No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2025
in ಶಿಕಾರಿಪುರ
0
ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಹಿಂದೂ ಸಂಸ್ಕೃತಿಯಲ್ಲಿ ಗುರು ಪೂರ್ಣಿಮೆ ಬಹಳ ಮುಖ್ಯ ಮತ್ತು ಪವಿತ್ರ ಹಬ್ಬವಾಗಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯಂದು ಗುರು ಪೂರ್ಣಿಮೆಯನ್ನು #Gurupoornime ಆಚರಿಸಲಾಗುತ್ತದೆ, ಇದನ್ನು ಆಷಾಢ ಪೂರ್ಣಿಮೆ ಎಂದು ಕರೆಯಲಾಗುತ್ತದೆ. ಗುರು ಪೂರ್ಣಿಮೆಯನ್ನು “ವ್ಯಾಸ ಪೂರ್ಣಿಮೆ” ಎಂದೂ ಕರೆಯುತ್ತಾರೆ.ಎಂದು ಶಾಲಾ ಸಂಚಾಲನ ಸಮಿತಿಯ ಸದಸ್ಯ ಪಿ.ಎನ್.  ವಿಶ್ವನಾಥ್ ತಿಳಿಸಿದರು.

ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆಯ ಬೌದ್ಧಿಕ ಪ್ರಮುಖರಾಗಿ ಮಾತನಾಡಿದರು.
ಸುಲಭ ತಿಳುವಳಿಕೆಗಾಗಿ ಮಹರ್ಷಿ ವೇದವ್ಯಾಸರು ಒಂದೇ ವೇದವನ್ನು 4 ವೇದಗಳಾಗಿ ವಿಂಗಡಿಸಿದ್ದಾರೆ ಮತ್ತು ವೇದಗಳಿಗೆ ಅತ್ಯುನ್ನತ ಪ್ರಾಮುಖ್ಯತೆಯನ್ನು ನೀಡಲಾಗಿರುವುದರಿಂದ, ಅವರ ಕೆಲಸವನ್ನು ಗೌರವಿಸಲು, ಈ ದಿನವನ್ನು ವ್ಯಾಸ ಪೂರ್ಣಿಮೆ ಎಂದು ಆಚರಿಸಲಾಗುತ್ತದೆ ಎಂದರು.

ವೇದವ್ಯಾಸರನ್ನು ಆದಿ ಗುರು ಎಂದೂ ಪರಿಗಣಿಸಲಾಗುತ್ತದೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಗೆ ಅವರ ಕೊಡುಗೆ ಅಪಾರ. ಗುರು ನಮ್ಮ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನಮ್ಮ ಗುರುಗಳಿಂದಾಗಿಯೇ ನಾವು ನಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಾಗುತ್ತದೆ. ಗುರು ಅಥವಾ ಶಿಕ್ಷಕರು ನಮ್ಮನ್ನು ನಮ್ಮ ಅತ್ಯುತ್ತಮ ಆವೃತ್ತಿಯಾಗಿರಲು ಮಾರ್ಗದರ್ಶನ ನೀಡುತ್ತಾರೆ. ಗುರುವಿಲ್ಲದೆ ನಮ್ಮ ಗುರಿಯನ್ನು ತಲುಪುವುದು ತುಂಬಾ ಕಷ್ಟ. ನಮ್ಮ ಜೀವನ ಪ್ರಯಾಣದಲ್ಲಿ ನಮಗೆ ಸಹಾಯ ಮಾಡಿದ, ಮಾರ್ಗದರ್ಶನ ನೀಡಿದ ಎಲ್ಲಾ ಗುರುಗಳನ್ನು ನಾವು ನೆನಪಿಸಿಕೊಳ್ಳಬೇಕಾದ ದಿನ ಇದು. ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನ ಇದು ಎಂದರು.
ಪೋಷಕರು ನಮ್ಮ ಮೊದಲ ಗುರುಗಳು. ನಮ್ಮ ಜೀವನದಲ್ಲಿ ಶಾಶ್ವತವಾಗಿರುವ ನಡೆಯುವುದು, ತಿನ್ನುವುದು, ಮಾತನಾಡುವುದು ಮುಂತಾದ ಮೂಲಭೂತ ವಿಷಯಗಳನ್ನು ನಮಗೆ ಕಲಿಸುವವರು ತಾಯಿ ಮತ್ತು ತಂದೆ. ನಾವು ನಮ್ಮ ಹೆತ್ತವರನ್ನು ಗುರುಗಳಾಗಿ ಗೌರವಿಸಬೇಕು ಏಕೆಂದರೆ ನಾವು ಇಂದು ಕಲಿತ ಯಾವುದೇ ಒಳ್ಳೆಯ ವಿಷಯಗಳು ನಮ್ಮ ಹೆತ್ತವರ ಕಾರಣದಿಂದಾಗಿ. ಹಿಂದೂ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯು ಬಹಳ ಸನಾತನ ಸಂಪ್ರದಾಯವಾಗಿದೆ. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಮನೆಯನ್ನು ತೊರೆದು ಗುರುಕುಲದಲ್ಲಿ ಜೀವನ ಪಾಠಗಳನ್ನು ಕಲಿಯುತ್ತಿದ್ದರು. ವಿದ್ಯಾರ್ಥಿಗಳು ಗುರುಕುಲ ಮತ್ತು ಇತರ ವಿಷಯಗಳಲ್ಲಿ ಜೀವನ ಪಾಠಗಳನ್ನು ಕಲಿಯುತ್ತಿದ್ದರು. ಈ ಜೀವನ ಪಾಠಗಳು ಅವರ ಜೀವನದಲ್ಲಿ ಧರ್ಮನಿಷ್ಠೆಯಿಂದ ಬದುಕಲು ಸಹಾಯ ಮಾಡುತ್ತವೆ ಎಂದರು.

ಗುರು-ಶಿಷ್ಯ ಸಂಬಂಧವು ಬಹಳ ಬಲವಾದ ಮತ್ತು ಶುದ್ಧ ಸಂಬಂಧವಾಗಿದೆ. ಗುರುವನ್ನು ಬಹಳ ಗೌರವದಿಂದ ನಡೆಸಿಕೊಳ್ಳಲಾಗುತ್ತದೆ. ರಾಜರೂ ಕೂಡ ತಮ್ಮ ಗುರುಗಳನ್ನು ನೋಡಿದಾಗ, ಅವರು ನಮಸ್ಕರಿಸಿ ಗೌರವ ಸಲ್ಲಿಸುತ್ತಾರೆ. ಇದು ನಾವು ನಮ್ಮ ಗುರುಗಳಿಗೆ ನೀಡುವ ಗೌರವಾಗಿದೆ. ಗುರು ಶಿಷ್ಯರ ಸಂಬಂಧ ತಿಳಿಸುವ ದ್ರೋಣಾಚಾರ್ಯರು ಮತ್ತು ಏಕಲವ್ಯ , ಮಹಾಭಾರತದ ಕೌರವರ ಮತ್ತು ಪಾಂಡವರ ಕಥೆಗಳನ್ನು ಹೇಳುವುದರ ಮೂಲಕ ಗುರುವಿನ ಸ್ಥಾನ ಮತ್ತು ಸಮರ್ಪಣೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಂಶುಪಾಲರಾದ ಶ್ರೀ ಯುತ ವಿಶ್ವನಾಥ.ಪಿ ರವರುಜೀವನ ಎಂಬ ಈ ಭವ ಸಾಗರವನ್ನು ದಾಟಿಸುವವನೇ ಗುರು. ಆದ್ದರಿಂದ ಉಸಿರು ಇರುವವರೆಗೆ ಗುರುವಿನ ಸ್ಮರಣೆ ಮಾಡುವ ಮೂಲಕ ಬದುಕಿನಲ್ಲಿ ಸಾರ್ಥಕತೆ ಹೊಂದಬೇಕು. ಜೀವನ ಎಂಬ ಈ ಭವ ಸಾಗರವನ್ನು ದಾಟಿಸುವವನೇ ಗುರು. ಆದ್ದರಿಂದ ಉಸಿರು ಇರುವವರೆಗೆ ಗುರುವಿನ ಸ್ಮರಣೆ ಮಾಡುವ ಮೂಲಕ ಬದುಕಿನಲ್ಲಿ ಸಾರ್ಥಕತೆ ಹೊಂದಬೇಕು. ಉಸಿರು ಇರುವವರೆಗೆ ಗುರು ಸ್ಮರಣೆ ಮಾಡಿ ದೇವರನ್ನು, ಗುರುವನ್ನು ಸದಾ ಸ್ಮರಿಸಬೇಕು. ಜೀವನದಲ್ಲಿ ಸನ್ಮಾರ್ಗ ಹೊಂದಬೇಕು ಎಂದರು.

ಸಂಸಾರ ಎಂಬ ನದಿಯಲ್ಲಿ ಈಜುತ್ತಿದ್ದೇವೆ. ಗುರುವಿನ ನಾಮಸ್ಮರಣೆ ಮಾಡುವ ಮೂಲಕ ದಡ ಸೇರಬೇಕು. ಜೀವನ ಎಂದರೆ ಅದರಲ್ಲಿ ಸುಖ-ದುಃಖ, ಮಾನ-ಅಪಮಾನ, ಕಷ್ಟ-ಕಾರ್ಪಣ್ಯಗಳು, ಜಂಜಡಗಳು ಇರುತ್ತವೆ. ಗುರು ನಾಮಸ್ಮರಣೆ ಮಾಡುವುದರಿಂದ ಗುರು ನಮಗೆ ಮಾರ್ಗದರ್ಶನ ನೀಡುತ್ತಾನೆ. ಆ ಮೂಲಕ ನಾವು ಸಮಾಜದಲ್ಲಿ ಧರ್ಮದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ದೇವರು ಮುನಿದರೂ ಗುರು ಕಾಯುತ್ತಾನೆ. ಗುರು ತಾಯಿ ಸ್ಥಾನದಲ್ಲಿ ನಿಂತು ಸುಜ್ಞಾನವನ್ನು, ಸಂಸ್ಕಾರವನ್ನು ನೀಡುತ್ತಾನೆ. ಮನಪರಿವರ್ತಿಸಿ ಶರಣ ಮಾರ್ಗದರ್ಶನದ ಕಡೆಗೆ ಕೊಂಡೊಯ್ಯುತ್ತಾನೆ. ಅಜ್ಞಾನ ಮಾಯೆ ಇದ್ದಂತೆ. ಬೇಕು ಬೇಕು ಎನ್ನುವ ಬೇಡಿಕೆಗಳಿಗೆ ನಮ್ಮಷ್ಟಕ್ಕೆ ನಾವೇ ಕಡಿವಾಣ ಹಾಕಿಕೊಳ್ಳಬೇಕು ಎಂದು ತಿಳಿಸಿದರು. ಕು. ವಶಿಷ್ಠ ಭಗವಧ್ವಜಕ್ಕೆ ಗುರು ವಂದನೆ ಸಲ್ಲಿಸಿದನು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶ್ಲೋಕ , ಅಮೃತ ಬಿಂದು, ಅಮೃತ ವಚನ,ಕಗ್ಗ,ದೋಹಾಗಳನ್ನು ಹೇಳಿದರು.ಗುರುಗಳನ್ನು ಗೌರವಿಸುವ ಹಾಡುಗಳನ್ನು ಹಾಡಿ, ನೃತ್ಯಗಳನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ,ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಚಿತ್ರಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿ,ಕುಶಾಲ್ ಸ್ವಾಗತಿಸಿ,ಧನುಷ್ ವಂದಿಸಿ ಸಹನಾ ಮತ್ತು ಲಿಖಿತ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GurupoornimeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಗುರು ಪೂರ್ಣಿಮೆಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮೈದುಂಬಿದ ತುಂಗೆಗೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

Next Post

ಸಾಮಾಜಿಕ ವ್ಯವಸ್ಥೆಗೆ ಅನುಕೂಲವಾಗುವ ನಾವೀನ್ಯ ಯಂತ್ರ ಅನಾವರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಮಾಜಿಕ ವ್ಯವಸ್ಥೆಗೆ ಅನುಕೂಲವಾಗುವ ನಾವೀನ್ಯ ಯಂತ್ರ ಅನಾವರಣ

ಸಾಮಾಜಿಕ ವ್ಯವಸ್ಥೆಗೆ ಅನುಕೂಲವಾಗುವ ನಾವೀನ್ಯ ಯಂತ್ರ ಅನಾವರಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

June 8, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಫಿಟ್ಸ್ ಕಾಯಿಲೆಯಿಂದ ನೊಂದ ವ್ಯಕ್ತಿ ಕೆರೆಯಲ್ಲಿ ಆತ್ಮಹತ್ಯೆ

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

June 8, 2026
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

June 8, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL