ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ ಮತ್ತು ಇದು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಜಡೆ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಮ ನಿ ಪ್ರ ಮಹಾಂತ ಸ್ವಾಮಿಗಳು ತಿಳಿಸಿದರು.
ನಗರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ 11ನೆಯ ವಿಶ್ವ ಯೋಗ ದಿನಾಚರಣೆಯ #International Yoga Day ದಿವ್ಯ ಸಾನಿಧ್ಯ ವಹಿಸಿ ಯೋಗದ ಪ್ರಾತ್ಯಕ್ಷಿಕೆಯೊಂದಿಗೆ ಯೋಗದ ಮಹತ್ವವನ್ನು ತಿಳಿಸಿದರು.
ಯೋಗವು ಪ್ರಾಚೀನ ಕಾಲದಲ್ಲಿ ಋಷಿಮುನಿಗಳು ನೀಡಿದ ಉಡುಗೊರೆಯಾಗಿದೆ.ಯೋಗವು ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಏಕಾಗ್ರತೆ ಮತ್ತು ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹವನ್ನು ಬಲಪಡಿಸುತ್ತದೆ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ, ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಯೋಗಕ್ಷೇಮವನ್ನು ಹೆಚ್ಚಿಸಬಹುದು. ಯೋಗವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ರೋಗಗಳ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ. ಒಟ್ಟಾರೆಯಾಗಿ, ಯೋಗವು ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುವ ಒಂದು ಶಕ್ತಿಯುತ ಸಾಧನವಾಗಿದೆ. ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ಹೆಚ್ಚಿಸಬಹುದು.
ವಿದ್ಯಾರ್ಥಿಗಳು ಮುಂಜಾನೆ ಒಂದು ಅಥವಾ ಅರ್ಧ ಘಂಟೆ ಯೋಗವನ್ನು ಮಾಡಬೇಕು.ಇದು ನಿಮ್ಮ ವಿದ್ಯಾಭ್ಯಾಸಕ್ಕೆ ಅನುಕೂಲ ವಾಗುತ್ತದೆ.ಆಹಾರದಲ್ಲಿ ಎಣ್ಣೆಯುಕ್ತವಾದ ಪದಾರ್ಥಗಳನ್ನು ತ್ಯೆಜಿಸಬೇಕು.ನಮ್ಮ ದೇಹವೆ ಒಂದು ವಿಜ್ಞಾನದ ಆವಿಷ್ಕಾರದ ಬಿಡಾಲಾಗಿದೆ.ನಮ್ಮೂಳಗೆ ಆಗಾಧವಾದ ಶಕ್ತಿಯಿದೆ.ಅದನ್ನು ಬಳಸಿಕೊಳ್ಳುವುದರ ಮೂಲಕ ಯೋಗದ ಶಕ್ತಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಸಂಸ್ಥೆಯ ಆಡಳಿತ ಪ್ರತಿನಿಧಿಗಳಾದ ಶಿವಕುಮಾರ ಜಿ.ಎಸ್ ರವರು. ಶ್ರೀಗಳವರು ಭಕ್ತರ ಮನಸ್ಸುಗಳನ್ನು ಗೆದ್ದಿರುವ ಮಹಾನ್ ತಪಸ್ವಿಗಳಾಗಿದ್ದು ಸಂಪ್ರದಾಯಗಳ ಗಣಿಯಾಗಿದ್ದಾರೆ.
ಉತ್ತಮ ಯೋಗ ಪಟುಗಳಾಗಿದ್ದು ಶ್ರೀಲಂಕಾ ಸರ್ಕಾರದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಯೋಗದಿಂದ ಸರ್ವವೂ ಸಿದ್ಧಿಯಾಗಿದೆ.ಯೋಗವು ಪ್ರಕೃತಿಯ ಕೊಡುಗೆ ಶಾಂತಿ, ನೆಮ್ಮದಿ ಮತ್ತು ಆರೋಗ್ಯ ವೃದ್ಧಿಗೆ ಸಾಧನವಾಗಿದೆ.ಯೋಗದಿಂದ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ.ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಯೋಗ ದಿನವನ್ನು ಆಚರಿಸುತ್ತೀವೆ.ಇದು ಭಾರತ ವಿಶ್ವಕ್ಕೆ ನೀಡಿರುವ ದೊಡ್ಡ ಕೊಡುಗೆಯಾಗಿದೆ.2025 ರ ಅಂತರರಾಷ್ಟ್ರೀಯ ಯೋಗ ದಿನದ ಥೀಮ್: ‘ಒಂದು ಭೂಮಿಗೆ, ಒಂದು ಆರೋಗ್ಯಕ್ಕಾಗಿ ಯೋಗ’ಎಂದಾಗಿದೆ. ಎಲ್ಲರೂ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಸಮನ್ವಯ ಅಧಿಕಾರಿಗಳಾದ ಕುಬೇರಪ್ಪ, ಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಚಾರ್ಯರಾದ ವಿಶ್ವನಾಥ,ವಿದ್ಯಾ ಶಂಕರ, ವೀರೆಂದ್ರ,ರವೀಂದ್ರ, ಸಿದ್ದೇಶ್ವರ, ಪ್ರಶಾಂತ್, ಪ್ರಶಾಂತ ಕುಬಸದ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆ.ಆರ್ .ಸಿ.ಎಸ್ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ರವರು ಸ್ವಾಗತಿಸಿ,ಶಿಕ್ಷಕಿಯರಾದ ವಿಕ್ಟೋರಿಯಾ ವಂದಿಸಿ . ರೇಖಾ ರವರು ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post