ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಿಮಗಾಗಿ ನೀವು ಆಸಕ್ತಿಯಿಂದ ಓದಿದಂತ ಮಾತ್ರ ಭವಿಷ್ಯ ಉಜ್ವಲವಾಗಲು ಸಾಧ್ಯ ಹಾಗೂ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಉತ್ತಮ ಸಂಸ್ಕಾರವನ್ನ ಅಳವಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ. ವೀರೇಂದ್ರ ತಿಳಿಸಿದರು.
ಅವರು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ ಹಾಗೂ ಸರಸ್ವತಿ ಪೂಜೆಯಲ್ಲಿ ಭಾಗಿಯಾಗಿ ಮಾತನಾಡಿದರು
ವಿದ್ಯಾರ್ಥಿಗಳು ಗುರುಹಿರಿಯರು ಹಾಗೂ ತಂದೆ ತಾಯಿಗಳನ್ನು ಗೌರವಿಸುವ ಸಂಸ್ಕಾರವನ್ನು ಅಳವಡಿಸಿಕೊಳ್ಳಬೇಕು. ಅವರ ಆಶೀರ್ವಾದ ಸಹಕಾರದಿಂದ ಮುಂದೆ ಏನನ್ನಾದರೂ ಸಾಧಿಸಬಹುದೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಜ್ಞಾನ ವಿಭಾಗದ ಮುಖ್ಯಸ್ಥ ರಾದ ಪರ್ವೀಜ್ ಅಹ್ಮದ್ ಮಾತನಾಡಿ ಜಗತ್ತಿನನ್ನು ಬದಲಿಸುವ ಶಕ್ತಿ ಇರುವುದು ಜ್ಞಾನ ಅಂತ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದುಕೊಂಡಾಗ ಮಾತ್ರ ಸಮಾಜದಲ್ಲಿ ಅವರು ಸಂಪಾದಿಸಬಹುದೆಂದು ಅಭಿಪ್ರಾಯಿಸಿದರು.
ಉತ್ತಮ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಕೆಲಸವಾಗಿದ್ದು ಅದನ್ನು ವ್ಯವಸ್ಥಿತ ರೀತಿಯಲ್ಲಿ ಸಾರ್ಥಕ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಈ ಕಾರ್ಯಕ್ರಮದ ಪ್ರಾರ್ಥನೆಯನ್ನು ಕು. ಕೀರ್ತನ ನೆರವೇರಿಸಿದರೆ ಉಪನ್ಯಾಸಕಿ ಮೇಘನಾ ಸ್ವಾಗತ ಕೋರಿದರು. ಕು. ಚಂದ್ರಿಕಾ ಹೊಂದಿಸಿದರೆ, ಕುಮಾರಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿದರು. ಈ ವಿನೂತನ ಕಾರ್ಯಕ್ರಮದಲ್ಲಿ ದೇವರಾಜ್ ಶಿವರಾಜ್ ಚಂದ್ರಶೇಖರ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post