ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappa Nayaka University of Agriculture and Horticulture ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024-25ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಬೆಳೆ ಸಂಗ್ರಹಾಲಯವನ್ನು, ವಿಧಾನಸಭಾ ಸದಸ್ಯ ಬಿ.ವೈ. ವಿಜಯೇಂದ್ರ ವಸ್ತು ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಗದೀಶ್ ರವರು ಮತ್ತು ವಿವಿಧ ಕೃಷಿ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

Also read: ಮಾರಕಾಸ್ತ್ರದಿಂದ ಯುವಕನಿಗೆ ಹಲ್ಲೆ
ಸುಮಾರು 100 ಕ್ಕೂ ಹೆಚ್ಚು ಮಳಿಗೆಗಳು ಇರುತ್ತದೆ. ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಜೊತೆ ಚರ್ಚಾಗೋಷ್ಠಿಯನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಆಯೋಜಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post