ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಜಾತಿ, ಪಂಥಗಳನ್ನು ಮೀರಿ ಅರ್ಹತೆಯಿಂದ ಬೆಳೆದು ರಾಷ್ಟ್ರನಾಯಕರಾದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು.
ಕುವೆಂಪು ವಿವಿಯ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬೌದ್ಧ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 130ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿನ ಸ್ಫೂರ್ತಿದಾಯಕ ನಾಯಕರಲ್ಲಿ ಒಬ್ಬರಾದ ಅಂಬೇಡ್ಕರ್, ಆರ್ಥಿಕ ತಜ್ಞರಾಗಿ, ನ್ಯಾಯವಾದಿಯಾಗಿ, ಕಾರ್ಮಿಕ ನಾಯಕನಾಗಿ, ಸಮಾಜ ಸುಧಾರಕನಾಗಿ ವಿವಿಧ ಕ್ಷೇತ್ರಗಳಿಗೆ ಕೊಡುಗೆ ನೀಡಿದವರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಿದರೆ ಮಾತ್ರ ಸಾಲದು ಬದಲಾಗಿ ಅವರು ಆದರ್ಶ ಮತ್ತು ತತ್ವಗಳನ್ನು ತಮ್ಮ ಜೀವನದಲ್ಲಿ ಹಾಗೂ ಅವರವರ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post