ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕು ಮಟ್ಟದಲ್ಲಿ ಮೂಲಭೂತ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಮಹತ್ವದ ಸಂಸ್ಥೆಯಾಗಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್. ಮಂಜುನಾಥ್ ಪ್ರಶಂಸಿಸಿದರು.
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ಶಿಕಾರಿಪುರದ ವತಿಯಿಂದ ಆಯೋಜಿಸಲಾಗಿದ್ದ ಅಂಗಸಂಸ್ಥೆಗಳ ವಾರ್ಷಿಕ ಕುಮದ್ವತಿ ಸಾಂಸ್ಕೃತಿಕ ಉತ್ಸವ – 2024 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಹೊಂದಿದೆ. ಉತ್ತಮ ಶಿಕ್ಷಣ ನೀಡುತ್ತಿರುವ ಮಹತ್ವದ ವಿದ್ಯಾಸಂಸ್ಥೆಯಾಗಿದೆ. ಶಿಕ್ಷಕರು ಶಾಲೆಗಳಲ್ಲಿ ಎಷ್ಟೇ ಓದಿಸಬಹುದು. ಆದರೆ, ಮನೆಯಲ್ಲಿ ಅಮ್ಮ ಹೇಳಿಕೊಡುವ ವಿದ್ಯೆ ಬಹಳ ಪ್ರಮುಖವಾದದ್ದು. ಓದುವಾಗ ಮಕ್ಕಳಿಗೆ ಟಿವಿ ಧಾರವಾಹಿಗಳ ಗೀಳನ್ನು ಕಡಿಮೆ ಮಾಡಿ ಓದಿನ ಕಡೆ ಹೆಚ್ಚು ಒಲವನ್ನು ಮೂಡಿಸಬೇಕಾಗಿದೆ ಎಂದರು.

Also read: ಜೋಗ ಜಲಪಾತಕ್ಕೆ ಹೋಗುವ ಪ್ಲಾನ್ ಮಾಡ್ತಿದಿರಾ? ಹಾಗಾದ್ರೆ ಈ ಸುದ್ದಿ ಓದಲೇಬೇಕು
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಲೋಕೇಶಪ್ಪ ಮಾತನಾಡಿ, ಕೆಲವು ವರ್ಷಗಳ ಹಿಂದೆ ಮಕ್ಕಳ ಕೈಯಲ್ಲಿ ಗೊಂಬೆ ಕೊಡುವ ಪದ್ಧತಿ ಇತ್ತು. ಆದರೆ ಇಂದು ಮೊಬೈಲ್ ಕೊಡುವ ಸಂಪ್ರದಾಯ ಬೆಳೆಯುತ್ತಿದೆ. ಇದರಿಂದ ಮಕ್ಕಳಲ್ಲಿ ಹಠ, ಸಿಟ್ಟು, ಮಾನಸಿಕ ಉದ್ವೇಗಗಳು ಹೆಚ್ಚಾಗುತ್ತಿವೆ. ಇಂದು ಮಕ್ಕಳಲ್ಲಿ ಇನ್ನೊಬ್ಬರೊಂದಿಗೆ ಸ್ಪಂದಿಸುವ ನೈತಿಕ ಗುಣಗಳು ಕಡಿಮೆಯಾಗಿ ಕೇವಲ ವೈಯಕ್ತಿಕ ಹಿತಾಸಕ್ತಿಗಳ ಕಡೆಗೆ ಗಮನ ಹರಿಸುವಂತಾಗುತ್ತಿರುವುದು ದುರಂತ ಎಂದರು.
ಮಾನವೀಯ ಮೌಲ್ಯಗಳು ಕಡಿಮೆಯಾಗಿ ಆನ್ಲೈನ್, ಡಿಜಿಟಲ್’ನಂತಹ ಸಂಪರ್ಕಗಳಿಗೆ ಮೊನೇಷನ್ ಕಟ್ಟಿ ನೀಡುತ್ತೇವೆ. ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ಅದೇ ಹಣದಿಂದ ತಂದೆ ತಾಯಿಯರನ್ನು ವೃದ್ಧಾಶ್ರಮದಲ್ಲಿಟ್ಟು ನೋಡಿಕೊಳ್ಳುವ ಮನಸ್ಥಿತಿಗೆ ಬಂದಿದ್ದಾರೆ. ಇಂದಿನ ಜಗತ್ತು ಬದಲಾಗುತ್ತಿರುವುದನ್ನು ಹೋಗಲಾಡಿಸಬೇಕಾದರೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಗುವನ್ನು ನಿರಂತರ ತೊಡಗಿಸಬೇಕು ಎಂದು ತಿಳಿಸಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್ ಅವರು ಬಹುಮಾನವನ್ನು ನೀಡುವುದರ ಮೂಲಕ ಪ್ರೋತ್ಸಾಹ ನೀಡಿದರು.
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳು, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪ್ರಾಂಶುಪಾಲ ಡಾ.ಜಿ.ಎಸ್. ಶಿವಕುಮಾರ್ ಆಶಯನುಡಿಗಳನ್ನು ಆಡಿದರು. ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ಉಪಪ್ರಾಚಾರ್ಯ ಎಚ್.ಡಿ. ಪ್ರಶಾಂತ್ ಸ್ವಾಗತಿಸಿದರು.
ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ಶಿಕ್ಷಕಿ ಸಂಗೀತಾ ಗೊಂದಿ ನಿರೂಪಿಸಿದರು.
ಸಂಸ್ಥೆಯ ಸಮನ್ವಯಾಧಿಕಾರಿಗಳಾದ ಕೆ. ಕುಬೇರಪ್ಪ, ಸಂಸ್ಥೆಗಳ ಮುಖ್ಯಸ್ಥರು, ಪ್ರಾಚಾರ್ಯರು, ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ವೇದಿಕೆಯ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post