ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಚಲನಚಿತ್ರ ಎಂಬುದು ಕೇವಲ ಒಂದು ಮನೋರಂಜನ ಮಾಧ್ಯಮವಲ್ಲ ಬದಲಾಗಿ ನೋಡುಗರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಾಮಾಜಿಕ ಬದಲಾವಣೆಯನ್ನು ತರುವಂತಹ ಸಾಮರ್ಥ್ಯವುಳ್ಳ ಸಶಕ್ತ ಮಾಧ್ಯಮವಾಗಿದೆ ಎಂದು ಕುವೆಂಪು ವಿವಿ ಪ್ರಭಾರ ಕುಲಪತಿ ಪ್ರೊ.ಎಸ್. ವೆಂಕಟೇಶ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿರುವ ಐದು ದಿನಗಳ 14ನೇ ಸಹ್ಯಾದ್ರಿ ಸಿನಿಮೋತ್ಸವವನ್ನು Sahyadri Film Festival ಉದ್ಘಾಟಿಸಿ ಅವರು ಮಾತನಾಡಿದರು. ಚಲನಚಿತ್ರಗಳು ಸಾಮಾಜಿಕ ಬದಲಾವಣೆ ಸಾಧನಗಳು ಎನ್ನಲು ಕನ್ನಡವು ಸೇರಿದಂತೆ ಜಾಗತಿಕರಂಗದಲ್ಲಿ ಹಲವು ನಿದರ್ಶನಗಳಿವೆ. ರಾಜ್ಕುಮಾರ್ರ Rajkumar `ಬಂಗಾರದ ಮನುಷ್ಯ` ಸಿನಿಮಾ ಮೂಲಕ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ದೊಡ್ಡ ಆಂದೋಲನವೇ ನಡೆಯಿತು ಎಂದರು.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದ ಸಿನಿಮಾಗಳು ಜಾಗತಿಕ ಮಟ್ಟದಲ್ಲೂ ಹೆಸರು ಮಾಡುತ್ತಿದೆ. ಸ್ಥಳೀಯ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಸಂದೇಶವನ್ನು ಸಾರುವಂಥಹ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗುತ್ತಿವೆ. ಈ ದಿಸೆಯಲ್ಲಿ ಕನ್ನಡ ಚಿತ್ರರಂಗ ಮುನ್ನುಡಿ ಇಡುತ್ತಿರುವುದು ಪ್ರಶಂಸನೀಯ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Also read: ಭದ್ರಾವತಿಯ 5 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಸಿನಿಮೋತ್ಸವದ ವಿಷಯ ಮುಗ್ಧ ಮಕ್ಕಳ ಕಣ್ಣುಗಳಲ್ಲಿ ಪ್ರಪಂಚಕುರಿತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಡಿ ಎಸ್ ಪೂರ್ಣಾನಂದ ಮಾತನಾಡಿ, ಸಿನಿಮಾವನ್ನು ಕೇವಲ ವೀಕ್ಷಿಸಿ ಮನೋರಂಜನೆ ಪಡೆಯುವುದಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳದೆ, ಅದರಲ್ಲಿ ಕಾಣುವ ವಿಚಾರಗಳನ್ನು ಚರ್ಚಿಸುವುದು ಸಿನಿಮಾ ನೋಡುವ ಕ್ರಮವಾಗಿದೆ. ಒಂದು ಸದಭಿರುಚಿಯ ಸಿನಿಮಾವನ್ನು ವೀಕ್ಷಿಸುವುದು ಒಂದು ಉತ್ತಮ ಪುಸ್ತಕ ಓದುವುದಕ್ಕೆ ಸಮವಾಗಿರುತ್ತದೆ. ಸಿನಿಮೋತ್ಸವದಲ್ಲಿ ಪ್ರದರ್ಶಿಸುವಂತ ಎಲ್ಲಾ ಸಿನಿಮಾಗಳಲ್ಲಿ ಮಕ್ಕಳ ಮುಗ್ಧತೆ, ಜಾಣ್ಮೆ, ಬಡ ಮಕ್ಕಳ ನೋವು ನಲಿವು ಮತ್ತು ಶೋಷಣೆಗೆ ಗುರಿಯಾಗಿ ಅನುಭವಿಸಿದ ಸಂಕಷ್ಟದ ಕುರಿತ ಕಥೆಗಳನ್ನು ಒಳಗೊಂಡಿವೆ. ಮಕ್ಕಳ ಸಿನಿಮಾಗಳನ್ನು ನೋಡುವುದು ಮಾನವೀಯತೆಯನ್ನು ಆಚರಿಸುವ, ಅನುಸರಿಸುವ ಪ್ರಕ್ರಿಯೆಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶೋಕ್ ಕಶ್ಯಪ್, Ashok Kashyap ವಿಭಾಗದ ಅಧ್ಯಕ್ಷರಾದ ಡಾ. ಸತ್ಯಪ್ರಕಾಶ್ ಎಂ.ಆರ್, ಉಪನ್ಯಾಸಕರಾದ ಪ್ರೊ. ಸತೀಶ್ಕುಮಾರ್, ಪ್ರೊ. ವರ್ಗೀಸ್ ಪಿ.ಎ, ಡಾ. ರುಮಾನ ತನ್ವೀರ್, ವಿನಯ್ ಜಿ.ಪಿ. ಸಂಶೋಧನಾರ್ಥಿಗಳು ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post