ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣದ ರಾಜಕಾರಣ ಸ್ವಾರ್ಥಕ್ಕೆ ಇನ್ನೂ ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ MP Raghavendra ಕಿಡಿ ಕಾರಿದರು.
ಮುಸ್ಲಿಂ ಯುವಕರು ಸುಶೀಲ್ ಎಂಬಾತನ ಮೇಲೆ ಶಿಕಾರಿಪುದಲ್ಲಿ ಚಾಕು ಇರಿದ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಚಾಕು ಹಾಕಿರುವ ರೀತಿ ನೋಡಿದರೆ ಅವರಿಗೆ ಈ ಮುನ್ನವೇ ಇಂತಹ ಕೃತ್ಯಗಳಿಗೆ ತರಬೇತಿ ಆಗಿರುವಂತೆ ಕಾಣುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಕಾಂಗ್ರೆಸ್’ನ ಓಟ್ ಬ್ಯಾಂಕ್ ರಾಜಕಾರಣದ ಪರಿಣಾಮ ಇಂತಹ ಕ್ರಿಮಿನಲ್’ಗಳು ಹಾಗೂ ಕ್ರಿಮಿನಲ್ ಕೃತ್ಯಗಳು ರಾಜ್ಯದಲ್ಲಿ ಹೆಚ್ಚಾಗಿವೆ. ನಿಮ್ಮ ಸ್ವಾರ್ಥಕ್ಕೆ ಇನ್ನೂ ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಮುಸ್ಲಿಂ ಸಮುದಾಯದ ಕೆಲವರು ತಾವು ಏನು ಮಾಡಿದರೂ ನಡೆಯುತ್ತದೆ, ಯಾರೂ ಕೇಳುವಂತಿಲ್ಲ ಎಂಬAತೆ ವರ್ತಿಸುತ್ತಿದ್ದಾರೆ. ಏನೇ ಮಾಡಿದರೂ ನಾವು ನೋಡಿಕೊಂಡು ಸುಮ್ಮನೆ ಕೂರುತ್ತೇವೆ ಎಂಬ ತಪ್ಪು ತಿಳುವಳಿಕೆ ಬೇಡ ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post