No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ

kalpa News by kalpa News
February 26, 2022
in ಶಿವಮೊಗ್ಗ
0
ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯದ #Kuvempu University ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವ ಸಂಬಂಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ಒತ್ತಾಯಿಸಿದೆ.

ಈ ಬಗ್ಗೆ ಕುಲಸಚಿವೆ ಜಿ. ಅನುರಾಧ ಅವರಿಗೆ ಮನವಿ‌ಸಲ್ಲಿರುವ ಸಂಘ, 2019-2020ರ ಆವೃತ್ತಿ-1 ಮತ್ತು ಆವೃತ್ತಿ-2ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ಕೊರ್ಸ್‍ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸುವಂತೆ ನಿರ್ಧರಿಸಿ ಸುತ್ತೋಲೆ ಹೊರಡಿಸಿರುವುದನ್ನು ನಿಯಮಬಾಹಿರವೆಂದು ತಿಳಿಸಿದ್ದಾರೆ. ಪರೀಕ್ಷೆಗಳನ್ನು ನಡೆಸಿಯೇ ಫಲಿತಾಂಶ ನೀಡುವಂತೆ ಅಧ್ಯಾಪಕರ ಸಂಘವು ಹಲವು ಬಾರಿ ಮನವಿಗಳನ್ನು ಸಲ್ಲಿಸಿತ್ತು.

2019-20ನೇ ಸಾಲಿನ‌ ದೂರಶಿಕ್ಷಣದ ವಿದ್ಯಾರ್ಥಿಗಳಿಗೆ ಕೋವಿಡ್ ನಿರ್ಬಂಧದ ಅವಧಿಯಲ್ಲಿ ಪರೀಕ್ಷೆಗಳು ನಡೆದಿಲ್ಲವಾದರೂ ಈ ವಿದ್ಯಾರ್ಥಿಗಳು ನಿರಂತರ ಮೌಲ್ಯಮಾಪನ ಪದ್ಧತಿಯಲ್ಲಿ ಅಧ್ಯಯನ ಮಾಡದೇ ಇರುವ ಕಾರಣ, ಕೇವಲ ಅಂತರಿಕ ಅಂಕಗಳ ಆಧಾರದಲ್ಲಿ ತೇರ್ಗಡೆಗೊಳಿಸುವ ಕೋವಿಡ್-19ರ ಯು.ಜಿ.ಸಿ.ಯ ನಿಯಮಗಳು ಅನ್ವಯಿಸುವುದಿಲ್ಲ ಎಂದು ಸಂಘ ಅಭಿಪ್ರಾಯಪಟ್ಟಿದೆ.

2021ರ ಜುಲೈ ತಿಂಗಳ ಯು.ಜಿ.ಸಿ. ಆದೇಶ,‌ಹಾಗೂ ಸರ್ಕಾರದ ಇತ್ತೀಚಿನ ಸ್ಪಷ್ಟ ನಿರ್ದೇಶನದ ಅನ್ವಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿಯೇ ಫಲಿತಾಂಶ ನಿಡಬೇಕಾಗಿತ್ತು. ಕಳೆದ ಅಕ್ಟೋಬರ್ 30 ರಂದು ನಡೆದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಯು.ಜಿ.ಸಿ. ಹಾಗೂ ಸರ್ಕಾರದ ನಿಯಮಗಳನ್ವಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ನೀಡುವಂತೆ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಹಿಂದೆ ನಡೆದ ವಿದ್ಯಾವಿಷಯಕ ಪರಿಷತ್ ಸಭೆಗಳಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ನೀಡುವಂತೆ ಒತ್ತಾಯಿಸಲಾಗಿತ್ತು. ಪರಿಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ, ಪ್ರಕರಣವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಏಕಾಏಕಿ ಫಲಿತಾಂಶ ಪ್ರಕಟಿಸಿರುವುದು ಕಾನೂನಿನ ಅನ್ವಯ ಅಸಿಂಧುವಾಗುತ್ತದೆ ಎಂದು ಸಂಘ ಹೇಳಿಕೆ ಬಿಡುಗಡೆ ಮಾಡಿದೆ.

ಇನ್ನು ಫೆ. 07ರ ಅಧಿಸೂಚನೆಯಲ್ಲಿ ತಿಳಿಸಿರುವಂತೆ, 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ದೂರಶಿಕ್ಷಣ ವಿದ್ಯಾರ್ಥಿಗಳನ್ನು ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ತೇರ್ಗಡೆಮಾಡಲು ಡೀನರು, ಶಾಲಾ ನಿರ್ದೇಶಕರು ಹಾಗೂ ವಿಭಾಗಾಧ್ಯಕ್ಷರ ಯಾವುದೇ ಸಭೆಯಲ್ಲಿ ಚರ್ಚಿಸಿರುವುದಿಲ್ಲ ಹಾಗೂ ನಿರ್ಣಯಿಸಿರುವುದಿಲ್ಲ. ಆದರೆ, ಡೀನರು, ಶಾಲಾ ನಿರ್ದೇಶಕರು ಮತ್ತು ವಿಭಾಗಾಧ್ಯಕ್ಷರುಗಳನ್ನು ನಿಯಮಬಾಹಿರವಾದ ಇಂತಹ ಶೈಕ್ಷಣಿಕ ಅಪರಾಧಗಳಲ್ಲಿ ಭಾಗೀದಾರರನ್ನಾಗಿ ಮಾಡಿರುವುದು ಅಕ್ಷಮ್ಯ. ಸಾರ್ವಜನಿಕ ವಲಯದಲ್ಲಿ ಈ ಕುರಿತು ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಕಾಲೇಜುಗಳಲ್ಲಿ ಮತ್ತು‌ಅಧ್ಯಯನ ಕೇಂದ್ರಗಳಲ್ಲಿ ನಡೆದಿರುವ ಸಂಪರ್ಕ ತರಗತಿಗಳ ಹಾಜರಾತಿಯನ್ನು ಪರಿಶೀಲಿಸದೆ, ನಿಯಮಬಾಹಿರವಾಗಿ 05 ಅಂಕಗಳನ್ನು ಪರೀಕ್ಷಾಂಗ ಕುಲಸಚಿವರೇ ಪ್ರತಿ ಪತ್ರಿಕೆಗೂ ನೀಡಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇದರಿಂದ, ಈಗಾಗಲೇ ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಕಾನೂನಾತ್ಮಕವಾಗಿ ತೊಂದರೆಯಾಗುತ್ತದೆ.  2019-2020ರಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಹೊಮ್ ಅಸೈನ್‍ಮೆಂಟ್‍ಗಳನ್ನು ಈಗಲೂ ಪಡೆಯುತ್ತಿದ್ದು, ಮೌಲ್ಯಮಾಪನ ಕಾರ್ಯವನ್ನು ನಡೆಸಲಾಗುತ್ತಿದೆ. ಆದರೆ, ಅಂಕಪಟ್ಟಿಯಲ್ಲಿ “ಆಗಸ್ಟ್-2021 ರಲ್ಲಿ ನಡೆದಿರುವ ಪರೀಕ್ಷೆಗಳ ಫಲಿತಾಂಶ” ಎಂದು ಪ್ರಕಟಿಸಲಾಗಿದೆ‌‌ ಎಂದು‌ ದೂರಿದ್ದಾರೆ.

ಇದೇ ಪರೀಕ್ಷಾಂಗ ಕುಲಸಚಿವರು ಸದರಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಡಿಸೆಂಬರ್-2021 ರಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತಾರೆ. ಮುಂದಿನ ದಿನಗಳಲ್ಲಿ ಈ ರೀತಿಯಲ್ಲಿ ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅತಿ ಗಂಭೀರವಾದ ಕಾನೂನಿನ ಸಮಸ್ಯೆಗಳು ಉಂಟಾಗುತ್ತವೆ.  ವಿಶ್ವವಿದ್ಯಾಲಯದ ಕೆಲವು ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸಕ್ಷಮ ಪ್ರಾಧಿಕಾರಗಳ ತೀರ್ಮಾನಕ್ಕೆ ವಿರುದ್ಧವಾಗಿ, ನಿಯಮಬಾಹಿರವಾಗಿ ಕೆಲವು ಕೋರ್ಸ್‍ಗಳ ಫಲಿತಾಂಶವನ್ನು ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಪ್ರಕಟಿಸಿದ್ದಾರೆ.

ಇಂತಹ ಪದವಿಗಳು ಮುಂದಿನ ದಿನಗಳಲ್ಲಿ ಯು.ಜಿ.ಸಿ.ಯಿಂದ ಅಮಾನ್ಯಗೊಳ್ಳುವ ಸಾಧ್ಯತೆಗಳಿದ್ದು, ಈ ರೀತಿಯಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೂ ಸಹ ತೊಂದರೆಯಾಗುವ ಸಂಭವವಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರಾಮಾಣಿಕ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಉದ್ಯೋಗ, ಸಂಶೋಧನೆ ಹಾಗೂ ಇನ್ನಿತರೆ ಶೈಕ್ಷಣಿಕ ಅವಕಾಶಗಳಿಗೂ ತೊಂದರೆಯಾಗುವ ಸಂಭವವಿದೆ. ಈ ಹಿನ್ನಲೆಯಲ್ಲಿ
ನಿಯಮಬಾಹಿರವಾಗಿ ನೀಡಿರುವ ಫಲಿತಾಂಶವನ್ನು ವಿದ್ಯಾರ್ಥಿಗಳು ಮತ್ತು‌ ವಿಶ್ವವಿದ್ಯಾಲಯದ ಹಿತದೃಷ್ಟಿಯಿಂದ ತಕ್ಷಣವೇ ಹಿಂಪಡೆದು, ನಿಯಮಾನುಸಾರ ಪರೀಕ್ಷೆಗಳನ್ನು ನಡೆಸಬೇಕೆಂದು ಸಂಘ ಒತ್ತಾಯಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ : ಜಿ. ಅನುರಾಧ

Next Post

ಮೃತ ಹರ್ಷ ಮನೆಗೆ ಜಯಲಕ್ಷ್ಮೀ ಈಶ್ವರಪ್ಪ ಭೇಟಿ : ಕುಟುಂಬಸ್ಥರಿಗೆ ಸಾಂತ್ವಾನ

kalpa News

kalpa News

Next Post
ಮೃತ ಹರ್ಷ ಮನೆಗೆ ಜಯಲಕ್ಷ್ಮೀ ಈಶ್ವರಪ್ಪ ಭೇಟಿ : ಕುಟುಂಬಸ್ಥರಿಗೆ ಸಾಂತ್ವಾನ

ಮೃತ ಹರ್ಷ ಮನೆಗೆ ಜಯಲಕ್ಷ್ಮೀ ಈಶ್ವರಪ್ಪ ಭೇಟಿ : ಕುಟುಂಬಸ್ಥರಿಗೆ ಸಾಂತ್ವಾನ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL