 13 ಮತ್ತು 33ರಲ್ಲಿನ ಭಾಗಶಃ ವ್ಯಾಪ್ತಿಯಲ್ಲಿ ಸೀಲ್ ಡೌನ್ ಜಾರಿಯಾಗಲಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಬೆಕ್ಕಿನ ಕಲ್ಮಠ ಬಿಎಚ್ ರಸ್ತೆ, ಅಮೀರ್ ಅಹ್ಮದ್ ವೃತ್ತ, ಅಶೋಕ ವೃತ್ತದಲ್ಲಿನ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣ, ಹೊಸ ತೀರ್ಥಹಳ್ಳಿ ರಸ್ತೆ, ಬೈಪಾಸ್ ರಸ್ತೆಯ ತುಂಗಾ ಹೊಸ ಸೇತುವೆವರೆಗೆ ಬರುವಂತಹ ಪ್ರದೇಶದಲ್ಲಿ ಜಾರಿಯಾಗಲಿದೆ ಎಂದರು.
ಈ ಪ್ರದೇಶದಲ್ಲಿನ ಸಾರ್ವಜನಿಕರು ಈ ಅವಧಿಯಲ್ಲಿ ತಮ್ಮ ಬಡಾವಣೆಗಳಿಂದ ಹೊರಕ್ಕೆ ಬರುವಂತಿಲ್ಲ. ಹೊರಗಿನ ಜನರು ಈ ಬಡಾವಣೆಗಳನ್ನು ಪ್ರವೇಶಿಸುವಂತಿಲ್ಲ. ಆದರೆ ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಹಾಲು ಮಾರಾಟ ಕೇಂದ್ರಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ತರಕಾರಿ, ದಿನಸಿ ಮತ್ತು ಹಣ್ಣು ಮಾರಾಟ ಕೇಂದ್ರಗಳಿಗೆ ಬೆಳಿಗ್ಗೆ 5 ರಿಂದ ಬೆಳಗ್ಗೆ 10ರವರೆಗೆ ವಿನಾಯಿತಿ ನೀಡಲಾಗಿದ್ದು, ಇತರ ಎಲ್ಲಾ ಅಂಗಡಿ ಮುಂಗಟ್ಟುಗಳ ವ್ಯವಹಾರವನ್ನು ನಿರ್ಬಂಧಿಸಲಾಗಿದೆ ಎಂದರು.
Get In Touch With Us info@kalpa.news Whatsapp: 9481252093
Discussion about this post