ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿರಾಳಕೊಪ್ಪ ಸಮೀಪ ನಿನ್ನೆ ರಾತ್ರಿ ಕಾರು ಮತ್ತು ಬೈಕ್ ನಡುವೆ ಢಿಕ್ಕಿಯಾಗಿ 4 ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟು ಇನ್ನೋರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಚಿನಕೊಪ್ಪ ಬಳಿ ನಡೆದಿದೆ.
ಹುಲುಗಿನಕೊಪ್ಪದ ನಿವಾಸಿಗಳಾದ ಜ್ಯೋತಿ,(30), ಅವರ ಮಗಳು ಸೌಜನ್ಯ (4), ತಾಯಿ ಗಂಗಮ್ಮ (50) ಮೃತಪಟ್ಟ ದುರ್ದೈವಿಗಳಾಗಿದ್ದು, ಬೈಕ್ ಓಡಿಸುತ್ತಿದ್ದ ಜ್ಯೋತಿ ಅವರ ಪತಿ ಮಲ್ಲಿಕಾರ್ಜುನ ಅವರಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿರಾಳಕೊಪ್ಪದಿಂದ ನಿನ್ನೆ ರಾತ್ರಿ ಹುಲುಗಿನ ಕೊಪ್ಪಕ್ಕೆ ನಾಲ್ವರು ಬೈಕಿನಲ್ಲಿ ತೆರಳುತ್ತಿದ್ದಾಗ ಹಿರೇಕೆರೂರಿನಿಂದ ಶಿರಾಳಕೊಪ್ಪಕ್ಕೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
Also read: ನ.11ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ – ಸಿಎಂ
ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post