No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶರಣರ ದಾಸೋಹ ಕಲ್ಪನೆ ಅತ್ಯಂತ ಶ್ರೇಷ್ಠ: ಪ್ರಶಾಂತ ಕುಬಸದ ಅಭಿಮತ

kalpa News by kalpa News
August 22, 2026
in ಶಿಕಾರಿಪುರ
0
Shikaripura sharana-dasoha-concept-social-equality
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  |

ಶರಣರ ದಾಸೋಹ ಕಲ್ಪನೆಯು ಅತ್ಯಂತ ಶ್ರೇಷ್ಠ ಮತ್ತು ವಿಶಿಷ್ಟವಾದುದು. ದಾಸೋಹ ಎಂದರೆ ಕೇವಲ ದಾನವಲ್ಲ, ಸಮಾಜದಲ್ಲಿ ಸಮಾನತೆ ಮತ್ತು ಪ್ರೀತಿಯನ್ನು ಮೂಡಿಸುವ ಮಾರ್ಗವಾಗಿದೆ ಎಂದು ಶಿಕ್ಷಕ ಪ್ರಶಾಂತ ಕುಬಸದ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶಿರಾಳಕೊಪ್ಪ ಘಟಕದ ವತಿಯಿಂದ ಶರಣೆ ಉಮಾದೇವಿ ವೃಷಭೇಂದ್ರ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಶ್ರಾವಣ ಮಾಸದ ‘ಶ್ರವಣಾನುಭವ – ನಮ್ಮ ನಡೆ ಶರಣರ ಕಡೆಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.Kumadvathi College Shikariura

ಶರಣರು ತನು, ಮನ ಮತ್ತು ಧನದ ತ್ರಿದಾಸೋಹ ತತ್ವವನ್ನು ಸಮಾಜಕ್ಕೆ ನೀಡಿದ್ದಾರೆ. ಪ್ರಾಮಾಣಿಕವಾಗಿ ಕಾಯಕ ಮಾಡಿ ಬಂದ ಗಳಿಕೆಯಲ್ಲಿ ದಾಸೋಹ ಮಾಡುತ್ತಿದ್ದರು. ತನಗಾಗಿ ಮಾತ್ರ ಬದುಕದೆ, ಸಮಾಜದ ಹಸಿವು ಮತ್ತು ಕಷ್ಟಗಳಿಗೆ ಸ್ಪಂದಿಸುವುದೇ ದಾಸೋಹದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಾತಿ, ಧರ್ಮ ಮತ್ತು ಲಿಂಗ ಭೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಅನ್ನ ಮತ್ತು ಅರಿವು ನೀಡುವುದು ದಾಸೋಹದ ಪರಿಕಲ್ಪನೆಯಾಗಿದೆ. ‘ನನ್ನದು’ ಎಂಬ ಭಾವನೆಯನ್ನು ಬಿಟ್ಟು, ಎಲ್ಲವೂ ಸಮಾಜಕ್ಕೆ ಸೇರಿದ್ದು ಎಂಬ ಮನೋಭಾವ ಬೆಳೆಸುವುದೇ ಶರಣರ ದಾಸೋಹ ತತ್ವದ ಉದ್ದೇಶವಾಗಿದೆ ಎಂದು ಹೇಳಿದರು.

Also read>> ಮಧ್ಯಮ ವರ್ಗದ ಮನೆ ಕನಸಿಗೆ ಹೊಸ ಭರವಸೆ: ಶಿವಮೊಗ್ಗದಲ್ಲಿ ‘ಬ್ರಿಕ್ ಅಂಡ್ ಸ್ಪೇಸ್’ ಶುಭಾರಂಭ

ಧಾರ್ಮಿಕ ಕಾರ್ಯಕ್ರಮಗಳು ನವ ಸಮಾಜ ನಿರ್ಮಾಣಕ್ಕೆ ಪೂರಕ

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶರಣ ಶಂಭು ಆರ್.ಕೆ. ಮಾತನಾಡಿ, ಇಂದಿನ ಪೋಷಕರು ಮಕ್ಕಳಿಗೆ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡುವುದು ಅಗತ್ಯ ಎಂದರು.

ರಾಮಾಯಣವು ಕುಟುಂಬದ ಪರಿಕಲ್ಪನೆಯನ್ನು ತಿಳಿಸಿದರೆ, ಮಹಾಭಾರತವು ಸಹೋದರತ್ವ ಹಾಗೂ ಸಂಬಂಧಗಳ ಮಹತ್ವವನ್ನು ತಿಳಿಸುತ್ತದೆ. ಧಾರ್ಮಿಕ ಕಾರ್ಯಕ್ರಮಗಳು ನವ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಯುವಜನಾಂಗ ಹೆಚ್ಚಾಗಿ ಭಾಗವಹಿಸಬೇಕು ಎಂದು ತಿಳಿಸಿದರು.PES Shivamogga

ಮನೆಯೇ ಮೊದಲ ಪಾಠಶಾಲೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ಶರಣೆ ಉಮಾದೇವಿ ವೃಷಭೇಂದ್ರ ಮಾತನಾಡಿ, “ಮನೆಯೇ ಮೊದಲ ಪಾಠಶಾಲೆ, ಜನನಿಯೇ ಮೊದಲ ಗುರು” ಎಂಬಂತೆ ಬದಲಾವಣೆ ಮೊದಲು ಮನೆಯಿಂದಲೇ ಆರಂಭವಾಗಬೇಕು ಎಂದರು.

ಮಕ್ಕಳಿಗೆ ಮಹಾನ್ ಪುರುಷರ ಕಥೆಗಳು ಮತ್ತು ಶರಣರ ವಚನಗಳನ್ನು ಕಲಿಸಬೇಕು. ಪ್ರತಿದಿನ ವಚನ ಮತ್ತು ಶ್ಲೋಕಗಳನ್ನು ಹೇಳುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಶರಣರ ಕಾಯಕ ತತ್ವ ಮತ್ತು ದಾಸೋಹ ಕಲ್ಪನೆಯು ಇಂದಿನ ಸಮಾಜಕ್ಕೆ ದಾರಿದೀಪಗಳಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜ್ಯೋತಿ ರಮೇಶ್ ಮಾತನಾಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣ ಚಂದ್ರಶೇಖರ್ ಸುರಹೊನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಸವೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ನಟರಾಜ್ ಸೂರಣಗಿ, ಪ್ರಭುಲಿಂಗಪ್ಪ ಬಿ., ಶರಣ-ಶರಣೆಯರು ಉಪಸ್ಥಿತರಿದ್ದರು.

ಸಂಗೀತ ಶಿಕ್ಷಕ ಮಲ್ಲಿಕಾರ್ಜುನ ಪ್ರಾರ್ಥಿಸಿದರು. ಅಶೋಕ್ ಸ್ವಾಗತಿಸಿದರು. ಮುರುಗೇಶ್ ಶರಣು ಸಮರ್ಪಣೆ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: Sharana DasohaShikaripuraShiralakoppaShravana MasaSocial equalityಶಿರಾಳಕೊಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಧ್ಯಮ ವರ್ಗದ ಮನೆ ಕನಸಿಗೆ ಹೊಸ ಭರವಸೆ: ಶಿವಮೊಗ್ಗದಲ್ಲಿ ‘ಬ್ರಿಕ್ ಅಂಡ್ ಸ್ಪೇಸ್’ ಶುಭಾರಂಭ

Next Post

ಖನಿಜ ಸಂಪತ್ತಿನಿಂದ ಆರ್ಥಿಕ ಭದ್ರತೆ | MMDR ಸುಧಾರಣೆ | ಭಾರತದ ಗಣಿಗಾರಿಕೆ ಕ್ಷೇತ್ರಕ್ಕೆ ಹೊಸ ದಿಕ್ಕು

kalpa News

kalpa News

Next Post
MMDR Act Mining Reforms India Mineral Economic Security

ಖನಿಜ ಸಂಪತ್ತಿನಿಂದ ಆರ್ಥಿಕ ಭದ್ರತೆ | MMDR ಸುಧಾರಣೆ | ಭಾರತದ ಗಣಿಗಾರಿಕೆ ಕ್ಷೇತ್ರಕ್ಕೆ ಹೊಸ ದಿಕ್ಕು

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL