ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಇಂದು ಜಗತ್ತು ಬಹು ಸವಾಲುಗಳನ್ನು ಎದುರಿಸುವ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ತಂತ್ರಜ್ಞಾನ ಮತ್ತು ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಶಿಕ್ಷಣ ವಿಜ್ಞಾನ ತಂತ್ರಜ್ಞಾನಾಧಾರಿತ ಶೈಕ್ಷಣಿಕ ಸಮ್ಮೇಳನಗಳು ಮಾತ್ರ ಶಿಕ್ಷಣವನ್ನು ಅಭಿವೃದ್ಧಿ ಪಥದತ್ತ ಸಾಗಲು ಸಹಾಯಕವಾಗಿವೆ ಎಂದು ಶಿಕಾರಿಪುರ ಕ್ಷೇತ್ರದ ಶಾಸಕರು, ಭಾಜಪ ರಾಜ್ಯಾಧ್ಯಕ್ಷರು ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಖಜಾಂಚಿಗಳು ಆದ ಬಿ. ವೈ. ವಿಜಯೇಂದ್ರ B Y Vijayendra ಹೇಳಿದರು.
ಶಿಕಾರಿಪುರ ಪಟ್ಟಣದ ಕುಮದ್ದತಿ ಪ್ರಥಮ ದರ್ಜೆ ಕಾಲೇಜಿನಲ್ಲಿ Kumadvathi First Grade College ಆಯೋಜಿಸಲಾಗಿದ್ದ ಬಹು ಶಿಸ್ತಿನ ಮತ್ತು ಸಮಕಾಲೀನ ವಿಧಾನಗಳಲ್ಲಿನ ನಾವೀನ್ಯತೆ ಹಾಗೂ ಸುಸ್ಥಿರತೆಯನ್ನು ಕಂಡುಕೊಳ್ಳುವಲ್ಲಿನ ಸವಾಲುಗಳ ಕುರಿತ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರಾದ ಡಾ. ಬಿಜೆ ಗಿರೀಶ್ ಅವರು ಸಂಶೋಧನೆಗಳು ಜ್ಞಾನದ ಅನ್ವೇಷಣೆ, ಸಮಸ್ಯೆಗಳಿಗೆ ಪರಿಹಾರ ಮತ್ತು ಹೊಸ ಆವಿಷ್ಕಾರಗಳಿಗೆ ಅಡಿಪಾಯವಾಗಿದೆ. ಸಂಶೋಧನೆಯ ಕ್ಷೇತ್ರದಲ್ಲಿ ಮಾಹಿತಿಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ, ವಿಶ್ಲೇಷಿಸಿ, ಅಸ್ತಿತ್ವದಲ್ಲಿರುವ ಸಿದ್ಧಾಂತಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಎಂ ಬಿ, ಉಪಸ್ಥಿತರಿದ್ದು, ಈ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸಗಳನ್ನು ನೀಡಿಸಲಾಯಿತು ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಹಾಗೂ ಅಂತರಾಜ್ಯದ ಹಲವು ಅಧ್ಯಾಪಕರು, ಸಂಶೋನಾರ್ಥಿಗಳು, ವಿದ್ಯಾರ್ಥಿಗಳು ತಮ್ಮ ವಿದ್ವತ್ಪೂರ್ಣ ಲೇಖನಗಳನ್ನು ಮಂಡಿಸಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ರವೀಂದ್ರ ಕೆಸಿ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಪದವಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿ ಅಶ್ವಿನಿ ವಂದಿಸಿ, ದಾನೇಶ್ವರಿ ನಿರೂಪಿಸಿದರು. ಸಮ್ಮೇಳನದಲ್ಲಿ ಸಂಸ್ಥೆಯ ಅಧ್ಯಾಪಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
