Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಿಲಿಕಾನ್ ಸಿಟಿಯಲ್ಲಿ ಶಿವಮೊಗ್ಗದ ಚಿತ್ರಕಾರ ನಂಜುಂಡಸ್ವಾಮಿಯವರ ವ್ಯಂಗ್ಯ ಚಿತ್ರ ಪ್ರದರ್ಶನ | ವಿಶೇಷ ಸಂದರ್ಶನ

November 8, 2024
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸಂದರ್ಶನ ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ  |

ರಾಜ್ಯ ಹಾಗೂ ರಾಷ್ಟ್ರಕ್ಕೆ ಅನೇಕ ಸಾಧಕರು ಮಲೆನಾಡಿನ ಮಡಿಲಿನಿಂದ ಹೊರಹೊಮ್ಮಿದ್ದು ಅನೇಕರು ದೇಶದ ಹಲವು ಕ್ಷೇತ್ರಗಳಲ್ಲಿ ಅಪರಿಮಿತ ಸೇವೆ ಸಲ್ಲಿಸುತ್ತಿದ್ದಾರೆ.

ಸಾಮಾನ್ಯವಾಗಿ ಸಾಧಿಸುವ ಛಲವಿರುವ ಮಂದಿ ಸಾಧನೆಯ ಹಿಂದೆ ಓಡುತ್ತಲೇ ಇರುತ್ತಾರೆ. ಗುರಿ ತಲುಪಲು ಊಟ, ನಿದ್ದೆಗಳನ್ನು ತ್ಯಜಿಸಿ, ಅವಿರತ ಶ್ರಮಿಸುತ್ತಲೇ ಇದ್ದರೂ, ಸಾಧನೆಯನ್ನು ಒಲಿಸಿಕೊಳ್ಳುವಲ್ಲಿ ಹಲವರು ಹಿಂದೆ ಬೀಳುತ್ತಾರೆ. ಆದರೆ, ಎಲ್ಲ ರೀತಿಯ ಅಡೆತಡೆಗಳನ್ನು ಮೆಟ್ಟಿನಿಂತು ಇಂದು ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಲೆನಾಡಿನ ವ್ಯಂಗ್ಯ ಚಿತ್ರಕಾರ ನಂಜುಂಡಸ್ವಾಮಿ ಅವರು ಎಲ್ಲರಿಗೂ ಮಾದರಿ.

ಇಂತಹ ಕಲಾವಿದರು ಚಿತ್ರಿಸಿದ ವ್ಯಂಗ್ಯಚಿತ್ರಗಳ ಪ್ರದರ್ಶನ ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್’ನಲ್ಲಿ ನಡೆಯುತ್ತಿದೆ. ಇದನ್ನು ವೀಕ್ಷಿಸಲು ಹೋದಾಗ ಮಾತಿಗೆ ಸಿಕ್ಕ ನಂಜುಂಡಸ್ವಾಮಿ ಅವರು ಮಲೆನಾಡಿನ ಶಿವಮೊಗ್ಗದವರು ಎಂದು ತಿಳಿದಾಗ ಮನಸ್ಸಿನಲ್ಲಿ ಏನೋ ಒಂದು ರೀತಿ ವ್ಯಕ್ತಪಡಿಸಲಾಗದ ಆನಂದ!!
ಸುಮಾರು 8 ವರ್ಷಗಳಿಂದ ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು, ನಾಲ್ಕು ಏಕವ್ಯಕ್ತಿ ಪ್ರದರ್ಶನ, ಹಲವು ಗ್ರೂಪ್ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ.

ಕಳೆದ ಎರಡು ದಶಕಗಳಿಂದ ತಮ್ಮ ಆಕರ್ಷಣೀಯ ರೇಖೆಗಳ ಮೂಲಕ ವ್ಯಂಗ್ಯಚಿತ್ರ ರಚಿಸಿಕೊಂಡು ಬಂದಿರುವ ಶಿವಮೊಗ್ಗ ಮೂಲದ ಕಲಾವಿದ ನಂಜುಂಡಸ್ವಾಮಿ ಅವರ ಕಲಾಪ್ರದರ್ಶನ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಕಲಾಗ್ಯಾಲರಿಯಲ್ಲಿ ನಡೆಯುತ್ತಿದೆ.

90ಕ್ಕೂ ಹೆಚ್ಚು ಸಾಹಿತಿಗಳ ವಿವಿಧ ಭಾವಗಳ ಕ್ಯಾರಿಕೇಚರ್ ಪ್ರದರ್ಶಿಸಲ್ಪಟ್ಟಿವೆ. ವಿಭಿನ್ನ ಮಾಧ್ಯಮಗಳಲ್ಲಿ ರಚಿಸಿರುವ ಚಿತ್ರಗಳು ಪ್ರದರ್ಶನದಲ್ಲಿದೆ.

ನಂಜುಂಡಸ್ವಾಮಿ ಅವರ ರೇಖೆಯಲ್ಲಿನ ಶಕ್ತಿ ಪ್ರತಿಯೊಂದು ಸಾಹಿತಿಗಳ ಭಾವಕ್ಕೆ ಇನ್ನಷ್ಟು ಮೆರಗು ತಂದಿದೆ. ಆಯಾ ಸಾಹಿತಿಗಳಲ್ಲಿ ಕಾಣಬಹುದಾದ ಕೆಲ ವಿಶೇಷ ಗುಣಗಳು ಕಣ್ಣೆದುರು ನಿಲ್ಲುವ ರೀತಿಯಲ್ಲಿ ರಚಿಸಿದ್ದಾರೆ.
ಕನ್ನಡದ ಪ್ರಸಿದ್ಧ ಕವಿಗಳಾದ ಕುವೆಂಪು, ಪು.ತಿ. ನರಸಿಂಹಾಚಾರ್, ಜೆ.ಪಿ. ರಾಜರತ್ನಂ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ತ್ರಿವೇಣಿ, ಟಿ.ಪಿ. ಕೈಲಾಸಂ, ಹಾಗೂ ನಾಡಿನ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು, ಮಲೆನಾಡಿನ ಗಾಯಕರಾದ ಗರ್ತಿಕೆರೆ ರಾಘಣ್ಣ, ಪರಿಸರ ಮಾತೆ ಸಾಲುಮರದ ತಿಮ್ಮಕ್ಕ ಹಾಗೂ ಚಲನಚಿತ್ರ ನಟರಾದ ರಾಜ್ ಬಿ. ಶೆಟ್ಟಿ ಹಾಗೂ ನಾಡಿನ ಮೈಸೂರು ಅನಂತಸ್ವಾಮಿ, ಜಿ.ಆರ್. ವಿಶ್ವನಾಥ್, ಸುಧಾಮೂರ್ತಿ, ಗೋಪಾಲಕೃಷ್ಣ ಅಡಿಗ ಎಚ್.ಎಸ್. ವೆಂಕಟೇಶ್ ಮೂರ್ತಿ ಮತ್ತು ರಾಜಕುಮಾರ್, ಪುನೀತ್ ರಾಜಕುಮಾರ್, ವಿಶ್ವೇಶ್ವರಯ್ಯ, ನಿಸಾರ್ ಅಹ್ಮದ್, ಅನಂತನಾಗ್, ಸಿ. ಅಶ್ವಥ್ ಹೀಗೆಯೇ ಬರೆಯುತ್ತಾ ಹೋದರೆ ನಂಜುಂಡಸ್ವಾಮಿ ಅವರ ಕೈಯಲ್ಲಿ ಅರಳಿದ ಚಿತ್ರಗಳ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ನೂರಾರು ಚಿತ್ರಗಳು ನಂಜುಂಡಸ್ವಾಮಿಯವರ ಕುಂಚದಲ್ಲಿ ಅಚ್ಚುಕಟ್ಟಾಗಿ ಚಿತ್ರಸಲ್ಪಟ್ಟಿದ್ದು, ಇದು ಅವರ ಕಲಾ ನೈಪುಣ್ಯತೆ, ವಿನೂತನ ಶೈಲಿ ಹಾಗೂ ಕಲಾವಿದ ತನ್ನ ಕುಂಚದಲ್ಲಿ ಹೇಗೆ ಅರಳಿಸಬಲ್ಲ ಎಂಬುದಕ್ಕೆ ಇವರ ಚಿತ್ರೀಗಳೇ ಸಾಕ್ಷಿ, ಇಂತಹ ವಿಶೇಷ ರೇಖಾಚಿತ್ರಗಳನ್ನು ಎಲ್ಲರೂ ಹೋಗಿ ಒಮ್ಮೆ ನೋಡಿ ಬರಬೇಕು ಎಂಬುದು ಕಲ್ಪ ಮೀಡಿಯಾ ಹೌಸ್ ಆಶಯ.
ಈ ಪ್ರತಿಭಾನ್ವಿಕ ಕಲಾವಿದರೊಂದಿಗೆ ಕಲ್ಪ ಮೀಡಿಯಾ ಹೌಸ್ ವಿಶೇಷ ಸಂದರ್ಶನ ನಡೆಸಿದ್ದು, ಅದರ ವಿವರಗಳ ಓದುಗರಿಗೆ ಅರ್ಪಣೆ.

ಕಲ್ಪ ಮೀಡಿಯಾ ಹೌಸ್: ನಿಮ್ಮ ಪರಿಚಯ ತಿಳಿಸಿ?
ನಂಜುಂಡಸ್ವಾಮಿ: ನಾನು ಶಿವಮೊಗ್ಗದಲ್ಲಿ 1964ರ ನವೆಂಬರ್ 4ರಂದು ಜನಿಸಿದೆ. ನನ್ನ ತಂದೆ ಶ್ರೀ ವೈ.ಕೆ. ಶ್ರೀಕಂಠಯ್ಯ ಹಾಗೂ ತಾಯಿ ಶ್ರೀಮತಿ ಲಕ್ಷ್ಮೀದೇವಿ.

ಕಲ್ಪ ಮೀಡಿಯಾ ಹೌಸ್: ನಿಮ್ಮ ಈ ಕಲೆಗೆ ಗುರು ಯಾರು?
ನಂಜುಂಡಸ್ವಾಮಿ: ನನ್ನ ಈ ಚಿತ್ರಕಲೆಗೆ ತಂದೆಯೇ ಮೊದಲ ಗುರುಗಳು. ನಂತರ ಶಿಲ್ಪಿ ಕೆ. ಜ್ಞಾನೇಶ್ವರ್ ಅವರಲ್ಲಿ ಹೆಚ್ಚಿನ ತರಬೇತಿ ಪಡೆದೆ. ಆನಂತರ ವ್ಯಂಗ್ಯಚಿತ್ರರಚನೆಗೆ ಹಿರಿಯ ವ್ಯಂಗ್ಯ ಚಿತ್ರಕಾರ ಗುಜ್ಜಾರ್ ಮಾರ್ಗದರ್ಶನ ಮಾಡಿದ್ದಾರೆ.

ಕಲ್ಪ ಮೀಡಿಯಾ ಹೌಸ್: ನಿಮ್ಮ ವಿದ್ಯಾಭ್ಯಾಸ?
ನಂಜುಂಡಸ್ವಾಮಿ: ಕಮರ್ಷಿಯಲ್ ಆರ್ಟ್ಸ್, ಫೈನ್ ಆರ್ಟ್ಸ್, ಸಾಂಪ್ರದಾಯಿಕ ಕಲೆ.

ಕಲ್ಪ ಮೀಡಿಯಾ ಹೌಸ್: ಎಷ್ಟನೇ ವಯಸ್ಸಿನಿಂದ ಚಿತ್ರಕಲೆ ರಚನೆ ಆರಂಭಿಸಿದಿರಿ?
ನಂಜುಂಡಸ್ವಾಮಿ: ನನ್ನ 17ನೇ ವಯಸ್ಸಿನಿಂದಲೇ ಈ ಕಲೆಯನ್ನು ವೃತ್ತಿಯಾಗಿ ಸ್ವೀಕರಿಸಿದ್ದೇನೆ.

ಕಲ್ಪ ಮೀಡಿಯಾ ಹೌಸ್: ಯಾವೆಲ್ಲಾ ಪತ್ರಿಕೆಗಳಲ್ಲಿ ನಿಮ್ಮ ವ್ಯಂಗ್ಯ ಚಿತ್ರಗಳು ಪ್ರಕಟಗೊಂಡಿವೆ?
ನಂಜುಂಡಸ್ವಾಮಿ: ತರಂಗ, ಸುಧಾ, ತುಷಾರ, ಮಯೂರ, ವಿಜಯವಾಣಿ, ವಿಶ್ವ ವಾಣಿ, ವಿಜಯಕರ್ನಾಟಕ, ಸಂಯುಕ್ತ ಕರ್ನಾಟಕ, ಹಲವು ಪತ್ರಿಕೆಗಳಲ್ಲಿ ಹಾಗು ಹಲವು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಕಲ್ಪ ಮೀಡಿಯಾ ಹೌಸ್: ಯಾವೆಲ್ಲಾ ಪ್ರಶಸ್ತಿಗಳು ನಿಮಗೆ ಸಂದಿವೆ?
ನಂಜುಂಡಸ್ವಾಮಿ: ಪ್ರತಿಷ್ಠಿತ ಮಾಯಾ ಕಾಮತ್ ಪ್ರಶಸ್ತಿ ಅಲ್ಲದೆ ಹಲವು ಪ್ರಶಸ್ತಿಗಳು, ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಬಹುಮಾನಗಳು ಬಂದಿರುತ್ತೆ. ಅನೇಕ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: CartoonistIndian Institute of World CultureKannada News WebsiteLatest News Kannadaಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ಕಾರ್ಟೂನಿಸ್ಟ್ನಂಜುಂಡಸ್ವಾಮಿರಾಜ್ಯರಾಷ್ಟ್ರವ್ಯಂಗ್ಯ ಚಿತ್ರಕಾರಸಿಲಿಕಾನ್ ಸಿಟಿ
Previous Post

ಹಾಡೋನಹಳ್ಳಿಯಲ್ಲಿ ಹೆಚ್ಚಿದ ಅಡಿಕೆ ಕಳ್ಳತನ | ರೈತರ ಆತಂಕ | ಕ್ರಮಕ್ಕೆ ಆಗ್ರಹ

Next Post

ಶಿವಮೊಗ್ಗ ಹಾಲು ಒಕ್ಕೂಟ ಮಾರುಕಟ್ಟೆ ವಿಭಾಗದ ಅವ್ಯವಹಾರ ತನಿಖೆ ನಡೆಸಿ: ಬಿಜಿಪಿ ರೈತ ಮೋರ್ಚಾ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಹಾಲು ಒಕ್ಕೂಟ ಮಾರುಕಟ್ಟೆ ವಿಭಾಗದ ಅವ್ಯವಹಾರ ತನಿಖೆ ನಡೆಸಿ: ಬಿಜಿಪಿ ರೈತ ಮೋರ್ಚಾ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!