ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ತಾಲೂಕಿನ ಮದಗಹಾರನಹಳ್ಳಿಯ ಗ್ರಾಮದ ಸುತ್ತಲೂ ಚಿರತೆ ಓಡಾಡುತಿದ್ದ ಪರಿಣಾಮ ಭಯಭೀತಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ, ಇಲಾಖೆ ಇರಿಸಲಾಗಿದ್ದ ಬೋನಿಗೆ 3 ವರ್ಷದ ಗಂಡು ಚಿರತೆ ಬಿದ್ದಿದೆ ಎನ್ನಲಾಗಿದೆ.
ಇದರಿಂದ ಗ್ರಾಮದ ಜನರಿಗೆ ಇದ್ದ ಆತಂಕ ದೂರವಾಗಿದ್ದು, ಅರಣ್ಯ ಇಲಾಖೆಯ ಕಾರ್ಯಕ್ಕೆ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post