ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ: ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಟಿ. ಶ್ರೀಧರ್ ಅವರನ್ನು ನಿಯೋಜನೆ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ರಾಜ್ಯ ಗುಪ್ತಚರ ಇಲಾಖೆಯಲ್ಲಿನ ಎಸ್’ಪಿ ಆಗಿದ್ದ ಇವರನ್ನು ತತಕ್ಷಣದಿಂದ ಜಾರಿಗೆ ಬರುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಎಸ್’ಪಿ ಟಿ. ಶ್ರೀಧರ್ ಅವರು ಮೂಲತಃ ಕೊಪ್ಪಳ ಜಿಲ್ಲೆಯ ಸಿರುಗುಪ್ಪದವರು.
(ವರದಿ: ಮುರಳೀಧರ್, ಕೊಪ್ಪಳ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post