ಶಿಕಾರಿಪುರ: ನರೇಂದ್ರ ಮೋದಿಯಂತಹ ಪುಣ್ಯಾತ್ಮ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ, ಬಿಜೆಪಿಯನ್ನು ಬೆಂಬಲಿಸಿ ಎಂದು ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಈಸೂರು ಹಾಗೂ ಚಿಕ್ಕಜೋಗಿಹಳ್ಳಿಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಬಡವರ ರೈತರ, ದೀನ ದಲಿತರ ಉದ್ಧಾರಕ್ಕಾಗಿ ದೇಶದ ರಕ್ಷಣೆಗಾಗಿ ತನ್ನ ಜೀವನವನ್ನೇ ಜನರ ಸೇವೆಗೆಂದು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ನಮ್ಮ ದೇಶಕ್ಕೆ ಅವಶ್ಯಕತೆ ಇದೆ ಎಂದರು.
ಮಹಾನ್ ಪುಣ್ಯಾತ್ಮ ವ್ಯಕ್ತಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಏರಬೇಕು. ಇದಕ್ಕೆ ಶಿಕಾರಿಪುರ ಕ್ಷೇತ್ರದ ಜನತೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.
ಶಿಕಾರಿಪುರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿಗಳಾಗಿವೆ. ಬಿ.ಎಸ್. ಯಡಿಯೂರಪ್ಪನವರ ಅಧಿಕಾರದಲ್ಲಿ ಮತ್ತು ನಾನು ಸಂಸದನಾದ ಸಂದರ್ಭದಲ್ಲಿ ನೀರಾವರಿ ಯೋಜನೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಅರುಂಧತಿ ರಾಜೇಶ್, ಭೂಕಾಂತ್, ದಯಾನಂದ್, ರುದ್ರಮುನಿ, ಶಶಿಧರ, ನಾಗರಾಜ್ ಇನ್ನು ಅನೇಕ ಮುಖಂಡರು ಇದ್ದರು.
Discussion about this post