ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ (ಶಿವಮೊಗ್ಗ) |
ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂನ ಅಧ್ಯಕ್ಷ ಪ್ರೊ. ಅನಿಲ್ ಡಿ.ಸಹಸ್ರಬುಧೆ Prof. Anil D Sahasrabudhe ಕರೆ ನೀಡಿದರು.
ಇಂದು ಜ್ಞಾನ ಸಹ್ಯಾದ್ರಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ Kuvempu University 35th Convocation ಎಲ್ಲರಿಗೂ ನಮಸ್ಕಾರ ಎನ್ನುತ್ತಲೇ ಕನ್ನಡದಲ್ಲಿಯೇ ಪ್ರಧಾನ ಭಾಷಣ ಆರಂಭಿಸಿದ ಅವರು, ಭಾರತವು ಇಂದು ಜಾಗತಿಕವಾಗಿ ಮುಂಚೂಣಿಯಲ್ಲಿದ್ದು, ನೂರಕ್ಕೂ ಹೆಚ್ಚು ರಾಷ್ಟ್ರಗಳ ಗಣ್ಯರು ಹಾಗೂ ಉದ್ದಿಮೆಗಳ ಪ್ರಮುಖರು ನಮ್ಮ ದೇಶದತ್ತ ನೋಡುತ್ತಿದ್ದಾರೆ. ಶೀಘ್ರದಲ್ಲೇ ಫ್ರಾನ್ಸ್ನಲ್ಲಿ ನಡೆಯಲಿರುವ ಪ್ರದರ್ಶನದಲ್ಲಿ ಭಾರತದ ಸ್ಟಾರ್ಟ್-ಅಪ್ ಪ್ರತಿಭೆಗಳು ಭಾಗವಹಿಸಲಲಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ ಎಂದರು.
ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಪೂರಕವಾಗಿ ಭಾರತವು ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಜಾರಿಗೆ ತಂದಿದೆ. ಇದು ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಮತ್ತು ಭಾರತವನ್ನು ಜಾಗತಿಕ ಜ್ಞಾನದ ಕೇಂದ್ರವನ್ನಾಗಿಸಲು ಸಹಕಾರಿಯಾಗಿದೆ. ಡಿಜಿಟಲ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾದಂತಹ ಯೋಜನೆಗಳು ಯುವಜನರಿಗೆ ಅಪಾರ ಅವಕಾಶಗಳನ್ನು ಸೃಷ್ಟಿಸಿವೆ ಎಂದ ಅವರು ಪದವಿ ಪಡೆಯುವುದು ಶಿಕ್ಷಣದ ಅಂತ್ಯವಲ್ಲ. ಬದಲಾಗಿ ಅದು ಜವಾಬ್ದಾರಿಯುತ ಬದುಕಿನ ಆರಂಭ. ವಿದ್ಯಾರ್ಥಿಗಳು ವಿಮರ್ಶಾತ್ಮಕ ಚಿಂತನೆ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಇಂದು ಇಂಟರ್ನೆಟ್ ಆಫ್ ಥಿಂಗ್ಸ್ ಅಂತಹ ತಂತ್ರಜ್ಞಾನಗಳು ಸಾಮಾನ್ಯವಾಗುತ್ತಿವೆ. ಕೃಷಿ ಪಂಪ್ಸೆಟ್ಗಳನ್ನು ಚಾಲನೆ ಮಾಡುವುದರಿಂದ ಹಿಡಿದು ಮನೆಯ ಎಸಿ ನಿಯಂತ್ರಿಸುವವರೆಗೆ ಮೊಬೈಲ್ ಬಳಕೆ ಕ್ರಾಂತಿಕಾರಕ ಬದಲಾವಣೆ ತಂದಿದೆ ಎಂದರು.
ಭಾರತವು ಇಂದು ಬಾಹ್ಯಾಕಾಶ ವಿಜ್ಞಾನ ಮತ್ತು ಪರಮಾಣು ಶಕ್ತಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಯುವಜನರು ಉದ್ಯೋಗದಾತರಾಗಬೇಕು. ಐಟಿ ಕ್ಷೇತ್ರದಲ್ಲಿನ ಕ್ರಾಂತಿಯು ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದೆ.ವಿದ್ಯಾರ್ಥಿಗಳು ಕೇವಲ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ, ಸಮಾಜಶಾಸ್ತ್ರ, ಮನೋವಿಜ್ಞಾನ ಮತ್ತು ಉದ್ಯಮಶೀಲತೆಯಂತಹ ವಿವಿಧ ಜ್ಞಾನ ಶಾಖೆಗಳ ನಡುವೆ ಸಮನ್ವಯ ಸಾಧಿಸಬೇಕು ಎಂದು ಸಲಹೆ ನೀಡಿದರು.
ಪದವಿ ಮುಖ್ಯವಲ್ಲ, ಕಲಿಕೆ ಮುಖ್ಯವಾಗಿದೆ. ಆದರು ಇಂದು ಶಿಕ್ಷಣ ತಾಂತ್ರಿಕತೆ ರೂಪದಲ್ಲಿ ನಿಮ್ಮ ಮನೆ ಬಾಗಿಗೆ ಬರ್ತಾದೆ ಅದನ್ನು ಬಳಸಿಕೊಳ್ಳಿ. ಜಗತ್ತಿನಲ್ಲಿ ಅನೇಕ ಅವಕಾಶಗಳು ಸೃಷ್ಠಿಯಾಗುತಹತಿದೆ ಅರದ ಉಪಯೋಗ ಪಡೆದುಕೊಳ್ಳಿ. ಅಪಾರ್ ಐಡಿ ಕ್ರಿಯೆಟಹ ಮಾಡಿಕೊಳ್ಳಿ ಅದು ಡೈನಾಮಿಕ್ ಸಿವಿ ತರ, ನಿಮ್ಮ ಎಲ್ಲಾ ಮಾಹಿತಿಯು ಅದರಲ್ಲಿ ಸಿಗುತ್ತದೆ . ವಿಕಸಿತ ಭಾರತ ಕನಸು ಕಾಣುತ್ತಿದ್ದೇವೆ 2047ರಲ್ಲಿ ಅದನ್ನು ಸಾಧಿಸುವತ್ತ ಕನಸು ಕಾಣಬೇಕು. ಶೈಕ್ಷಣಿಕವಾಗಿ ನಿಮಗೆ ಸಹಕಾರವಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















