ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲ್ಲೂಕಿನ ಯುವಕ ಯುವತಿಯರ ಮತ್ತು ಪೋಷಕರ ಕನಸು ನನಸಾಗಿಸುವಲ್ಲಿ ಉದ್ಯೋಗ ಮೇಳ #Job fair ಯಶಸ್ವಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿವೇಕ್ ಆಳ್ವ #Vivek Alva ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ #Kumadvathi Education Institution ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಶಿಕಾರಿಪುರ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೆಚ್ಚು ಗ್ರಾಮೀಣ ಭಾಗವನ್ನು ಹೊಂದಿದ ಶಿಕಾರಿಪುರ ತಾಲ್ಲೂಕಿನ ಉದ್ಯೋಗಾಕಾಂಕ್ಷಿಗಳು ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ 83 ಕ್ಕಿಂತ ಹೆಚ್ಚು ವಿವಿಧ ಕಂಪನಿಗಳ ಸಂದರ್ಶನ ಎದುರಿಸಿದ ಅವರು ಧನಾತ್ಮಕ ಅನುಭವಗಳನ್ನು ಹೊತ್ತು ಉದ್ಯೋಗ ಭರವಸೆಯ ಆತ್ಮವಿಶ್ವಾಸದಲ್ಲಿದ್ದಾರೆ.
ಸಂಸದ ಬಿ. ವೈ. ರಾಘವೇಂದ್ರ #MP B Y Raghavendra ಮತ್ತು ಶಾಸಕ ಬಿ. ವೈ. ವಿಜಯೇಂದ್ರರವರ #MLA B Y Vijayendra ಸಾರಥ್ಯದಲ್ಲಿ ರೈತನಾಯಕ, ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ #B S Yadiyurappa ಜನ್ಮದಿನದ ಅಂಗವಾಗಿ ಬೃಹತ್ ಉದ್ಯೋಗಮೇಳವನ್ನು ಹಮ್ಮಿಕೊಂಡು ಕಳೆದ ಎರಡುವರೆ ತಿಂಗಳಿನಿಂದ ಉದ್ಯೋಗಾಕಾಂಕ್ಷಿಗಳಿಗೆ ಶಿರಾಳಕೊಪ್ಪ ಮತ್ತು ಶಿಕಾರಿಪುರ ಭಾಗದಲ್ಲಿ ಐದು ಹಂತದಲ್ಲಿ ಮಾಹಿತಿ ಶಿಬಿರ ಹಮ್ಮಿಕೊಂಡು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಮೂಲಕ 2000ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಸೂಕ್ತ ರೀತಿಯ ಮಾರ್ಗದರ್ಶನ ಮಾಡಿ ನಂತರ ಫೆಬ್ರುವರಿ 20 ಮತ್ತು 21ರಂದು ಎರಡು ದಿನಗಳ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರೇರೇಪಣೆ ಮಾಡಲಾಗಿತ್ತು. ಆ ಮೂಲಕ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಒಟ್ಟು 1363 ಉದ್ಯೋಗಾಕಾಂಕ್ಷಿಗಳು ಸಂದರ್ಶನವನ್ನು ಎದುರಿಸಿ ಅದರಲ್ಲಿ 1181 ಅಭ್ಯರ್ಥಿಗಳನ್ನು ವಿವಿಧ ಕಂಪನಿಗಳು ಆಯ್ಕೆ ಹಂತಕ್ಕೆ ಪರಿಗಣಿಸಿ ಉದ್ಯೋಗಮೇಳದ ಕೊನೆಯ ದಿನದ ಸಂಜೆಯ ಹೊತ್ತಿಗೆ 351 ಅಭ್ಯರ್ಥಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಿವೆ. ಅಲ್ಲದೆ ಈ ಉದ್ಯೋಗ ಮೇಳ ಇನ್ನೂ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗದ ಅನುಕೂಲವನ್ನು ಮಾಡಿಕೊಡುವ ಭರವಸೆಯನ್ನು ನೀಡುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.
ಇಂದಿನ ಯುವಕರು ವಿವಿಧ ತಾಂತ್ರಕ ಕೌಶಲ್ಯಗಳನ್ನು ಪಡೆಯವ ಅನಿವಾರ್ಯತೆ ಇದೆ ಹಾಗೂ ಬದ್ಧತೆ, ಆತ್ಮವಿಶ್ವಾಸ, ಸಮಯಪ್ರಜ್ಞೆಯ ಮನೋಭಾವವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರ ಅವರು ಪ್ರಯತ್ನಿಸಬೇಕು. ಈ ಉದ್ಯೋಗಮೇಳ ಯಶಸ್ವಿಯಾಗಲು ಸಂಪೂರ್ಣ ಸಹಕಾರ ನೀಡಿದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಸ್ಥರು, ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪ್ರತಿನಿಧಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಮಾತನಾಡಿ, ದೇಶದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಆಳ್ವಾಸ್ ಶಿಕ್ಷಣಸಂಸ್ಥೆಯು ನಮ್ಮ ಸಂಸ್ಥೆಯೊಂದಿಗೆ ಕೈ ಜೋಡಿಸಿ ಕಳೆದ ಎರಡೂವರೆ ತಿಂಗಳಿನಿಂದ ವಿವೇಕ್ ಆಳ್ವಾರವರ ನಿರಂತರ ಪರಿಶ್ರಮ ಮತ್ತು ಸತತ ಮಾರ್ಗದರ್ಶನದಿಂದ ಈ ಶಿಕಾರಿಪುರ ಉದ್ಯೋಗಮೇಳ ಯಶಸ್ವಿಯಾಗಿದೆ. ಈ ಮೂಲಕ ನಮ್ಮ ಶಿಕಾರಿಪುರದ ಅನೇಕ ಯುವಕ ಯುವತಿಯರಿಗೆ ಉದ್ಯೋಗ ದೊರೆಯುವಂತಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡಿದ ಕ್ರಿಯಾಶೀಲ ಸಂಸದ ಬಿ ವೈ ರಾಘವೇಂದ್ರ, ಶಾಸಕ ಬಿ ವೈ ವಿಜಯೇಂದ್ರ, ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್ರವರಿಗೆ, ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಹಾಗೆಯೇ ವಿವೇಕ್ ಆಳ್ವರವರಿಗೆ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿವರ್ಗದವರಿಗೆ, ಸ್ವಯಂ ಸೇವಕರಿಗೆ ಮತ್ತು ವಿದ್ಯಾರ್ಥಿ ವೃಂದಕ್ಕೆ ಅಭಿಮಾನದಿಂದ ದನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್, ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ ಕೆ. ಶ್ರವಣ್, ಬಸವರಾಜ ಮಠದ್, ಪ್ರಾಚಾರ್ಯ ಡಾ. ರವೀಂದ್ರ, ಡಾ. ವೀರೇಂದ್ರ, ವಿದ್ಯಾಶಂಕರ್ ಕೆ ಎಸ್, ವಿಶ್ವನಾಥ ಪಿ, ಪ್ರಭಾರೆ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಕುಬಸದ್, ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















