ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ (ಶಿವಮೊಗ್ಗ) |
ಶಿಕ್ಷಕರು (Teacher) ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಮುಂದಿನ ರಾಷ್ಟ್ರ ನಿರ್ಮಾಣದ ನಿರ್ಮಾಪಕರಾಗಿದ್ದಾರೆ ಎಂದು (Shikaripura) ಶಿಕಾರಿಪುರ ಮೈತ್ರಿ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ಪಿ. ಅಭಿಪ್ರಾಯಪಟ್ಟರು.
ಮೈತ್ರಿ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Shikaripura : ಶಿಕ್ಷಕರು ವೃತ್ತಿ ಘನತೆ ಅರಿತು ಕರ್ತವ್ಯ ನಿರ್ವಹಿಸಿ
ಭಾರತದ ಶ್ರೇಷ್ಠ ಶಿಕ್ಷಕ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಸ್ಮರಿಸಿದ ಅವರು, ಶಿಕ್ಷಕರು ತಮ್ಮ ವೃತ್ತಿಯ ಘನತೆಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ವರ್ಷಿಣಿ, ಶ್ರೀಯಾ ಹಾಗೂ ಗಾನವಿ ವಾಲಿ ಮಾತನಾಡಿ, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜೀವನ, ಶಿಕ್ಷಕರ ಸೇವೆ ಹಾಗೂ ಅವರ ಸಮರ್ಪಣಾ ಮನೋಭಾವವನ್ನು ಸ್ಮರಿಸಿದರು.
Also read>> ಶಿಕಾರಿಪುರ| KRCS ವತಿಯಿಂದ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ರೇಷ್ಮಾ ಬಾನು ಹಾಗೂ ಪಾರ್ವತಿ ಸೇರಿದಂತೆ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚೇತನ ಹಾಗೂ ತಂಡದವರು ಪ್ರಾರ್ಥಿಸಿದರು. ಪ್ರಶಾಂತ್ ಸ್ವಾಗತಿಸಿದರು. ಚನ್ನವೀರಯ್ಯ ವಂದಿಸಿದರು. ಅಭಿಜ್ಞ ಹಾಗೂ ನಿಖಿತಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









