Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ

February 26, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯದ #Kuvempu University ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವ ಸಂಬಂಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ಒತ್ತಾಯಿಸಿದೆ.

ಈ ಬಗ್ಗೆ ಕುಲಸಚಿವೆ ಜಿ. ಅನುರಾಧ ಅವರಿಗೆ ಮನವಿ‌ಸಲ್ಲಿರುವ ಸಂಘ, 2019-2020ರ ಆವೃತ್ತಿ-1 ಮತ್ತು ಆವೃತ್ತಿ-2ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ಕೊರ್ಸ್‍ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸುವಂತೆ ನಿರ್ಧರಿಸಿ ಸುತ್ತೋಲೆ ಹೊರಡಿಸಿರುವುದನ್ನು ನಿಯಮಬಾಹಿರವೆಂದು ತಿಳಿಸಿದ್ದಾರೆ. ಪರೀಕ್ಷೆಗಳನ್ನು ನಡೆಸಿಯೇ ಫಲಿತಾಂಶ ನೀಡುವಂತೆ ಅಧ್ಯಾಪಕರ ಸಂಘವು ಹಲವು ಬಾರಿ ಮನವಿಗಳನ್ನು ಸಲ್ಲಿಸಿತ್ತು.

2019-20ನೇ ಸಾಲಿನ‌ ದೂರಶಿಕ್ಷಣದ ವಿದ್ಯಾರ್ಥಿಗಳಿಗೆ ಕೋವಿಡ್ ನಿರ್ಬಂಧದ ಅವಧಿಯಲ್ಲಿ ಪರೀಕ್ಷೆಗಳು ನಡೆದಿಲ್ಲವಾದರೂ ಈ ವಿದ್ಯಾರ್ಥಿಗಳು ನಿರಂತರ ಮೌಲ್ಯಮಾಪನ ಪದ್ಧತಿಯಲ್ಲಿ ಅಧ್ಯಯನ ಮಾಡದೇ ಇರುವ ಕಾರಣ, ಕೇವಲ ಅಂತರಿಕ ಅಂಕಗಳ ಆಧಾರದಲ್ಲಿ ತೇರ್ಗಡೆಗೊಳಿಸುವ ಕೋವಿಡ್-19ರ ಯು.ಜಿ.ಸಿ.ಯ ನಿಯಮಗಳು ಅನ್ವಯಿಸುವುದಿಲ್ಲ ಎಂದು ಸಂಘ ಅಭಿಪ್ರಾಯಪಟ್ಟಿದೆ.

2021ರ ಜುಲೈ ತಿಂಗಳ ಯು.ಜಿ.ಸಿ. ಆದೇಶ,‌ಹಾಗೂ ಸರ್ಕಾರದ ಇತ್ತೀಚಿನ ಸ್ಪಷ್ಟ ನಿರ್ದೇಶನದ ಅನ್ವಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿಯೇ ಫಲಿತಾಂಶ ನಿಡಬೇಕಾಗಿತ್ತು. ಕಳೆದ ಅಕ್ಟೋಬರ್ 30 ರಂದು ನಡೆದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಯು.ಜಿ.ಸಿ. ಹಾಗೂ ಸರ್ಕಾರದ ನಿಯಮಗಳನ್ವಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ನೀಡುವಂತೆ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಹಿಂದೆ ನಡೆದ ವಿದ್ಯಾವಿಷಯಕ ಪರಿಷತ್ ಸಭೆಗಳಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ನೀಡುವಂತೆ ಒತ್ತಾಯಿಸಲಾಗಿತ್ತು. ಪರಿಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ, ಪ್ರಕರಣವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಏಕಾಏಕಿ ಫಲಿತಾಂಶ ಪ್ರಕಟಿಸಿರುವುದು ಕಾನೂನಿನ ಅನ್ವಯ ಅಸಿಂಧುವಾಗುತ್ತದೆ ಎಂದು ಸಂಘ ಹೇಳಿಕೆ ಬಿಡುಗಡೆ ಮಾಡಿದೆ.

ಇನ್ನು ಫೆ. 07ರ ಅಧಿಸೂಚನೆಯಲ್ಲಿ ತಿಳಿಸಿರುವಂತೆ, 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ದೂರಶಿಕ್ಷಣ ವಿದ್ಯಾರ್ಥಿಗಳನ್ನು ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ತೇರ್ಗಡೆಮಾಡಲು ಡೀನರು, ಶಾಲಾ ನಿರ್ದೇಶಕರು ಹಾಗೂ ವಿಭಾಗಾಧ್ಯಕ್ಷರ ಯಾವುದೇ ಸಭೆಯಲ್ಲಿ ಚರ್ಚಿಸಿರುವುದಿಲ್ಲ ಹಾಗೂ ನಿರ್ಣಯಿಸಿರುವುದಿಲ್ಲ. ಆದರೆ, ಡೀನರು, ಶಾಲಾ ನಿರ್ದೇಶಕರು ಮತ್ತು ವಿಭಾಗಾಧ್ಯಕ್ಷರುಗಳನ್ನು ನಿಯಮಬಾಹಿರವಾದ ಇಂತಹ ಶೈಕ್ಷಣಿಕ ಅಪರಾಧಗಳಲ್ಲಿ ಭಾಗೀದಾರರನ್ನಾಗಿ ಮಾಡಿರುವುದು ಅಕ್ಷಮ್ಯ. ಸಾರ್ವಜನಿಕ ವಲಯದಲ್ಲಿ ಈ ಕುರಿತು ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಕಾಲೇಜುಗಳಲ್ಲಿ ಮತ್ತು‌ಅಧ್ಯಯನ ಕೇಂದ್ರಗಳಲ್ಲಿ ನಡೆದಿರುವ ಸಂಪರ್ಕ ತರಗತಿಗಳ ಹಾಜರಾತಿಯನ್ನು ಪರಿಶೀಲಿಸದೆ, ನಿಯಮಬಾಹಿರವಾಗಿ 05 ಅಂಕಗಳನ್ನು ಪರೀಕ್ಷಾಂಗ ಕುಲಸಚಿವರೇ ಪ್ರತಿ ಪತ್ರಿಕೆಗೂ ನೀಡಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇದರಿಂದ, ಈಗಾಗಲೇ ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಕಾನೂನಾತ್ಮಕವಾಗಿ ತೊಂದರೆಯಾಗುತ್ತದೆ.  2019-2020ರಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಹೊಮ್ ಅಸೈನ್‍ಮೆಂಟ್‍ಗಳನ್ನು ಈಗಲೂ ಪಡೆಯುತ್ತಿದ್ದು, ಮೌಲ್ಯಮಾಪನ ಕಾರ್ಯವನ್ನು ನಡೆಸಲಾಗುತ್ತಿದೆ. ಆದರೆ, ಅಂಕಪಟ್ಟಿಯಲ್ಲಿ “ಆಗಸ್ಟ್-2021 ರಲ್ಲಿ ನಡೆದಿರುವ ಪರೀಕ್ಷೆಗಳ ಫಲಿತಾಂಶ” ಎಂದು ಪ್ರಕಟಿಸಲಾಗಿದೆ‌‌ ಎಂದು‌ ದೂರಿದ್ದಾರೆ.

ಇದೇ ಪರೀಕ್ಷಾಂಗ ಕುಲಸಚಿವರು ಸದರಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಡಿಸೆಂಬರ್-2021 ರಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತಾರೆ. ಮುಂದಿನ ದಿನಗಳಲ್ಲಿ ಈ ರೀತಿಯಲ್ಲಿ ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅತಿ ಗಂಭೀರವಾದ ಕಾನೂನಿನ ಸಮಸ್ಯೆಗಳು ಉಂಟಾಗುತ್ತವೆ.  ವಿಶ್ವವಿದ್ಯಾಲಯದ ಕೆಲವು ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸಕ್ಷಮ ಪ್ರಾಧಿಕಾರಗಳ ತೀರ್ಮಾನಕ್ಕೆ ವಿರುದ್ಧವಾಗಿ, ನಿಯಮಬಾಹಿರವಾಗಿ ಕೆಲವು ಕೋರ್ಸ್‍ಗಳ ಫಲಿತಾಂಶವನ್ನು ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಪ್ರಕಟಿಸಿದ್ದಾರೆ.

ಇಂತಹ ಪದವಿಗಳು ಮುಂದಿನ ದಿನಗಳಲ್ಲಿ ಯು.ಜಿ.ಸಿ.ಯಿಂದ ಅಮಾನ್ಯಗೊಳ್ಳುವ ಸಾಧ್ಯತೆಗಳಿದ್ದು, ಈ ರೀತಿಯಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೂ ಸಹ ತೊಂದರೆಯಾಗುವ ಸಂಭವವಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರಾಮಾಣಿಕ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಉದ್ಯೋಗ, ಸಂಶೋಧನೆ ಹಾಗೂ ಇನ್ನಿತರೆ ಶೈಕ್ಷಣಿಕ ಅವಕಾಶಗಳಿಗೂ ತೊಂದರೆಯಾಗುವ ಸಂಭವವಿದೆ. ಈ ಹಿನ್ನಲೆಯಲ್ಲಿ
ನಿಯಮಬಾಹಿರವಾಗಿ ನೀಡಿರುವ ಫಲಿತಾಂಶವನ್ನು ವಿದ್ಯಾರ್ಥಿಗಳು ಮತ್ತು‌ ವಿಶ್ವವಿದ್ಯಾಲಯದ ಹಿತದೃಷ್ಟಿಯಿಂದ ತಕ್ಷಣವೇ ಹಿಂಪಡೆದು, ನಿಯಮಾನುಸಾರ ಪರೀಕ್ಷೆಗಳನ್ನು ನಡೆಸಬೇಕೆಂದು ಸಂಘ ಒತ್ತಾಯಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ : ಜಿ. ಅನುರಾಧ

Next Post

ಮೃತ ಹರ್ಷ ಮನೆಗೆ ಜಯಲಕ್ಷ್ಮೀ ಈಶ್ವರಪ್ಪ ಭೇಟಿ : ಕುಟುಂಬಸ್ಥರಿಗೆ ಸಾಂತ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೃತ ಹರ್ಷ ಮನೆಗೆ ಜಯಲಕ್ಷ್ಮೀ ಈಶ್ವರಪ್ಪ ಭೇಟಿ : ಕುಟುಂಬಸ್ಥರಿಗೆ ಸಾಂತ್ವಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!