No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ: ಸರ್ಕಾರಿ ಖಾಲಿ ಜಮೀನು ಕುರಿತು ವರದಿ ನೀಡಿ: ಬಿಎಸ್‌ವೈ ತಾಕೀತು

kalpa News by kalpa News
July 20, 2018
in ಶಿಕಾರಿಪುರ
0
Share on FacebookShare on TwitterShare on WhatsApp

ಶಿಕಾರಿಪುರ: ತಾಲೂಕಿನಲ್ಲಿ ಎಲ್ಲೆಲ್ಲಿ ಸರ್ಕಾರಿ ಖಾಲಿ ಜಾಗ, ಜಮೀನುಗಳಿವೆ. ಅದನ್ನು ತಾಲೂಕು ದಂಡಾಧಿಕಾರಿಗಳು ಅಲ್ಲಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಾಜಿ ಮುಖ್ಯಮಂತ್ರಿ, ವಿಧಾನ ವಿಧಾನಸಭಾ ಪ್ರತಿಪಕ್ಷದ ನಾಯಕ, ಶಾಸಕ ಬಿ.ಎಸ್. ಯಡಿಯೂರಪ್ಪ ತಾಕೀತು ಮಾಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿರುವ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಪಟ್ಟಣದಲ್ಲಿ ಖಾಲಿ ನಿವೇಶನ ಇಲ್ಲದೇ ಇರುವುದರಿಂದ, ಶಿರಾಳಕೊಪ್ಪಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಚರ್ಚಿಸಿ ಮಾತನಾಡುವಾಗ ಪಟ್ಟಣದಲ್ಲಿಯೇ ಐಬಿ ಹಿಂಭಾಗ, ಚನ್ನಮಲ್ಲಿಕಾರ್ಜುನ ಶಾಲೆಯ ಹಿಂಭಾಗ, ಗೃಹ ನಿರ್ಮಾಣ ಮಂಡಳಿ ಪಕ್ಕದ ಬಳಿ ಖಾಲಿ ನಿವೇಶನಗಳಿದ್ದು, ವಿದ್ಯಾರ್ಥಿ ನಿಲಯವನ್ನು ಆದಷ್ಟು ಪಟ್ಟಣದಲ್ಲಿಯೇ ನಿರ್ಮಾಣ ಮಾಡುವಂತಾಗ ಬೇಕು ಎಂದು ಸಲಹೆ ನೀಡಿದರು.

ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ, ಸುಮಾರು ಎರಡು ಕೋಟಿ ಎಂಬತ್ತೇಳು ಲಕ್ಷ ರೂಪಾಯಿ ಮೌಲ್ಯದ ಕಟ್ಟಡ ನಿರ್ಮಾಣ ಹಾಗೂ ಕಾಮಗಾರಿಗೆ ಪಟ್ಟಣದಲ್ಲಿಯೇ ಸೂಕ್ತ ನಿವೇಶನಗಳಿದ್ದು ಇದನ್ನ ತಾಲೂಕು ದಂಡಾಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.

ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಮೂರು ಬಾರಿ ಟೆಂಡರ್ ಕರೆಯಲಾಗಿದೆ ಆದರೆ ಟೆಂಡರ್ ಪ್ರಕ್ರಿಯೆ ಆರಂಭವಾಗದೆ ಇರುವುದರಿಂದ ಪಂಚಾಯಿತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಎರಡು ಕೋಟಿ ಹದಿನಾರು ಲಕ್ಷ ಮೌಲ್ಯದ ಕಾಮಗಾರಿಗೆ ಇದುವರೆಗೂ ಟೆಂಡರ್ ಪ್ರಕ್ರಿಯೆ ನಡೆದಿಲ್ಲ ಏಕೆ ಎಂದು ಪ್ರಶ್ನಿಸಿದಾಗ, ಪಂಚಾಯಿತಿ ರಾಜ್ ಸಹಾಯಕ ಎಂಜಿನಿಯರ್ ಎರಡು ಬಾರಿ ಟೆಂಡರ್ ಕರೆದು ಜಯಾನಾಯ್ಕ್ ಎಂಬ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿತ್ತು. ಅವರು ಆರೋಗ್ಯ ಸರಿಯಿಲ್ಲ ಎಂದು ಕಾರಣ ನೀಡುತಿದ್ದಾರೆ ಎಂದು ತಿಳಿಸಿದರು.

ಆಗ ಕೆಲವು ಸದಸ್ಯರು ಅನೇಕ ಕಡೆಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ ಇದನ್ನು ಸಭಾಧ್ಯಕ್ಷರು ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪರವರು ಕೂಡಲೇ ಅವರ ಟೆಂಡರನ್ನು ರದ್ದುಪಡಿಸಿ, ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಸೂಚಿಸಿದರು. ಅದರಂತೆ ಅನೇಕ ಕಾಮಗಾರಿಗಳಿಗೆ ಪರ್ಸೆಂಟೇಜ್ ಪಡೆದು ಸುಮ್ಮನಿರದೆ ಎಲ್ಲೆಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ, ಎಲ್ಲೆಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಲ್ಲೆಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬುದನ್ನ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸೂಕ್ತ ಕ್ರಮ ಕೈಗೊಳ್ಳುವ ಕೆಲಸ ಸಹಾಯಕ ಎಂಜಿನಿಯರ್ ರವರು ಮಾಡಬೇಕು ಕಳಪೆ ಕಾಮಗಾರಿ ನಡೆದರೆ ನೀವೇ ಜವಾಬ್ದಾರರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ಮಾತನಾಡಿದ ಕೆಡಿಪಿ ಸದಸ್ಯ ಭಂಡಾರಿ ಮಾಲತೇಶ, ಪಟ್ಟಣದ ಹುಚ್ಚುರಾಯಸ್ವಾಮಿ ದೇವಸ್ಥಾನದ ಬಳಿ ಇರುವ ಪುಷ್ಕರಣಿಯನ್ನು ಋಗ್ವೇದ ಎಂಬ ಖಾಸಗಿ ಸಂಸ್ಥೆಯು ಸ್ವಚ್ಛತೆ ಮಾಡಿದೆ. ಹುಚ್ಚುರಾಯ ಸ್ವಾಮಿ ಕೆರೆ ಹಾಗೂ ಅಲ್ಲಿಯ ಪುಷ್ಕರಣಿಯು ಭಾರಿ ನೀರಾವರಿ ಇಲಾಖೆಗೆ ಸಂಬಂಧಿಸಿದ್ದಾಗಿದೆ. ಅದರ ನಿರ್ವಹಣೆಗೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಆದರೂ ಖಾಸಗಿ ಸಂಸ್ಥೆಗಳ ಮೂಲಕ ಅಲ್ಲಿ ಸ್ವಚ್ಛತೆ ಕಾರ್ಯ ನಡೆದಿದೆ. ಇಲಾಖೆಯಿಂದ ಯಾವುದೇ ರೀತಿಯ ಸ್ವಚ್ಛತೆ ನಡೆಯುತ್ತಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಸಹಾಯಕ ಎಂಜಿನಿಯರ್ ನಾವು ಅಲ್ಲಿಯ ಸ್ವಚ್ಛತೆಗಾಗಿ ಒಬ್ಬರನ್ನು ನೇಮಕ ಮಾಡಲಾಗಿದ್ದು ಅದರ ಸ್ವಚ್ಛತಾ ಕಾರ್ಯ ಅವರು ನಿರ್ವಹಿಸುತಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಿ, ಸಂಸದರಾಗಿ, ಈಗ ಮತ್ತೆ ಶಾಸಕರಾಗಿ ಪ್ರಥಮ ಬಾರಿಗೆ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾಲೂಕಿನಲ್ಲಿ ವಿವಿಧ ಇಲಾಖೆಯಿಂದ ಈ ರೀತಿಯ ಅನೇಕ ಸಮಸ್ಯೆಗಳ ಸರಮಾಲೆಗಳು ಕಂಡು ಬಂದಿತು. ಇದರಿಂದ ಕೆಲಕಾಲ ಬೇಸರಗೊಂಡಿದ್ದ ಅವರು ಮುಂದಿನ ಸಭೆಯಲ್ಲಿ ಎಲ್ಲಾ ರೀತಿಯಲ್ಲೂ ಎಲ್ಲಾ ಇಲಾಖೆಗಳು ತಪ್ಪುಗಳನ್ನು ಸರಿಪಡಿಸಿಕೊಂಡು ಸಭೆಗೆ ಹಾಜರಾಗಲು ಸೂಚಿಸಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಉಪಾಧ್ಯಕ್ಷೆ ಮಮತಾ ರಾಜಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ನರಸಿಂಗ್ ನಾಯ್ಕ್, ಅರುಂಧತಿ ರಾಜೇಶ್, ಮಮತಾ ಸಾಲಿ, ಕೆಡಿಪಿ ಸದಸ್ಯರಾದ ಉಮೇಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: B S yeddyurappaBSYShikaripuraShivamogga
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವಿಶ್ವಾಸ ಮಂಡನೆ: ಕೊನೆಯ ಕ್ಷಣದ ಕಸರತ್ತು ಹೇಗೆ ನಡೆದಿವೆ ಗೊತ್ತಾ?

Next Post

ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್‌ವೈ

kalpa News

kalpa News

Next Post

ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್‌ವೈ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL