ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಅಸಮಾನತೆ, ಹಸಿವು, ಅವಮಾನಗಳಿಂದ ತಲ್ಲಣಿಸುತ್ತಿದ್ದ ಸಮಾಜಕ್ಕೆ ಸೌಹಾರ್ದತೆ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಮಹಾನ್ ಚೇತನ ಗೌತಮ ಬುದ್ಧನ ತತ್ವ ಸಾರ್ವಕಾಲಿಕ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ. ಎಲ್. ಮಂಜುನಾಥ್ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ #Kuvempu University ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನೆ ಮತ್ತು ಅಧ್ಯಯನ ಕೇಂದ್ರದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಬುದ್ಧಪೂರ್ಣಿಮಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್ ಮಾತನಾಡಿ, ಜಗತ್ತಿಗೆ ಶಾಂತಿ, ಅಹಿಂಸೆಯ ತತ್ವವನ್ನು ಪ್ರತಿಪಾದಿಸಿದ ಬುದ್ಧ, ಜನತೆಯ ದುಃಖವನ್ನು ನಿವಾರಿಸಲು ದೇಶಾದ್ಯಂತ ಸಂಚರಿಸಿ ತನ್ನದೇ ಆದ ಪರಿಹಾರ ಹುಡುಕಿಕೊಂಡವನು. ಬುದ್ಧನ ತತ್ವವನ್ನು ಅಳವಡಿಸಿಕೊಂಡರೆ ಸಾರ್ಥಕ ಬದುಕು ನಮ್ಮದಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post