No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2026
in ಶಿಕಾರಿಪುರ
0
ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿ ಯುವಕ-ಯುವತಿಯರಿಗೆ, ಪದವೀಧರರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ತರಬೇತಿ, ಸಂದರ್ಶನ ಎದುರಿಸುವ ವಿಧಾನ ಮತ್ತು ಉದ್ಯೋಗಗಳ ಕುರಿತು ಮಾರ್ಗದರ್ಶನ ನೀಡುವ ಪ್ರಮುಖ ವೇದಿಕೆಗಳಾಗಿವೆ. ಎಂದು ಶಿಕಾರಿಪುರ ಶಾಸಕರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ #BYVijayendra ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಅವರ ಜನ್ಮದಿನದ ಅಂಗವಾಗಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಮೂಡಬಿದರೆಯ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಸಹಯೋಗದಲ್ಲಿ ನಗರದ ಮಂಗಳ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕಾರಿಪುರ #Shikaripura ಉದ್ಯೋಗ ಮೇಳದ ಪೂರ್ವಭಾವಿಯಾಗಿ ಹಮ್ಮಿಕೊಂಡಿದ್ದ ಉದ್ಯೋಗ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿರುವ ಯುವಕರಿಗೆ ಹೊಸ ದಿಕ್ಕನ್ನು ತೋರಿಸುವ ಉದ್ದೇಶದಿಂದ ನಮ್ಮ ತಂದೆಯವರ ಜನ್ಮ ದಿನದಂದು ಈ #JobFair ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಭಾರತವು ಅಭಿವೃದ್ಧಿ ಆಗಬೇಕಾದರೆ ಅದು ಯುವಶಕ್ತಿಯ ಕೈಯಲ್ಲಿದೆ. ಪ್ರಧಾನಿಮಂತ್ರಿಗಳ ಕನಸು 2046ಕ್ಕೆ ಭಾರತ ವಿಕಸಿತ ಭಾರತ ಆಗಬೇಕು ಎನ್ನುವುದು. ಅದಕ್ಕಾಗಿ ಯುವ ಜನತೆಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಹಲವಾರು ಯೋಜನೆಗಳ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದರು.
ಯುವಜನತೆ ತಮ್ಮ ಜೀವನವನ್ನು ಉತ್ತಮ ಪಡಿಸಿಕೊಳ್ಳಬೇಕಾದರೆ ಇಂದು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಸಾಮರ್ಥ್ಯದ ಮೂಲಕ ಕೆಲಸವನ್ನು ನಿರ್ವಹಿಸಿಕೊಂಡು ಮುಂದೆ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ತಮ್ಮಲ್ಲಿರುವ ನ್ಯೂನತೆಗಳನ್ನು ತಲೆಯಿಂದ ಹೊರಹಾಕಬೇಕು, ಉತ್ತಮ ಆಲೋಚನೆಗಳನ್ನು ಯೋಚನೆ ಮಾಡುವುದರ ಮೂಲಕ ಮುಂದೆ ಸಾಗಬೇಕು ಎಂದರು.

ವಿವೇಕ ಆಳ್ವ #VivekAlva ಅವರ ಪ್ರಯತ್ನದಿಂದ 80ಕ್ಕೂ ಹೆಚ್ಚು ಕಂಪನಿಗಳು ಸಾವಿರಾರು ಉದ್ಯೋಗಗಳನ್ನು ಹೊತ್ತು ಶಿಕಾರಿಪುರ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ನೀವೆಲ್ಲರೂ ಆತ್ಮವಿಶ್ವಾಸದಿಂದ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ವೇತನದ ಬಗ್ಗೆ ಕೆಲಸದ ಬಗ್ಗೆ ಯೋಚನೆ ಬೇಡ ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡಬೇಕು ಮತ್ತು ಸ್ವಾಭಿಮಾನದ ಜೀವನ ಸಾಗಿಸಬೇಕು. ನಿಮ್ಮ ಪ್ರಗತಿಯನ್ನು ಕಂಡು ತಂದೆ -ತಾಯಿ ಮತ್ತು ಗುರುಗಳು ಮಾತ್ರ ನಿಮ್ಮನ್ನು ಪ್ರೋತ್ಸಾಹಿಸುತ್ತಾರೆ ಅವರಿಗೆ ಗೌರವಿತವಾಗಿ ನೀವು ಮುನ್ನಡೆಯಬೇಕು ಎಂದು ತಿಳಿಸಿದರು.

ಆಳ್ವಾಸ್ ವಿದ್ಯಾ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ವಿವೇಕ ಆಳ್ವ ಅವರು ಮಾತನಾಡಿ, ಕಳೆದ 18 ವರ್ಷದಿಂದ ಪ್ರಗತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ವರ್ಷ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು ಇಲ್ಲಿಯವರಗೆ ಸುಮಾರು 36 ಸಾವಿರ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆದುಕೊಂಡು ತಮ್ಮ ಜೀವನವನ್ನು ಉತ್ತಮ ನಡೆಸಿಕೊಂಡಿದ್ದಾರೆ ಎಂದರು.

ಸ್ವಾಭಿಮಾನವಿದ್ದರೆ ಸಾಧನೆ ಮಾಡಲು ಸಾಧ್ಯ. ತಮ್ಮಲ್ಲಿ ವಿದ್ಯಾರ್ಹತೆ ಅನುಗುಣವಾಗಿ ಪರಿಕಲ್ಪನೆ ಇಟ್ಟುಕೊಳ್ಳಿ. ನಮ್ಮ ವಿದ್ಯಾರ್ಥಿಗಳು ಶಿಕಾರಿಪುರ ಉದ್ಯೋಗ ಮೇಳದ ಉದ್ದೇಶವನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಸಂಸದರ ಮತ್ತು ಶಾಸಕರ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕು. ಉದ್ಯೋಗ ಎಲ್ಲೇ ಸಿಕ್ಕರೂ ಕೆಲಸ ನಿರ್ವಹಿಸಲು ಸಿದ್ಧರಾಗಿರಬೇಕು. ಎಲ್ಲಾ ವೃತ್ತಿಗಳಿಗೂ ತನ್ನದೆ ಆದ ಗೌರವಿರುತ್ತದೆ ಹಾಗಾಗಿ ಯಾವುದೇ ವೃತ್ತಿಯನ್ನು ಕಡೆಯಾಗಿ ಕಾಯಬೇಡಿ ಉತ್ತಮ ತಯಾರಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಕ್ಷದ ವಿವಿಧ ವಿಭಾಗಗಳ ಪ್ರಮುಖರಾದ ಹನುಮಂತಪ್ಪ ಸಂಕ್ಲಾಪುರ, ಗಾಯಿತ್ರಿ ಮಲ್ಲಪ್ಪ, ರಾಮನಾಯ್ಕ್, ಸಿದ್ದಲಿಂಗಪ್ಪ, ರೇಖಾ ರಾಜಶೇಖರ್, ವಸಂತ ಗೌಡ, ನಿಂಬೆಗೊಂದಿ, ಡಿ.ಎಲ್. ಬಸವರಾಜ್, ಮಲ್ಲೇಶಪ್ಪ, ಉಮೇಶ್ ಕಲ್ಮನಿ, ಶಿವಪ್ಪ ಬಿಎಸ್’ಎನ್’ಎಲ್, ಶಿವಕುಮಾರ್ ವಕೀಲರು, ಈರಣ್ಣಗೌಡ, ಗಿರೀಶ್ ಹರಳಣ್ಣಿ, ಚನ್ನವೀರಪ್ಪ, ಮಹೇಶ್ ಹುಲ್ಮಾರ್, ಉಪಸ್ಥಿತರಿದ್ದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್, ಬೋಧಕ ಮತ್ತು ಬೋಧಕೇತರ ವರ್ಗದವರು, ಹೊಸೂರು ಮತ್ತು ಅಂಜನಾಪುರ ಹೋಬಳಿಯ ಶಕ್ತಿ ಕೇಂದ್ರದ ಪ್ರಮುಖರು, ಪದಾಧಿಕಾರಿಗಳು, ಜನ ಪ್ರತಿನಿದಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಆಳ್ವಾಸ್ ವಿದ್ಯಾ ಸಂಸ್ಥೆಯ ತಂಡದವರು, ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ತರಬೇತಿ ಶಿಬಿರದಲ್ಲಿ 250ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Alvas Education FoundationB S YediyurappaB Y VijayendraJob FairKannada News WebsiteLatest News KannadaLocal NewsMalnad NewsShikaripuraVikasit Bharatಆಳ್ವಾಸ್ ವಿದ್ಯಾ ಸಂಸ್ಥೆಉದ್ಯೋಗ ಮೇಳಬಿ.ಎಸ್. ಯಡಿಯೂರಪ್ಪಬಿ.ವೈ. ವಿಜಯೇಂದ್ರಭಾರತ ವಿಕಸಿತಶಿಕಾರಿಪುರ
Share200Tweet125Send
Previous Post

ಮನಸ್ಸು ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕ: ಅಶೋಕ್ ಭಟ್

Next Post

ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL