Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ

ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ | ದುರಾಸೆಯೇ ಭ್ರಷ್ಟಾಚಾರದ ಮೂಲ

February 28, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ Santhosh Hegade ಅಭಿಪ್ರಾಯಪಟ್ಟರು.

ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆ ಮಂಡ್ಯ ಜಿಲ್ಲಾ ಘಟಕಗಳು ಜಂಟಿ ಸಹಯೋಗದಲ್ಲಿ ಕುವೆಂಪು ವಿವಿಯ Kuvempu University ಬಸವ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಶ್ವ ಸಾಮಾಜಿಕ ನ್ಯಾಯ ಮತ್ತು ಹೆಣ್ಣುಮಕ್ಕಳ ಹಕ್ಕುಗಳು: ಕಾನೂನು ಅರಿವು’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದುರಾಸೆ, ಭ್ರಷ್ಟಾಚಾರ ಮಾಡಿ ಸಂಪತ್ಭರಿತರಾದವರು ಇನ್ನಷ್ಟು ಲಂಚ ಪಡೆಯುವುದು, ಸೋಮಾರಿತನ ಬೆಳೆಸುವುದು, ಅಧಿಕಾರ ಕೊಂಡುಕೊಳ್ಳುವುದು ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದರು.

ಮಾನವನ ದುರಾಸೆಯ ಕಾರಣದಿಂದಾಗಿ ದೇಶದ ಹತ್ತಾರು ಲಕ್ಷ ಕೋಟಿಗಳ ಹಣ ಕೊಳ್ಳೆ ಹೊಡೆಯಲಾಗುತ್ತಿದೆ. 1950ನೇ ದಶಕದಿಂದ ಇಲ್ಲಿಯವರೆಗೂ ಜೀಪ್, ಬೋಫೋರ್ಸ್, ಕಾಮನ್ವೆಲ್ತ್ ಕ್ರೀಡಾಕೂಟ, ಕಲ್ಲಿದ್ದಲು ಮತ್ತು 2ಜಿ ಹಗರಣಗಳು ದೇಶವನ್ನು ಬಡವಾಗಿಸಿವೆ. ಇಂದಿಗೂ ಇದೇ ಸ್ಥಿತಿ ಮುಂದುವರಿದಿದೆ. ಹೀಗಾಗಿ ಹಣದುಬ್ಬರ, ದಿನಬಳಕೆ ವಸ್ತುಗಳ ದರ ಏರಿಕೆ, ಅನೀತಿಗಳು ಹೆಚ್ಚಾಗಿವೆ. ಯುವಸಮುಹ, ವಿದ್ಯಾರ್ಥಿಗಳು ಅನೈತಿಕ ಹಾದಿ ಹಿಡಿದವರ ಬಗ್ಗೆ ಸೂಕ್ಷ್ಮಾವಾಗಿರಬೇಕು ಎಂದು ಸಲಹೆಯಿತ್ತರು.

ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಸ್ ಸಿದ್ಧರಾಜು ಮಾತನಾಡಿ, ಶಿಕ್ಷಣ ಪಡೆದ ನಂತರ ಅದನ್ನು ಸಾಮಾಜಿಕ ಒಳಿತಿಗಾಗಿ ಬಳಸುವುದು ಮುಖ್ಯ. ಇಲ್ಲವಾದಲ್ಲಿ ದೇಶದಲ್ಲಿ ನೈಜ ಬದಲಾವಣೆ ಆಗುವುದಿಲ್ಲ. ಯುವಜನರಿಗೆ ಅವಕಾಶಗಳು ದೊರೆಯದೆ ಅನುತ್ಪಾದಕತೆಯತ್ತ ಸಾಗಬೇಕಾಗುತ್ತದೆ. ಧಾರ್ಮಿಕ ವಿಷಯಗಳಿಗಿಂತ ಸಾಮಾಜಿಕ, ಶೈಕ್ಷಣಿಕ ಅಗತ್ಯಗಳು ಮುಖ್ಯವಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

Also read: ಗಮನಿಸಿ! ಫೆ. 29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ ಎನ್ ಚಂದನ್ ಮಾತನಾಡಿ, ಬಾಲಕಿಯರು, ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ನೆರೆಹೊರೆಯವರಿಂದಲೇ ಅತಿಹೆಚ್ಚಿನ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಬಾಲ್ಯದಿಂದಲೇ ಅವರಿಗೆ ದೌರ್ಜನ್ಯ ರಕ್ಷಣೆಯ ಅರಿವು ನೀಡುವುದು ಮುಖ್ಯ. ಪೋಕ್ಸೋ ಅಪರಾಧದ ಸಮಸ್ಯೆ ಅಧಿಕವಾದ ಕಾರಣ ಅಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಮೀಸಲಾದ ಎರಡು ವಿಶೇಷ ಕೋರ್ಟುಗಳು ಶಿವಮೊಗ್ಗದಲ್ಲಿ ಇವೆ. ಅಗತ್ಯವಿರುವ ಎಲ್ಲ ಮಹಿಳೆಯರಿಗೆ, ಆಸಿಡ್ ದಾಳಿಗೆ ಒಳಗಾದವರಿಗೆ ನ್ಯಾಯ ಪಡೆಯಲು ಉಚಿತ ಕಾನೂನಿನ ನೆರವು ನೀಡುವ ಕೆಲಸವನ್ನು ಪ್ರಾಧಿಕಾರದ ವತಿಯಿಂದ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ ಎಸ್ ವೆಂಕಟೇಶ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮಂಜುನಾಥ್ ನಾಯಕ್, ವಿವಿಯ ಕುಲಸಚಿವರು ವಿಜಯಕುಮಾರ್ ಹೆಚ್ ಬಿ , ಪರೀಕ್ಷಾಂಗ ಕುಲಸಚಿವರು ಎಸ್ ಎಂ ಗೋಪಿನಾಥ್, ಹಣಕಾಸು ಅಧಿಕಾರಿ ಜಿ ಬಂಗಾರಪ್ಪ ವಿವಿಯ ವಿವಿಧ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಬೀ ಜಿ ಶಿವಮೂರ್ತಿ, ಬೆಂಗಳೂರು ನಗರ ಪೊಲೀಸ್ ಉಪ ಆಯುಕ್ತರು ಎಸ್ ಸಿದ್ಧರಾಜು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆಯ ಅಧ್ಯಕ್ಷೆ ರಜನಿರಾಜ್, ಮಹಿಳಾ ಹಕ್ಕುಗಳ ಅರಿವು ಕಾರ್ಯಕರ್ತೆ ಕೀರ್ತನ ಅವರುಗಳು ಮಹಿಳೆಯರು, ವಿದ್ಯಾರ್ಥಿನಿಯರಿಗೆ ಅಗತ್ಯವಿರುವ ಕಾನೂನಿನ ತಿಳುವಳಿಕೆ, ಹಕ್ಕು, ಸವಲತ್ತು, ಜವಾಬ್ದಾರಿಗಳ ಕುರಿತು ಉಪ್ಯನ್ಯಾಸ ನೀಡಿ ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news        

Kalahamsa Infotech private limited                          

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaSanthosh HegadeShankaraghattaShimogaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್ಸಂತೋಷ್ ಹೆಗ್ಡೆ
Previous Post

51ರ ಸಂಭ್ರಮದಲ್ಲಿ ಬಹು ಕ್ಷೇತ್ರದ `ಕೃಷಿಕ’ ಪತ್ರಕರ್ತ ಗಜೇಂದ್ರಸ್ವಾಮಿ

Next Post

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!