ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಆಧುನಿಕ ಶಿಕ್ಷಣದಲ್ಲಿ ಶಿಕ್ಷಕರು ಹೊಸ ಹೊಸ ಕಲಿಕಾ ಕೌಶಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಆದ ಡಾ.ಜಿ.ಎಸ್. ಶಿವಕುಮಾರ್ ಅಭಿಪ್ರಾಯಪಟ್ಟರು.
ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ನಡೆದ ಧನಾತ್ಮಕ ಶಿಸ್ತು ಮತ್ತು ನಡವಳಿಕೆ ನಿರ್ವಹಣೆ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದೊಂದು ಮಗುವು ತನ್ನದೇ ಆದ ಪ್ರತಿಭೆ ಹೊಂದಿರುತ್ತದೆ. ಆ ಮಕ್ಕಳ ಪ್ರತಿಭೆ ಗುರುತಿಸಿ ಅವರ ಸಾಧನೆಗೆ ಮಾರ್ಗದರ್ಶನ ನೀಡುವ ಯಶಸ್ವಿ ಶಿಕ್ಷಕನಾಗುವ ಮೂಲಕ ಆದರ್ಶ ಶಿಕ್ಷಕನಾಗಬಹುದು ಎಂದು ಮಾತನಾಡಿದರು.
Also read: ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ
ಶಾಲೆಯ ಪ್ರಾಚಾರ್ಯರಾದ ಎಚ್.ಡಿ. ಪ್ರಶಾಂತ್, ಸಂಪನ್ಮೂಲ ವ್ಯಕ್ತಿಗಳಾದ ರೂಪ ಕಟ್ಟಿ ಹಾಗೂ ಕಿರಣ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೋ – ಅರ್ಡಿನೇಟರ್ಸ್ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.
ಸಂಗೀತ ಶಿಕ್ಷಕಿ ಸುನೀತಾ ಪ್ರಾರ್ಥಿಸಿ, ಕೋ-ಆರ್ಡಿನೇಟರ್ ಕಾವ್ಯ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ಪ್ರಿಯಾ ವಂದಿಸಿ, ಆರೀಫ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















