ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಇತ್ತೀಚೆಗೆ ಬಿಡುಗಡೆಯಾದ ಜಗತ್ತಿನ ಶ್ರೇಷ್ಠ ಶೇ. 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಜೆ.ಗಿರೀಶ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಅವರನ್ನು ಬುಧವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಸನ್ಮಾನಿಸಲಾಯಿತು.


ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ, ಸಿಂಡಿಕೇಟ್ ಸದಸ್ಯರುಗಳಾದ ಜಿ.ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಪ್ರೊ. ಕಿರಣ್ ದೇಸಾಯಿ, ರಾಮಲಿಂಗಪ್ಪ.ಹೆಚ್, ಬಿ.ನಿರಂಜನ್ ಮೂರ್ತಿ, ಎನ್.ಆರ್ ಮಂಜುನಾಥ್, ಎಸ್.ಆರ್. ನಾಗರಾಜ್ ಮತ್ತಿತರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















