ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕಿನ ಗ್ರಾಮಾಂತರ ಭಾಗದ ಜನರ ಅನುಕೂಲಕ್ಕಾಗಿ ಕೆಎಸ್’ಆರ್’ಟಿಸಿಯ ನೂತನ ಐದು ಬಸ್’ಗಳಿಗೆ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ BJP State President B Y Vijayendra ಚಾಲನೆ ನೀಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ನೂತನ 5 ಬಸ್’ಗಳಿಗೆ ಅವರು ಚಾಲನೆ ನೀಡಿದೆ.
ಈ ವೇಳೆ ಮಾತನಾಡಿದ ಅವರು, ತಾಲೂಕಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಬಸ್ ಸಂಚಾರ ಆರಂಭಿಸಲಾಗಿದೆ ಎಂದರು.
ಶಿಕಾರಿಪುರ ತಾಲೂಕಿಗೆ 30 ಬಸ್ಸುಗಳನ್ನು ಕೇಳಲಾಗಿತ್ತು. ಅದರಲ್ಲಿ ಮೊದಲನೇ ಹಂತದಲ್ಲಿ ಬಿ.ಎಸ್. ಯಡಿಯೂರಪ್ಪನವರು ಜನ್ಮ ದಿನದಂದು 5 ಬಸ್ ಗಳು ಸಂಚರಿಸಲು ಅವಕಾಶ ಮಾಡಿಕೊಟ್ಟ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೂ ಹಾಗೂ ಈ ಬಗ್ಗೆ ವಿಶೇಷ ಪ್ರಯತ್ನವಾಯಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಹಾಗೂ ಅಧಿಕಾರಿಗಳಿಗೆ ವಿಜಯೇಂದ್ರ ಅಭಿನಂದನೆ ಸಲ್ಲಿಸಿದರು.
ಪ್ರಮುಖರಾದ ಕೆ.ಎಸ್. ಗುರುಮೂರ್ತಿ, ಪುರಸಭೆ ಸದಸ್ಯರಾದ ಪಾಲಾಕ್ಷಪ್ಪ ರೇಖಾ ಭಾಯಿ, ಮಂಜು ಸಿಂಗ್, ತಾಲೂಕು ಬಿಜೆಪಿ ನಗರ ಅಧ್ಯಕ್ಷ ಮಾಜಿ ರಾಘು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾದ ಬೆಣ್ಣೆ ಪ್ರವೀಣ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ವೀರಣ್ಣ, ಗುರುಪ್ರಸಾದ್, ವಸಂತ್ ಗೌಡ, ಹಾಗೂ ಪಕ್ಷದ ಮುಖಂಡರು ಯುವಕರು ಕಾರ್ಯಕರ್ತರು ಉಪಸಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post