ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪಟ್ಟಣದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿ, 50 ಲಕ್ಷ ವೆಚ್ಚದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ. ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಹಲಿಂಗಪ್ಪ, ಮಲ್ಲಿಕಾರ್ಜುನ ಆಚಾರ್, ಸರಳಮ್ಮ, ಹಾಲಪ್ಪ, ಸಮಾಜದ ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post