No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ | ಸೇವೆ ಎಂದರೆ ಭ್ರಾತೃತ್ವ ಬೆಳೆಸುವ ಮಹತ್ಕಾರ್ಯ: ಶುಭ ಮರವಂತೆ ಅಭಿಮತ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ | ಎನ್'ಎಸ್'ಎಸ್ ವಾರ್ಷಿಕ ವಿಶೇಷ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 29, 2024
in Small Bytes, ಶಿಕಾರಿಪುರ
0
ಶಿಕಾರಿಪುರ | ಸೇವೆ ಎಂದರೆ ಭ್ರಾತೃತ್ವ ಬೆಳೆಸುವ ಮಹತ್ಕಾರ್ಯ: ಶುಭ ಮರವಂತೆ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಸೇವೆ ಎಂದರೆ ಸುಲಭದ ಕೆಲಸವಲ್ಲ. ಅದು ಭ್ರಾತೃತ್ವವನ್ನು ಬೆಳೆಸುವ ಮಹತ್ಕಾರ್ಯವಾಗಿದೆ ಎಂದು ಕುವೆಂಪು ವಿವಿ ಎನ್’ಎಸ್’ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಶುಭ ಮರವಂತೆ ಅಭಿಪ್ರಾಯಪಟ್ಟರು.

ಇಲ್ಲಿನ ತರಲಘಟ್ಟ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ #KumadvatiCollegeOfEducation ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಅವರು ಮಾತನಾಡಿದರು.

ಸೇವೆಯನ್ನು ಮಾಡುವುದು ಸುಲಭದ ಕೆಲಸವಲ್ಲ. ಇಲ್ಲಿ ಭ್ರಾತೃತ್ವವನ್ನು ಬೆಳೆಸುವುದಾಗಿರುತ್ತದೆ. ಗಾಂಧೀಜಿಯವರು ಕಂಡಂತಹ ಗ್ರಾಮದ ಸ್ವರಾಜ್ಯವನ್ನು ಕಂಡುಕೊಳ್ಳುವುದಾಗಿದೆ ಎಂದರು.
ಸರಳ ಜೀವನದಿಂದ ಪ್ರಕೃತಿಯಿಂದ ಎಲ್ಲವನ್ನೂ ಪಡೆಯಬಹುದು. ಮರ, ಗಾಳಿ, ಮತ್ತು ನೀರಿನ ಬಗೆಗೆ ಅರಿವನ್ನು ಮೂಡಿಸುವುದಾಗಿದೆ. ದಾನಗಳಲ್ಲಿ ಶ್ರೇಷ್ಠದಾನ ಶ್ರಮದಾನ, ಎನ್’ಎಸ್’ಎಸ್ ಕಾರ್ಯಕ್ರಮದಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆ, ಸಮುದಾಯದಲ್ಲಿ ಪಾಲ್ಗೊಳ್ಳುವಿಕೆ, ಸಹಕಾರ ಮನೋಭಾವ ಇತ್ಯಾದಿ ಜನಾಂಗೀಯ ಪರಿಕಲ್ಪನೆಗಳನ್ನು ಮೂಡಿಸಿಕೊಳ್ಳುತ್ತೇವೆ ಎಂದರು.

ಗ್ರಾಮದ ಪರಿಕಲ್ಪನೆಗಳನ್ನು ಅರಿತಂತಹ ವಿದ್ಯಾರ್ಥಿಗಳು ಮುಂದಿನ ತಮ್ಮ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಎನ್’ಎಸ್’ಎಸ್ ಕಾರ್ಯಕ್ರಮದಿಂದ ನನಗಲ್ಲ ನಿನಗೆ ಎಂಬ ಧ್ಯೇಯವಾಕ್ಯವನ್ನು ಸಾಕಾರಗೊಳಿಸಲು ಅತ್ಯಂತ ಉತ್ತಮ ವೇದಿಕೆಯು ಇದಾಗಿದೆ ಎಂದರು.ಜಿಲ್ಲಾ ಸಹಕಾರ ಸಂಘದ ನಿರ್ದೇಶಕರಾದ ನಾಗರಾಜ ಸ್ವಾಮಿ ಮಾತನಾಡಿ, ಈ ಕಾರ್ಯಕ್ರಮಕ್ಕೆ ಬಂದಂತಹ ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕುವುದಕ್ಕಿಂತ ಸ್ವಉದ್ಯೋಗವನ್ನು ಮಾಡುವ ಕೈಂಕರ್ಯವನ್ನು ಮಾಡಬೇಕು. ಇಲ್ಲಿ ಸಹಕಾರ, ಸೌಹಾರ್ದತೆ ಬಗೆಗೆ ತಿಳಿಸುತ್ತಾ, ಹಳ್ಳಿಯ ಜೀವನವನ್ನು ಪ್ರೀತಿಸುವ ಹಾಗೂ ರೈತರ ಬದುಕನ್ನು ಉನ್ನತೀಕರಿಸುವ, ಹಿರಿಯರನ್ನು ಗೌರವಿಸುವ, ತಂದೆ ತಾಯಿಯರನ್ನು ಸಾಕುವ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದರು.

ಶಿಬಿರದ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲರೂ ಆದ ಡಾ.ಜಿ.ಎಸ್. ಶಿವಕುಮಾರ್ ಮಾತನಾಡಿ, ಇಂದು ನಾವು ಸ್ವಾರ್ಥದ ಬದುಕನ್ನು ಕಟ್ಟಿಕೊಳ್ಳುವ ಸಂದರ್ಭವನ್ನು ಕಾಣುತ್ತಿದ್ದೇವೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಸಮಾಜದ ಸಾಮಾಜಿಕ, ಆರ್ಥಿಕ, ಮತ್ತು ನಾಗರೀಕ ಸಮಸ್ಯೆಗಳನ್ನು ಅರಿಯುವ ಮತ್ತು ಸಹಬಾಳ್ವೆ ಮತ್ತು ನಾಯಕತ್ವಗುಣಗಳನ್ನು ಮೈಗೂಡಿಸಿಕೊಳ್ಳಲು ನೆರವಾಗುತ್ತದೆ ಎಂದರು.

ಇಂತಹ ಶಿಬಿರಗಳಿಂದ ಜೀವನ ಕೌಶಲ್ಯ ಮತ್ತು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ಅಹಂಕಾರ, ಅನುಮಾನ, ಅಸೂಯೆ ಎಂಬುವ ಮಾನವನ ಮೂರು ಮುಖ್ಯ ಮಾನಸಿಕ ರೋಗಗಳನ್ನು ನಾವು ತೊಡೆದುಹಾಕಬೇಕು. ಚಿಂತೆ ಮತ್ತು ಚಿತೆಗಳ ನಡುವಿನ ವ್ಯತ್ಯಾಸವನ್ನು ಅರಿಯುವ ಮೂಲಕ ಶುದ್ಧವಾಗಿಟ್ಟುಕೊಳ್ಳಬೇಕು ಎಂದರು. ತರಲಘಟ್ಟ ಗ್ರಾಮಪಂಚಾಯ್ತಿ ಅಧ್ಯಕ್ಷರಾದ ಮಂಜಮ್ಮ ಜ್ಞಾನೇಶ್, ಉಪಾಧ್ಯಕ್ಷರಾದ ಕುಮಾರ ನಾಯ್ಕ್ ಇದ್ದರು. ಎನ್’ಎಸ್’ಎಸ್ ಸಂಯೋಜನಾಧಿಕಾರಿ ಎನ್.ಜಿ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ತರಲಘಟ್ಟ ಗ್ರಾಮದ ಮುಖಂಡರುಗಳು ಊರಿನ ನಾಗರೀಕ ಬಂಧುಗಳು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಯಾಗಿ ಮೂಡಿಬಂದಿತು.

ಸುಮ ಮತ್ತು ಸಂಗಡಿಗರು ಪ್ರಾರ್ಥಿಸಿ, ಸಹಾಯಕ ಪ್ರಾಧ್ಯಾಪಕ ಡಾ.ವೈ. ದೇವರಾಜ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಎಚ್. ರವಿ ವಂದನಾರ್ಪಣೆ ಮಾಡಿ, ಪ್ರಶಿಕ್ಷಣಾರ್ಥಿಗಳಾದ ಎಚ್. ನಯನ ಮತ್ತು ಎಸ್. ಕಲ್ಪನಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKuvempu UniversityLatest News KannadaNSSShikaripuraShimogaShivamoggaShivamogga Newsಎನ್ಎಸ್ಎಸ್ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕುವೆಂಪು ವಿಶ್ವ ವಿದ್ಯಾಲಯಗಾಂಧೀಜಿಭ್ರಾತೃತ್ವರಾಷ್ಟ್ರೀಯ ಸೇವಾ ಯೋಜನೆಶಿಕಾರಿಪುರಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ
Share198Tweet123Send
Previous Post

ಮೋದಿ ಹಾದಿಯಲ್ಲಿರುವ ಡಾ. ಸರ್ಜಿ ಭೋಜೇಗೌಡರನ್ನು ಗೆಲ್ಲಿಸಿ: ಎಂಎಲ್’ಸಿ ಭಾರತಿ ಶೆಟ್ಟಿ ಮನವಿ

Next Post

ದೇವರಲ್ಲಿ ಭಕ್ತಿ, ಜ್ಞಾನವನ್ನು ಬೇಡಿದರೆ ಜೀವನಕ್ಕೆ ಮಹಾ ಬೆಳಕು | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇವರಲ್ಲಿ ಭಕ್ತಿ, ಜ್ಞಾನವನ್ನು ಬೇಡಿದರೆ ಜೀವನಕ್ಕೆ ಮಹಾ ಬೆಳಕು | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಲಹೆ

ದೇವರಲ್ಲಿ ಭಕ್ತಿ, ಜ್ಞಾನವನ್ನು ಬೇಡಿದರೆ ಜೀವನಕ್ಕೆ ಮಹಾ ಬೆಳಕು | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL