No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ‍್ಯಾಂಕ್

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕೃತ ರ‍್ಯಾಂಕಿಂಗ್ | ನವದೆಹಲಿಯಲ್ಲಿ ಇಂದು ಸಚಿವ ಧಮೇಂದ್ರ ಪ್ರಧಾನ್‌ರಿಂದ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2022
in ಶಿವಮೊಗ್ಗ
0
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |            

ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ Central Minister Dharmendra Pradhan ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ NIRF ಕುವೆಂಪು ವಿಶ್ವವಿದ್ಯಾಲಯವು Kuvempu University 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಕಳೆದ ಬಾರಿಯಂತೆಯೇ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ.

ದೇಶದ 4100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 42.44ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ 86ನೇ ಸ್ಥಾನ ಪಡೆದಿದೆ. 2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 86ನೇ ರ‍್ಯಾಂಕ್ ಪಡೆಯುವುದರೊಂದಿಗೆ, ಕೋವಿಡ್-19 ಮತ್ತು ವಿವಿಯ ಸುಮಾರು 10 ಪ್ರಾಧ್ಯಾಪಕರು ನಿವೃತ್ತರಾದ ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ ಸ್ಥಾನ ಪಡೆದುಕೊಂಡಿದೆ.
ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್‌ನಂತಹ ವೃತ್ತಿಪರ ಕೋರ್ಸ್ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶಾದ್ಯಂತ (4100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ.

ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 33 ಮತ್ತು 64ನೇ ರ‍್ಯಾಂಕ್ ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.

Also read: ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದ್ದು, ಈಗ ಏಳನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ವೈದ್ಯಕೀಯ, ವಾಸ್ತುಶಿಲ್ಪ, ಕಾನೂನು ವಿಷಯಗಳ ಶಿಕ್ಷಣ ಸಂಸ್ಥೆಗಳ ಜೊತೆಗೆ ವಿಶ್ವವಿದ್ಯಾಲಯಗಳ ಶ್ರೇಣೀಕರಣವನ್ನು ಎನ್‌ಐಆರ್‌ಎಫ್ ಅಡಿಯಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರತಿ ವರ್ಷ ಕೈಗೊಳ್ಳುತ್ತದೆ.
ವಿಶ್ವವಿದ್ಯಾಲಯದ ರ‍್ಯಾಂಕಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, ಎನ್ ಐ ಆರ್ ಎಫ್ ಮೌಲ್ಯಮಾಪನದ ಅವಧಿಯಲ್ಲಿ ಕೋವಿಡ್-19ನಂತಹ ಮಹಾಮಾರಿ ಶೈಕ್ಷಣಿಕ ಸಂಸ್ಥೆಗಳನ್ನು ಕಳೆಗುಂದಿಸಿತ್ತು. ಜೊತೆಗೆ ವಿವಿಯ ಕಲಾ, ವಿಜ್ಞಾನ ವಿಭಾಗಗಳಲ್ಲಿ ಸುಮಾರು 10 ಮಂದಿ ಹಿರಿಯ ಪ್ರಾಧ್ಯಾಪಕರು ಸೇವೆಯಿಂದ ನಿವೃತ್ತರಾಗಿದ್ದು, ಅವರ ಸಂಶೋಧನಾ ಉತ್ಪಾದಕತೆ ಮತ್ತು ಕೊಡುಗೆಗಳು ರ‍್ಯಾಂಕಿಂಗ್ ನಿರ್ಣಯದಲ್ಲಿ ಪರಿಗಣನೆಯಾಗಿಲ್ಲ. ಆದಾಗ್ಯೂ ವಿವಿಯು ಅಗ್ರ 100 ಸಂಸ್ಥೆಗಳ ಪಟ್ಟಿಯಲ್ಲಿ ಸ್ಥಾನಪಡೆದಿದ್ದು ಸಂತಸ ತಂದಿದೆ ಎಂದು ತಿಳಿಸಿದರು.

ಕುಲಸಚಿವರಾದ ಜಿ. ಅನುರಾಧ ಪ್ರತಿಕ್ರಿಯಿಸಿ, ದೇಶದ ಪ್ರತಿಶ್ಠಿತ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸ್ಪರ್ಧಿಸಿ ಗ್ರಾಮೀಣ ಭಾಗದ ಸರ್ಕಾರಿ ಸಂಯೋಜಿತ ವಿಶ್ವವಿದ್ಯಾಲಯ ಹಾಗೂ ಕೇವಲ ಮೂರು ದಶಕಗಳ ಹಿನ್ನಲೆಯುಳ್ಳ ಸಂಸ್ಥೆಯೊಂದು ಸತತ ನಾಲ್ಕು ವರ್ಷಗಳಿಂದ ನೂರರ ಪಟ್ಟಿಯೊಳಗೆ ಸ್ಥಾನ ಪಡೆಯುತ್ತಾ ಬಂದಿರುವುದು ಸಂತಸದ ವಿಚಾರ. ಶೈಕ್ಷಣಿಕ, ಆಡಳಿತಾತ್ಮಕ ವಿಚಾರಗಳಲ್ಲಿ ಇನ್ನಷ್ಟು ಸುಧಾರಣೆ ತಂದು ರ‍್ಯಾಂಕಿಂಗ್ ಉತ್ತಮಪಡಿಸಲಾಗುವುದು ಎಂದಿದ್ದಾರೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಮಾನದಂಡಗಳು: ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ ಫ್ರೇಂವರ್ಕ್ ಐದು ಪ್ರಮುಖ ಮಾನದಂಡಗಳ ಆಧಾರದ ಮೇಲೆ ಶ್ರೇಣೀಕರಣ ನೀಡುತ್ತದೆ. ರ‍್ಯಾಂಕಿಂಗ್‌ಗೆ ಒಳಪಡುವ ಶೈಕ್ಷಣಿಕ ಸಂಸ್ಥೆಗಳಲ್ಲಿನ ಬೋಧನೆ, ಕಲಿಕೆಗಾಗಿ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಸೌಲಭ್ಯ, ಸಂಸ್ಥೆಗಳಲ್ಲಿ ನಡೆಯುತ್ತಿರುವ ಸಂಶೋಧನೆ ಮತ್ತು ವೃತ್ತಿಪರ ಚಟುವಟಿಕೆಗಳು, ಕೋರ್ಸ್ಗಳ ಮೂಲಕ ಸಂಸ್ಥೆ ಸೃಷ್ಟಿಸುತ್ತಿರುವ ಉದ್ಯೋಗಾವಕಾಶ ಮತ್ತು ಪರೀಕ್ಷೆಯ ಉತ್ತೀರ್ಣದ ಪ್ರಮಾಣ ಸೇರಿದಂತೆ ಉನ್ನತ ಶಿಕ್ಷಣದ ಫಲಿತಾಂಶ, ಶೈಕ್ಷಣಿಕ ಸಂಸ್ಥೆಯ ಮೂಲಕ ನಡೆಯುತ್ತಿರುವ ವಿಸ್ತರಣೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯ ಚಟುವಟಿಕೆಗಳು ಮತ್ತು ಸಂಸ್ಥೆಯ ಕುರಿತು ಸಿಬ್ಬಂದಿ, ಸಂಶೋಧಕರು, ಸಾರ್ವಜನಿಕರ ಗ್ರಹಿಕೆ ಮತ್ತು ಅಭಿಪ್ರಾಯ, ಈ ಐದು ಮಾನದಂಡಗಳ ಮೂಲಕ ಮೌಲ್ಯಮಾಪನ ಮಾಡಿ ಶ್ರೇಣೀಕರಣ ನೀಡಲಾಗುತ್ತದೆ.

ರಾಜ್ಯದ ಉನ್ನತ ಶಿಕ್ಷಣದ ಶೈಕ್ಷಣಿಕ ಸಂಸ್ಥೆಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 10ನೇ ಸ್ಥಾನ ಪಡೆದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (7), ಮೈಸೂರು ವಿಶ್ವವಿದ್ಯಾಲಯ (33), ಮೈಸೂರಿನ ಜೆ.ಎಸ್.ಎಸ್. ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಂಡ್ ರಿಸರ್ಚ್ (34), ಬೆಂಗಳೂರು ವಿಶ್ವವಿದ್ಯಾಲಯ (64), ಬೆಂಗಳೂರಿನ ಕ್ರೆಸ್ಟ್ ವಿವಿ (71), ಮಂಗಳೂರಿನ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾಲಯ (75) ಸ್ಥಾನ ಪಡೆದಿವೆ. ಇನ್ನುಳಿದಂತೆ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ (72), ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ (79), ಕೆಎಲ್‌ಯ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (88), ಮಂಗಳೂರಿನ ಯೆನಪೊಯ ವಿವಿಗಳು (97) ಟಾಪ್ 100ರಲ್ಲಿರುವ ಕರ್ನಾಟಕದ ಇತರೆ ಶೈಕ್ಷಣಿಕ ಸಂಸ್ಥೆಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Central Minister Dharmendra PradhanKannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversitLatest News KannadaLocal NewsMalnad NewsNewsinKannadaNewsKannadaNIRFShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಚಿವ ಧರ್ಮೇಂದ್ರ ಪ್ರಧಾನ್ಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share214Tweet123Send
Previous Post

ಗಾಳಿ, ಮಳೆಗೆ ಮನೆಯ ಮೇಲೆ ಉರುಳಿದ ಮರ: ಇಬ್ಬರಿಗೆ ಗಾಯ

Next Post

ಡಾನ್ಬಾಸ್ಕೋ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ: ರಾಘವ್ ಬೈಲಪ್ಪ ಶುಭ ಹಾರೈಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾನ್ಬಾಸ್ಕೋ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ: ರಾಘವ್ ಬೈಲಪ್ಪ ಶುಭ ಹಾರೈಕೆ

ಡಾನ್ಬಾಸ್ಕೋ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ: ರಾಘವ್ ಬೈಲಪ್ಪ ಶುಭ ಹಾರೈಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL